ಕ್ರೀಡೆ

WPL-2024: ಗುಜರಾತ್‌ ವಿರುದ್ಧ ಭರ್ಜರಿಯಾಗಿ ಗೆದ್ದ ಡೆಲ್ಲಿ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ 25 ರನ್‌ಗಳ ಅಂತರದ ಗೆಲುವು ದಾಖಲಿಸಿದೆ.

ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 163 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 138 ರನ್‌ ಗಳಿಸಿ 25 ರನ್‌ಗಳ ಸೋಲನುಭವಿಸಿತು.

ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ, ಗುಜರಾತ್‌ ಮಧ್ಯಮವೇಗಿ ಕಾಡಿದರು. ಇನಿಂಗ್ಸ್‌ನ ಮೂರನೇ ಓವರ್‌ನಲ್ಲಿ ಮೇಘನಾ ಅವರು ಶಫಾಲಿ ವರ್ಮಾ ವಿಕೆಟ್ ಗಳಿಸಿದರು. ಮೂರು ಓವರ್‌ಗಳ ನಂತರ ಅಲೈಸ್ ಕ್ಯಾಪ್ತಿಗೂ ಪೆವಿಲಿಯನ್‌ ದಾರಿ ತೋರಿಸಿದರು. ಇದರಿಂದಾಗಿ ತಂಡದ ಮಧ್ಯಮ ಕ್ರಮಾಂಕಕ್ಕೆ ಪೆಟ್ಟು ಬಿತ್ತು.

ಈ ಪರಿಸ್ಥಿತಿಯನ್ನು ಅನುಭವಿ ಬ್ಯಾಟರ್ ಲ್ಯಾನಿಂಗ್ ಸಮರ್ಥವಾಗಿ ನಿಭಾಯಿಸಿದರು. ಅರು ಬೌಂಡರಿ ಮತ್ತು ಒಂದು ಸಿಕ್ಸರ್‌ಗಳಿದ್ದ ಅರ್ಧಶತಕ ಗಳಿಸಿದ ಅವರು ತಂಡದ ಮೊತ್ತ ಹೆಚ್ಚಿಸಿದರು.

ಜೆಮಿಮಾ ರಾಡ್ರಿಗಸ್ ಕೂಡ ವೈಫಲ್ಯ ಅನುಭವಿಸಿದರು. ಆದರೆ ಅನಾಬೆಲ್ ಸದರ್ಲೆಂಡ್ 20 ಮತ್ತು ಕೊನೆಯಲ್ಲಿ ಶಿಖಾ ಪಾಂಡೆ ಔಟಾಗದೆ 14 ಬಾರಿಸಿ ತಂಡವು ಹೋರಾಟದ ಮೊತ್ತ ಗಳಿಸಲು ಸಹಕರಿಸಿದರು.

ಗುಜರಾತ್ ತಂಡದ ಮೇಘನಾ ಸಿಂಗ್ 37/4 ಮತ್ತು ಆ್ಯಷ್ಟೆ ಗಾರ್ಡನರ್ ಎರಡು ವಿಕೆಟ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಗುಜರಾತ್‌ಗೆ ಡೆಲ್ಲಿ ತಂಡದ ವೇಗಿಗಳು ಕಾಡಿದರು. ಗುಜರಾತ್‌ಗೆ ಆರಂಭದಿಂದಲೇ ಪೆಟ್ಟು ನೀಡುತ್ತಾ ಬಂದರು. ಶಿಖಾ ಪಾಂಡೆ ಆರಂಭಿಕರಾಗಿ ಬಂದ ಲಾರಾ ವೋಲ್ವಾರ್ಡ್‌ ಅವರನ್ನು ಬಂದ ದಾರಿಯಲ್ಲೇ ಹಿಂತಿರುಗಿಸುವ ಮೂಲಕ ಆರಂಭಿಕ ಆಘಾತ ನೀಡಿದರು, ನಾಯಕಿ ಬೆತ್‌ ಮೂನಿ 12 ರನ್‌ ಗಳಿಸಿ ಜಾನೆಸನ್‌ ಅವರಿಗೆ ವಿಕಟ್‌ ಒಪ್ಪಿಸಿ ಹೊರ ನಡೆದರು. ಆಶ್ಲೀಗ್‌ ಗಾರ್ಡನರ್‌ 31 ಎಸೆತಗಳಲ್ಲಿ 5ಬೌಂಡರಿ ಮತ್ತು 1 ಸಿಕ್ಸರ್‌ ಸಹಿತ 40 ರನ್‌ ಬಾರಿಸಿ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು. ಆದರೆ ಗಾರ್ಡನರ್‌ ಅವರಿಗೆ ಬೇರಾರೂ ಸಾಥ್‌ ನೀಡಲಿಲ್ಲ.

