ಕ್ರೀಡೆ

WPL-2024: ಗುಜರಾತ್‌ ವಿರುದ್ಧ ಭರ್ಜರಿಯಾಗಿ ಗೆದ್ದ ಡೆಲ್ಲಿ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ 25 ರನ್‌ಗಳ ಅಂತರದ ಗೆಲುವು ದಾಖಲಿಸಿದೆ.

ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 163 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 138 ರನ್‌ ಗಳಿಸಿ 25 ರನ್‌ಗಳ ಸೋಲನುಭವಿಸಿತು.

ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ, ಗುಜರಾತ್‌ ಮಧ್ಯಮವೇಗಿ ಕಾಡಿದರು. ಇನಿಂಗ್ಸ್‌ನ ಮೂರನೇ ಓವರ್‌ನಲ್ಲಿ ಮೇಘನಾ ಅವರು ಶಫಾಲಿ ವರ್ಮಾ ವಿಕೆಟ್ ಗಳಿಸಿದರು. ಮೂರು ಓವರ್‌ಗಳ ನಂತರ ಅಲೈಸ್ ಕ್ಯಾಪ್ತಿಗೂ ಪೆವಿಲಿಯನ್‌ ದಾರಿ ತೋರಿಸಿದರು. ಇದರಿಂದಾಗಿ ತಂಡದ ಮಧ್ಯಮ ಕ್ರಮಾಂಕಕ್ಕೆ ಪೆಟ್ಟು ಬಿತ್ತು.

ಈ ಪರಿಸ್ಥಿತಿಯನ್ನು ಅನುಭವಿ ಬ್ಯಾಟರ್ ಲ್ಯಾನಿಂಗ್ ಸಮರ್ಥವಾಗಿ ನಿಭಾಯಿಸಿದರು. ಅರು ಬೌಂಡರಿ ಮತ್ತು ಒಂದು ಸಿಕ್ಸರ್‌ಗಳಿದ್ದ ಅರ್ಧಶತಕ ಗಳಿಸಿದ ಅವರು ತಂಡದ ಮೊತ್ತ ಹೆಚ್ಚಿಸಿದರು.

ಜೆಮಿಮಾ ರಾಡ್ರಿಗಸ್ ಕೂಡ ವೈಫಲ್ಯ ಅನುಭವಿಸಿದರು. ಆದರೆ ಅನಾಬೆಲ್ ಸದರ್ಲೆಂಡ್ 20 ಮತ್ತು ಕೊನೆಯಲ್ಲಿ ಶಿಖಾ ಪಾಂಡೆ ಔಟಾಗದೆ 14 ಬಾರಿಸಿ ತಂಡವು ಹೋರಾಟದ ಮೊತ್ತ ಗಳಿಸಲು ಸಹಕರಿಸಿದರು.

ಗುಜರಾತ್ ತಂಡದ ಮೇಘನಾ ಸಿಂಗ್ 37/4 ಮತ್ತು ಆ್ಯಷ್ಟೆ ಗಾರ್ಡನರ್ ಎರಡು ವಿಕೆಟ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಗುಜರಾತ್‌ಗೆ ಡೆಲ್ಲಿ ತಂಡದ ವೇಗಿಗಳು ಕಾಡಿದರು. ಗುಜರಾತ್‌ಗೆ ಆರಂಭದಿಂದಲೇ ಪೆಟ್ಟು ನೀಡುತ್ತಾ ಬಂದರು. ಶಿಖಾ ಪಾಂಡೆ ಆರಂಭಿಕರಾಗಿ ಬಂದ ಲಾರಾ ವೋಲ್ವಾರ್ಡ್‌ ಅವರನ್ನು ಬಂದ ದಾರಿಯಲ್ಲೇ ಹಿಂತಿರುಗಿಸುವ ಮೂಲಕ ಆರಂಭಿಕ ಆಘಾತ ನೀಡಿದರು, ನಾಯಕಿ ಬೆತ್‌ ಮೂನಿ 12 ರನ್‌ ಗಳಿಸಿ ಜಾನೆಸನ್‌ ಅವರಿಗೆ ವಿಕಟ್‌ ಒಪ್ಪಿಸಿ ಹೊರ ನಡೆದರು. ಆಶ್ಲೀಗ್‌ ಗಾರ್ಡನರ್‌ 31 ಎಸೆತಗಳಲ್ಲಿ 5ಬೌಂಡರಿ ಮತ್ತು 1 ಸಿಕ್ಸರ್‌ ಸಹಿತ 40 ರನ್‌ ಬಾರಿಸಿ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು. ಆದರೆ ಗಾರ್ಡನರ್‌ ಅವರಿಗೆ ಬೇರಾರೂ ಸಾಥ್‌ ನೀಡಲಿಲ್ಲ.

ಡೆಲ್ಲಿ ಪರ ರಾಧಾ ಯಾದವ್‌ 20/3, ಜೆಸ್‌ ಜನಾಸೆನ್‌ 22/3 ವಿಕೆಟ್‌ ಪಡೆದರು ಮಿಂಚಿದರು.

ಪಂದ್ಯ ಶ್ರೇಷ್ಠ: ಜೆಸ್‌ ಜೊನಾಸೆನ್‌

andolana

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

7 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

8 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

8 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

8 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

9 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

9 hours ago