ಕ್ರೀಡೆ

DC v/s LSG: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು

ವಿಶಾಖಪಟ್ಟಣ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಆವೃತ್ತಿಯ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎದುರಾಗಲಿದ್ದು, ಉಭಯ ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಡೆಲ್ಲಿ ತಂಡಕ್ಕೆ ವಿಶಾಖಪಟ್ಟಣ ಕ್ರೀಡಾಂಗಣವು ಎರಡನೇ ತವರು ಮೈದಾನವಾಗಿದೆ. ಅಂಕಿ-ಅಂಶಗಳ ಲೆಕ್ಕಚಾರದಲ್ಲಿ ಉಭಯ ತಂಡಗಳು ಬಲಿಷ್ಠವಾಗಿದೆ.

ಡೆಲಿ ತಂಡಕ್ಕೆ ಫಾಫ್‌ ಡುಪ್ಲೆಸಿಸ್‌ ಅವರ ಆಗಮನದಿಂದ ಬ್ಯಾಟಿಂಗ್‌ ಬಲ ಹೆಚ್ಚಾಗಿದೆ. ಜೊತೆಗೆ ಯುವ ಆಟಗಾರ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌, ಕರುಣ್‌ ನಾಯರ್‌, ಅಭಿಷೇಕ್‌ ಪೊರೆಲ್‌ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅವರು ಕೂಡ ಡೆಲ್ಲಿಗೆ ಬ್ಯಾಟಿಂಗ್‌ನಲ್ಲಿ ಶಕ್ತಿ ತುಂಬಬಲ್ಲರು. ಬೌಲಿಂಗ್‌ನಲ್ಲಿ ವೇಗಿ ಮಿಚೆಲ್‌ ಸ್ಟಾರ್ಕ್‌, ಟಿ.ನಟರಾಜನ್‌, ಮೋಹಿತ್‌ ಶರ್ಮಾ ಮತ್ತು ಮುಕೇಶ್‌ ಕುಮಾರ್‌ ಇದ್ದಾರೆ. ಸ್ಪಿನ್‌ ವಿಭಾಗದಲ್ಲಿ ಕುಲದೀಪ್‌ ಹೊಣೆ ನಿಭಾಯಿಸಲಿದ್ದಾರೆ.

ಇತ್ತ ಲಖನೌ ತಂಡಕ್ಕೆ ರಿಷಭ್‌ ಪಂತ್‌ ನಾಯಕರಾಗಿ ತಂಡದ ಹೊಣೆ ಹೊತ್ತುಕೊಂಡಿದ್ದು, ಜೊತೆಗೆ ಡೇವಿಡ್‌ ಮಿಲ್ಲರ್‌, ಏಡನ್‌ ಮರ್ಕರಂ ಮತ್ತು ನಿಕೋಲಸ್‌ ಪೂರನ್‌ ಮಿಚೆಲ್‌ ಮಾರ್ಷ್‌ ಹಾಗೂ ಆಯುಷ್‌ ಬಡೋನಿ ಬ್ಯಾಟಿಂಗ್‌ ವಿಭಾಗದಲ್ಲಿದ್ದಾರೆ. ಆವೇಶ್‌ ಖಾನ್‌, ಆಕಾಶ್‌ ದೀಪ್‌ , ರವಿ ಬಿಷ್ನೋಯಿ ಮತ್ತು ಶಾರ್ದೂಲ್‌ ಠಾಕೂರ್‌ ಬೌಲಿಂಗ್‌ ವಿಭಾಗದ ಹೊಣೆ ಹೊತ್ತುಕೊಂಡಿದ್ದಾರೆ.

ಪಂದ್ಯ ಆರಂಭ: ರಾತ್ರಿ 7.30ಕ್ಕೆ

ಸ್ಥಳ: ಡಾ.ವೈ.ಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಸ್ಟೇಡಿಯಂ, ವಿಶಾಖಪಟ್ಟಣಂ

ನೇರ ಪ್ರಸಾರ: ಜಿಯೋಹಾಟ್‌ಸ್ಟಾರ್

ಆಂದೋಲನ ಡೆಸ್ಕ್

Recent Posts

ಸದ್ಯದಲ್ಲೇ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಯುಎಲ್ಎಂಎಸ್

• ವಿಧಾನಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಹಿತಿ • ಇ-ಆಸ್ತಿ ತಂತ್ರಾಂಶದಲ್ಲಿ ಯಾವುದೇ ತೊಡಕಿಲ್ಲ ವಿಧಾನಸಭೆ : ಸದ್ಯದಲ್ಲೇ…

7 mins ago

ಎಲ್‌ಪಿಜಿ ಸಿಲಿಂಡರ್‌ ಅಭಾವಕ್ಕೇನು ಕಾರಣ? ಇಂಧನ ಸಚಿವಾಲಯ ಹೇಳೋದೇನು?

ಹೊಸದಿಲ್ಲಿ : ಇರಾನ್-ಇಸ್ರೇಲ್‌,ಅಮೆರಿಕ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಇಂಧನ ಬಿಕ್ಕಟ್ಟು ಎದುರಾಗುವು ಸಂಭವ ಇದ್ದು, ಡಿಸೇಲ್‌,ಪೆಟ್ರೋಲ್‌ ಮತ್ತು ಅಡುಗೆ ಅನಿಲ…

28 mins ago

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

54 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

2 hours ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

4 hours ago