ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ 25 ರನ್ಗಳ ಅಂತರದ ಗೆಲುವು ದಾಖಲಿಸಿದೆ.
ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 163 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಗುಜರಾತ್ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 138 ರನ್ ಗಳಿಸಿ 25 ರನ್ಗಳ ಸೋಲನುಭವಿಸಿತು.
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಡೆಲ್ಲಿಗೆ, ಗುಜರಾತ್ ಮಧ್ಯಮವೇಗಿ ಕಾಡಿದರು. ಇನಿಂಗ್ಸ್ನ ಮೂರನೇ ಓವರ್ನಲ್ಲಿ ಮೇಘನಾ ಅವರು ಶಫಾಲಿ ವರ್ಮಾ ವಿಕೆಟ್ ಗಳಿಸಿದರು. ಮೂರು ಓವರ್ಗಳ ನಂತರ ಅಲೈಸ್ ಕ್ಯಾಪ್ತಿಗೂ ಪೆವಿಲಿಯನ್ ದಾರಿ ತೋರಿಸಿದರು. ಇದರಿಂದಾಗಿ ತಂಡದ ಮಧ್ಯಮ ಕ್ರಮಾಂಕಕ್ಕೆ ಪೆಟ್ಟು ಬಿತ್ತು.
ಈ ಪರಿಸ್ಥಿತಿಯನ್ನು ಅನುಭವಿ ಬ್ಯಾಟರ್ ಲ್ಯಾನಿಂಗ್ ಸಮರ್ಥವಾಗಿ ನಿಭಾಯಿಸಿದರು. ಅರು ಬೌಂಡರಿ ಮತ್ತು ಒಂದು ಸಿಕ್ಸರ್ಗಳಿದ್ದ ಅರ್ಧಶತಕ ಗಳಿಸಿದ ಅವರು ತಂಡದ ಮೊತ್ತ ಹೆಚ್ಚಿಸಿದರು.
ಜೆಮಿಮಾ ರಾಡ್ರಿಗಸ್ ಕೂಡ ವೈಫಲ್ಯ ಅನುಭವಿಸಿದರು. ಆದರೆ ಅನಾಬೆಲ್ ಸದರ್ಲೆಂಡ್ 20 ಮತ್ತು ಕೊನೆಯಲ್ಲಿ ಶಿಖಾ ಪಾಂಡೆ ಔಟಾಗದೆ 14 ಬಾರಿಸಿ ತಂಡವು ಹೋರಾಟದ ಮೊತ್ತ ಗಳಿಸಲು ಸಹಕರಿಸಿದರು.
ಗುಜರಾತ್ ತಂಡದ ಮೇಘನಾ ಸಿಂಗ್ 37/4 ಮತ್ತು ಆ್ಯಷ್ಟೆ ಗಾರ್ಡನರ್ ಎರಡು ವಿಕೆಟ್ ಗಳಿಸಿದರು.
ಈ ಮೊತ್ತ ಬೆನ್ನತ್ತಿದ ಗುಜರಾತ್ಗೆ ಡೆಲ್ಲಿ ತಂಡದ ವೇಗಿಗಳು ಕಾಡಿದರು. ಗುಜರಾತ್ಗೆ ಆರಂಭದಿಂದಲೇ ಪೆಟ್ಟು ನೀಡುತ್ತಾ ಬಂದರು. ಶಿಖಾ ಪಾಂಡೆ ಆರಂಭಿಕರಾಗಿ ಬಂದ ಲಾರಾ ವೋಲ್ವಾರ್ಡ್ ಅವರನ್ನು ಬಂದ ದಾರಿಯಲ್ಲೇ ಹಿಂತಿರುಗಿಸುವ ಮೂಲಕ ಆರಂಭಿಕ ಆಘಾತ ನೀಡಿದರು, ನಾಯಕಿ ಬೆತ್ ಮೂನಿ 12 ರನ್ ಗಳಿಸಿ ಜಾನೆಸನ್ ಅವರಿಗೆ ವಿಕಟ್ ಒಪ್ಪಿಸಿ ಹೊರ ನಡೆದರು. ಆಶ್ಲೀಗ್ ಗಾರ್ಡನರ್ 31 ಎಸೆತಗಳಲ್ಲಿ 5ಬೌಂಡರಿ ಮತ್ತು 1 ಸಿಕ್ಸರ್ ಸಹಿತ 40 ರನ್ ಬಾರಿಸಿ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು. ಆದರೆ ಗಾರ್ಡನರ್ ಅವರಿಗೆ ಬೇರಾರೂ ಸಾಥ್ ನೀಡಲಿಲ್ಲ.
ಡೆಲ್ಲಿ ಪರ ರಾಧಾ ಯಾದವ್ 20/3, ಜೆಸ್ ಜನಾಸೆನ್ 22/3 ವಿಕೆಟ್ ಪಡೆದರು ಮಿಂಚಿದರು.
ಪಂದ್ಯ ಶ್ರೇಷ್ಠ: ಜೆಸ್ ಜೊನಾಸೆನ್
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…