ಡೆಲ್ಲಿ ಪರ ರಾಧಾ ಯಾದವ್‌ 20/3, ಜೆಸ್‌ ಜನಾಸೆನ್‌ 22/3 ವಿಕೆಟ್‌ ಪಡೆದರು ಮಿಂಚಿದರು.

ಪಂದ್ಯ ಶ್ರೇಷ್ಠ: ಜೆಸ್‌ ಜೊನಾಸೆನ್‌

andolana

Recent Posts

ಪುನರುಜ್ಜೀವನಕ್ಕಾಗಿ ಕಾಯುತ್ತಿದೆ ಪುರಭವನ?

ಮೈಸೂರು : ಸಾಂಸ್ಕೃತಿಕ ನಗರದ ಹೃದಯ ಭಾಗದಲ್ಲಿ ರುವ ಐತಿಹಾಸಿಕ ರಂಗಾಚಾರ್ಲು ಪುರಭವನ ಇದೀಗ ನಿರ್ಲಕ್ಷ್ಯದ ಪರಿಣಾಮ ಶಿಥಿಲಾವಸ್ಥೆಯತ್ತ ಸಾಗುತ್ತಿದೆ.…

1 min ago

ಹಿಜಾಬ್‌ ವಿವಾದ : ಹೊಸ ಆದೇಶ ಸಕಾರಾತ್ಮಕ ಬೆಳವಣಿಗೆಗೆ ಸಹಾಯ

ಸಂವಿಧಾನಾತ್ಮಕ ಹಕ್ಕು ಅನುಷ್ಠಾನದಲ್ಲಿ ಎಚ್ಚರಿಕೆ ಅಗತ್ಯ ನಿರಂಜನಾರಾಧ್ಯ ವಿ.ಪಿ.ಅಭಿವೃದ್ಧಿ ಶಿಕ್ಷಣ ತಜ್ಞ ಹಿಂದೆ ೨೦೨೨ರಲ್ಲಿ ಹಿಜಾಬ್ ನಿಷೇಧಿಸಿ ಬಿಜೆಪಿ ನೇತೃತ್ವದ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ಮುಟ್ಟಿದ ನನ್ನೂರಿನ ಮನಸುಗಳು…

• ಎಸ್.ಗಂಗಾಧರಯ್ಯ ಗಾಂಧಿ ಎಂಬುದೊಂದು ತಾಯ್ತನದ ಭಾವ, ಅದು ಅಂದು ಇಂದು ಮುಂದೆ ಯಾವತ್ತೂ ಎದೆಯ ಕತ್ತಲಿಗೆ ಹಚ್ಚಿದ ತುಂಬಿಹೋಗದ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ : ಇಲ್ಲಿದೆ ಗಾಂಧಿ ಆತ್ಮಕತೆಯ ಆಯ್ದ ತುಣುಕು

ನನ್ನ ನಡೆತೆಯನ್ನು ಬಹು ಎಚ್ಚರಿಕೆಯಿಂದ ಕಾಯ್ದುಕೊಂಡಿದ್ದೆ ನನ್ನ ಮದುವೆಯಾದ ಕಾಲಕ್ಕೆ ನಾನು ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ನಾನು ಉಪಾಧ್ಯಾಯರ ಪ್ರೀತಿಯನ್ನು ಯಾವಾಗಲೂ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.16 ಶನಿವಾರ  

5 hours ago

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

22 hours ago