ಕ್ರೀಡೆ

WPL-2024: ಗುಜರಾತ್‌ ವಿರುದ್ಧ ಭರ್ಜರಿಯಾಗಿ ಗೆದ್ದ ಡೆಲ್ಲಿ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ಗುಜರಾತ್‌ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ 25 ರನ್‌ಗಳ ಅಂತರದ ಗೆಲುವು ದಾಖಲಿಸಿದೆ.

ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 163 ರನ್ ಗಳಿಸಿತು. ಈ ಮೊತ್ತ ಬೆನ್ನತ್ತಿದ ಗುಜರಾತ್‌ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 138 ರನ್‌ ಗಳಿಸಿ 25 ರನ್‌ಗಳ ಸೋಲನುಭವಿಸಿತು.

ಟಾಸ್ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ, ಗುಜರಾತ್‌ ಮಧ್ಯಮವೇಗಿ ಕಾಡಿದರು. ಇನಿಂಗ್ಸ್‌ನ ಮೂರನೇ ಓವರ್‌ನಲ್ಲಿ ಮೇಘನಾ ಅವರು ಶಫಾಲಿ ವರ್ಮಾ ವಿಕೆಟ್ ಗಳಿಸಿದರು. ಮೂರು ಓವರ್‌ಗಳ ನಂತರ ಅಲೈಸ್ ಕ್ಯಾಪ್ತಿಗೂ ಪೆವಿಲಿಯನ್‌ ದಾರಿ ತೋರಿಸಿದರು. ಇದರಿಂದಾಗಿ ತಂಡದ ಮಧ್ಯಮ ಕ್ರಮಾಂಕಕ್ಕೆ ಪೆಟ್ಟು ಬಿತ್ತು.

ಈ ಪರಿಸ್ಥಿತಿಯನ್ನು ಅನುಭವಿ ಬ್ಯಾಟರ್ ಲ್ಯಾನಿಂಗ್ ಸಮರ್ಥವಾಗಿ ನಿಭಾಯಿಸಿದರು. ಅರು ಬೌಂಡರಿ ಮತ್ತು ಒಂದು ಸಿಕ್ಸರ್‌ಗಳಿದ್ದ ಅರ್ಧಶತಕ ಗಳಿಸಿದ ಅವರು ತಂಡದ ಮೊತ್ತ ಹೆಚ್ಚಿಸಿದರು.

ಜೆಮಿಮಾ ರಾಡ್ರಿಗಸ್ ಕೂಡ ವೈಫಲ್ಯ ಅನುಭವಿಸಿದರು. ಆದರೆ ಅನಾಬೆಲ್ ಸದರ್ಲೆಂಡ್ 20 ಮತ್ತು ಕೊನೆಯಲ್ಲಿ ಶಿಖಾ ಪಾಂಡೆ ಔಟಾಗದೆ 14 ಬಾರಿಸಿ ತಂಡವು ಹೋರಾಟದ ಮೊತ್ತ ಗಳಿಸಲು ಸಹಕರಿಸಿದರು.

ಗುಜರಾತ್ ತಂಡದ ