ಕ್ರೀಡೆ

DC v/s LSG: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು

ವಿಶಾಖಪಟ್ಟಣ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಸೀಸನ್‌ 18ರ ಆವೃತ್ತಿಯ 4ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎದುರಾಗಲಿದ್ದು, ಉಭಯ ತಂಡಗಳು ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಡೆಲ್ಲಿ ತಂಡಕ್ಕೆ ವಿಶಾಖಪಟ್ಟಣ ಕ್ರೀಡಾಂಗಣವು ಎರಡನೇ ತವರು ಮೈದಾನವಾಗಿದೆ. ಅಂಕಿ-ಅಂಶಗಳ ಲೆಕ್ಕಚಾರದಲ್ಲಿ ಉಭಯ ತಂಡಗಳು ಬಲಿಷ್ಠವಾಗಿದೆ.

ಡೆಲಿ ತಂಡಕ್ಕೆ ಫಾಫ್‌ ಡುಪ್ಲೆಸಿಸ್‌ ಅವರ ಆಗಮನದಿಂದ ಬ್ಯಾಟಿಂಗ್‌ ಬಲ ಹೆಚ್ಚಾಗಿದೆ. ಜೊತೆಗೆ ಯುವ ಆಟಗಾರ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌, ಕರುಣ್‌ ನಾಯರ್‌, ಅಭಿಷೇಕ್‌ ಪೊರೆಲ್‌ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅವರು ಕೂಡ ಡೆಲ್ಲಿಗೆ ಬ್ಯಾಟಿಂಗ್‌ನಲ್ಲಿ ಶಕ್ತಿ ತುಂಬಬಲ್ಲರು. ಬೌಲಿಂಗ್‌ನಲ್ಲಿ ವೇಗಿ ಮಿಚೆಲ್‌ ಸ್ಟಾರ್ಕ್‌, ಟಿ.ನಟರಾಜನ್‌, ಮೋಹಿತ್‌ ಶರ್ಮಾ ಮತ್ತು ಮುಕೇಶ್‌ ಕುಮಾರ್‌ ಇದ್ದಾರೆ. ಸ್ಪಿನ್‌ ವಿಭಾಗದಲ್ಲಿ ಕುಲದೀಪ್‌ ಹೊಣೆ ನಿಭಾಯಿಸಲಿದ್ದಾರೆ.

ಇತ್ತ ಲಖನೌ ತಂಡಕ್ಕೆ ರಿಷಭ್‌ ಪಂತ್‌ ನಾಯಕರಾಗಿ ತಂಡದ ಹೊಣೆ ಹೊತ್ತುಕೊಂಡಿದ್ದು, ಜೊತೆಗೆ ಡೇವಿಡ್‌ ಮಿಲ್ಲರ್‌, ಏಡನ್‌ ಮರ್ಕರಂ ಮತ್ತು ನಿಕೋಲಸ್‌ ಪೂರನ್‌ ಮಿಚೆಲ್‌ ಮಾರ್ಷ್‌ ಹಾಗೂ ಆಯುಷ್‌ ಬಡೋನಿ ಬ್ಯಾಟಿಂಗ್‌ ವಿಭಾಗದಲ್ಲಿದ್ದಾರೆ. ಆವೇಶ್‌ ಖಾನ್‌, ಆಕಾಶ್‌ ದೀಪ್‌ , ರವಿ ಬಿಷ್ನೋಯಿ ಮತ್ತು ಶಾರ್ದೂಲ್‌ ಠಾಕೂರ್‌ ಬೌಲಿಂಗ್‌ ವಿಭಾಗದ ಹೊಣೆ ಹೊತ್ತುಕೊಂಡಿದ್ದಾರೆ.

ಪಂದ್ಯ ಆರಂಭ: ರಾತ್ರಿ 7.30ಕ್ಕೆ

ಸ್ಥಳ: ಡಾ.ವೈ.ಎಸ್‌ ರಾಜಶೇಖರ ರೆಡ್ಡಿ ಕ್ರಿಕೆಟ್‌ ಸ್ಟೇಡಿಯಂ, ವಿಶಾಖಪಟ್ಟಣಂ

ನೇರ ಪ್ರಸಾರ: ಜಿಯೋಹಾಟ್‌ಸ್ಟಾರ್

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

25 mins ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

27 mins ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

29 mins ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

5 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

5 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

5 hours ago