ಕ್ರೀಡೆ

IPL 2024: ಕ್ಯಾಪಿಟಲ್ಸ್‌ ಆಟಕ್ಕೆ ಶರಣಾದ ರಾಯಲ್ಸ್‌

ನವದೆಹಲಿ: ಡೆಲ್ಲಿ ತಂಡದ ಆಲ್‌ರೌಂಡರ್‌ ಆಟದ ಪ್ರದರ್ಶನದ ಮುಂದೆ ರಾಜಸ್ಥಾನ್‌ ರಾಯಲ್ಸ್‌ ತಂಡ ಮಂಕಾಗಿ 20 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿದೆ. ಆ ಮೂಲಕ ರಾಜಸ್ಥಾನ್‌ ಟೂರ್ನಿಯಲ್ಲಿ ಮೂರನೇ ಸೋಲು ಕಂಡಿದೆ.

ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 56ನೇ ಪಂದ್ಯದಲ್ಲಿ ಆರ್‌ಆರ್‌ ಹಾಗೂ ಡಿಸಿ ತಡಗಳು ಮುಖಾಮುಖಿಯಾಗಿದ್ದವು. ಇನ್ನು ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ಕ್ಯಾಪಿಟಲ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 221 ರನ್‌ಗಳಿಸಿ ಎದುರಾಳಿ ತಂಡಕ್ಕೆ 222 ಮೊತ್ತ ಟಾರ್ಗೆಟ್‌ ನೀಡಿತು. ಈ ಬೃಹತ್‌ ಮೊತ್ತ ಚೇಸ್‌ ಮಾಡಿದ ಆರ್‌ಆರ್‌ ತಂಡ, ನಾಯಕ ಸ್ಯಾಮ್ಸನ್‌ ಹೋರಾಟ ಫಲವಾಗಿಯೂ ರಾಯಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 201 ರನ್‌ ಗಳಿಸಿ 20ರನ್‌ಗಳ ಅಂತರದಿಂದ ಸೋಲು ಕಂಡಿತು.

ಡೆಲ್ಲಿ ಇನ್ನಿಂಗ್ಸ್‌: ತವರಿನಂಗಳದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡಿಸಿ ತಂಡಕ್ಕೆ ಭರ್ಜರಿ ಆರಂಭ ದೊರೆಯಿತು. ಆರಂಭಿಕ ಆಟಗಾರರಿಬ್ಬರು ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಫ್ರೆಸರ್‌ ಮೆಗ್‌ಕರ್ಗ್‌ ಹಾಗೂ ಪೋರೆಲ್‌ ಅವರ ಬ್ಯಾಟಿಂಗ್‌ ಬಲದಿಂದಾಗಿ ಡಿಸಿ ತಂಡ ಪವರ್‌ ಪ್ಲೇನಲ್ಲಿ 78ರನ್‌ ಕಲೆಹಾಕಿತು.

ಫ್ರೆಸರ್‌ ಮೆಗ್‌ಕರ್ಗ್‌ ಕೇವಲ 20 ಎಸೆತ ಎದುರಿಸಿ 7ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 50 ರನ್‌ ಗಳಿಸಿದರೇ, ಅಭೀಷೇಕ್‌ ಪೋರೆಲ್‌ 36 ಎಸೆತಗಳಲ್ಲಿ 7ಬೌ, 3 ಸಿಕ್ಸರ್‌ ಸೇರಿ 65 ರನ್‌ ಬಾರಿಸಿ ಔಟಾದರು.

ಬಳಿಕ ಬಂದ ಬೇರಾವ ಬ್ಯಾಟರ್‌ಗಳಿಂದಲೂ ಉತ್ತಮ ಇನ್ನಿಂಗ್ಸ್ ಕಟ್ಟಲು ಸಾಧ್ಯವಾಗಲಿಲ್ಲ. ಶಾಯ್‌ ಹೋಪ್‌ 1(1) ಅಕ್ಷರ್‌ ಪಟೇಲ್‌15(10), ನಾಯಕ ಪಂತ್‌ 15(13), ಗುಲ್ಬದಿನ್‌ 19(15), ರಸಿಕ್‌ 9(3), ಕುಲ್ದೀಪ್‌ ಯಾದವ್‌ 5(2) ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಸ್ಟಬ್ಸ್‌ 20 ಎಸೆತಗಳಲ್ಲಿ 41 ರನ್‌ ಬಾರಿಸಿ ತಂಡದ ಮೊತ್ತ ಇನ್ನೂರರ ಗಡಿ ದಾಟುವಲ್ಲಿ ಸಹಕರಿಸಿದರು.

ರಾಜಸ್ತಾನ್‌ ಪರ ಆರ್‌. ಅಶ್ವಿನ್‌ 3, ಬೋಲ್ಟ್‌, ಸಂದೀಪ್‌ ಶರ್ಮಾ ಹಾಗೂ ಚಾಹಲ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

ಆರ್‌ಆರ್‌ ಇನ್ನಿಂಗ್ಸ್‌: ಈ ಬೃಹತ್‌ ಮೊತ್ತ ಬೆನ್ನತ್ತಿದ ರಾಜಸ್ಥಾನ್‌ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಜೈಸ್ವಾಲ್‌ 4(2) ಹಾಗೂ ಬಟ್ಲರ್‌ 19(17) ರನ್‌ ಗಳಿಸಿ ಬೇಗನೇ ಓಟಾದರು. ಬಳಿಕ ಬಂದ ರಿಯಾನ್‌ ಪರಾಗ್‌ 27(22) ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲ್ಲಿಲ್ಲ.

ಒಂದೆಡೆ ವಿಕೆಟ್‌ ಬೀಳುತ್ತಿದ್ದರೂ ಮತ್ತೊಂದೆಡೆ ಭದ್ರವಾಗಿ ಇನ್ನಿಂಗ್ಸ್‌ ಕಟ್ಟಿದ ನಾಯಕ ಸಂಜು ಸ್ಯಾಮ್ಸನ್‌ 46 ಎಸೆತ ಎದುರಿಸಿ 8ಬೌಂಡರಿ ಮತ್ತು 6 ಸಿಕ್ಸರ್‌ ಸಹಿತ 86 ರನ್‌ಗಳಿಸಿ ಔಟಾದರು. ಬಳಿಕ ಬಂದ ಯಾರಿಂದಲೂ ಮ್ಯಾಚ್‌ ವಿನ್ನಿಂಗ್‌ ಕ್ಯಾಮಿಯೋ ಕಂಡು ಬರಲಿಲ್ಲ. ಶುಭಂ ದುಬೆ 25(12), ಫೇರಿರಾ 1(3), ಪೊವೆಲ್‌ 13(10) ಆರ್‌. ಅಶ್ವಿನ್‌ 2(3), ಓಟಾಗದೇ ಬೋಲ್ಟ್‌ 2(3) ಆವೇಶ್‌ ಖಾನ್‌ 7(3) ಇದ್ದರು ತಂಡವನ್ನು ಗೆಲ್ಲಿಸಿಕೊಡಲು ಆಗಲಿಲ್ಲ.

ಡೆಲ್ಲಿ ಪರ ಕಲೀಲ್‌ ಅಹ್ಮದ್‌, ಕುಲ್ದೀಪ್‌ ಯಾದವ್‌ ಹಾಗೂ ಮುಖೇಶ್‌ ಕುಮಾರ್‌ ತಲಾ 2 ವಿಕೆಟ್‌ ಪಡೆದರು. ರಸಿಕ್‌ ಹಾಗೂ ಅಕ್ಷರ್‌ ತಲಾ ಒಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

29 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

5 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

5 hours ago