ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ಜೂಡೋ ಪಟು ತುಲಿಕಾ ಮಾನ್ ಅವರು ಬೆಳ್ಳಿ ಪದಕ ಬಳಿಕ ತಮ್ಮ ಮೊದಲ ಮಾತನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದಾರೆ.
“ನನ್ನ ಈ ಪ್ರದರ್ಶನದಿಂದ ನನಗೆ ಸಂತೋಷವಿಲ್ಲ ಆದರೆ ಈಗ ಏನನ್ನೂ ಮಾಡಲು ಸಾಧ್ಯವಿಲ್ಲ.ಖೇಲೋ ಇಂಡಿಯಾ ಯೋಜನೆಯನ್ನು ಪ್ರಾರಂಭಿಸಲು ಪ್ರಧಾನ್ ನರೇಂದ್ರ ಮೋದಿ ಅವರ ಸಹಾಯಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳಬಯಸುತ್ತೇನೆ. ನಾನು ಈ ಪದಕವನ್ನು ನನ್ನ ತಾಯಿ ಮತ್ತು ತರಬೇತುದಾರರಿಗೆ ಅರ್ಪಿಸುತ್ತೇನೆ”
ಎಂದು ಹೇಳುವ ಮೂಲಕ ತಮ್ಮ ಮಾನದ ಮಾತನ್ನು ಹಂಚಿಕೊಂಡಿದ್ದಾರೆ.
ತುಲಿಕಾ ಮಾನ್ ಅವರು ಇಂದು ನಡೆದ ಜೂಡೋ ಸ್ಪರ್ಧೆಯಲ್ಲಿ 78 ಕೆಜಿ ವಿಭಾಗದಲ್ಲಿ ಸ್ಕಾಟ್ಲೆಂಡಿನ ಅಡ್ಲಿಂಗ್ಟನ್ ಅವರನ್ನು ಸೋಲಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಭಾರತಕ್ಕೆ ಜೂಡೋ ಆಟದಲ್ಲಿ ಇದು ಮೂರನೇ ಪದಕವಾಗಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ತುಲಿಕಾ ಮಾನ್ ಅವರ ಗೆಲುವಿಗೆ ತಮ್ಮ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿ ವಿಶಿಷ್ಟ ಕ್ರೀಡಾ ವೃತ್ತಿ ಜೀವನದಲ್ಲಿ ಮತ್ತೊಂದು ಗೌರವವಾಗಿದೆ. ಆಕೆಯ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…