ಕ್ರೀಡೆ

DC v/s LSG: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು

ವಿಶಾಖಪಟ್ಟಣ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಆವೃತ್ತಿಯ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎದುರಾಗಲಿದ್ದು, ಉಭಯ ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಡೆಲ್ಲಿ ತಂಡಕ್ಕೆ ವಿಶಾಖಪಟ್ಟಣ ಕ್ರೀಡಾಂಗಣವು ಎರಡನೇ ತವರು ಮೈದಾನವಾಗಿದೆ. ಅಂಕಿ-ಅಂಶಗಳ ಲೆಕ್ಕಚಾರದಲ್ಲಿ ಉಭಯ ತಂಡಗಳು ಬಲಿಷ್ಠವಾಗಿದೆ.

ಡೆಲಿ ತಂಡಕ್ಕೆ ಫಾಫ್‌ ಡುಪ್ಲೆಸಿಸ್‌ ಅವರ ಆಗಮನದಿಂದ ಬ್ಯಾಟಿಂಗ್‌ ಬಲ ಹೆಚ್ಚಾಗಿದೆ. ಜೊತೆಗೆ ಯುವ ಆಟಗಾರ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌, ಕರುಣ್‌ ನಾಯರ್‌, ಅಭಿಷೇಕ್‌ ಪೊರೆಲ್‌ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅವರು ಕೂಡ ಡೆಲ್ಲಿಗೆ ಬ್ಯಾಟಿಂಗ್‌ನಲ್ಲಿ ಶಕ್ತಿ ತುಂಬಬಲ್ಲರು. ಬೌಲಿಂಗ್‌ನಲ್ಲಿ ವೇಗಿ ಮಿಚೆಲ್‌ ಸ್ಟಾರ್ಕ್‌, ಟಿ.ನಟರಾಜನ್‌, ಮೋಹಿತ್‌ ಶರ್ಮಾ ಮತ್ತು ಮುಕೇಶ್‌ ಕುಮಾರ್‌ ಇದ್ದಾರೆ. ಸ್ಪಿನ್‌ ವಿಭಾಗದಲ್ಲಿ ಕುಲದೀಪ್‌ ಹೊಣೆ ನಿಭಾಯಿಸಲಿದ್ದಾರೆ.

ಇತ್ತ ಲಖನೌ ತಂಡಕ್ಕೆ ರಿಷಭ್‌ ಪಂತ್‌ ನಾಯಕರಾಗಿ ತಂಡದ ಹೊಣೆ ಹೊತ್ತುಕೊಂಡಿದ್ದು, ಜೊತೆಗೆ ಡೇವಿಡ್‌ ಮಿಲ್ಲರ್‌, ಏಡನ್‌ ಮರ್ಕರಂ ಮತ್ತು ನಿಕೋಲಸ್‌ ಪೂರನ್‌ ಮಿಚೆಲ್‌ ಮಾರ್ಷ್‌ ಹಾಗೂ ಆಯುಷ್‌ ಬಡೋನಿ ಬ್ಯಾಟಿಂಗ್‌ ವಿಭಾಗದಲ್ಲಿದ್ದಾರೆ. ಆವೇಶ್‌ ಖಾನ್‌, ಆಕಾಶ್‌ ದೀಪ್‌ , ರವಿ ಬಿಷ್ನೋಯಿ ಮತ್ತು ಶಾರ್ದೂಲ್‌ ಠಾಕೂರ್‌ ಬೌಲಿಂಗ್‌ ವಿಭಾಗದ ಹೊಣೆ ಹೊತ್ತುಕೊಂಡಿದ್ದಾರೆ.

ಪಂದ್ಯ ಆರಂಭ: ರಾತ್ರಿ 7.30ಕ್ಕೆ

ಸ್ಥಳ: ಡಾ.ವೈ.ಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಸ್ಟೇಡಿಯಂ, ವಿಶಾಖಪಟ್ಟಣಂ

ನೇರ ಪ್ರಸಾರ: ಜಿಯೋಹಾಟ್‌ಸ್ಟಾರ್

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

10 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

13 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

14 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

15 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

15 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

15 hours ago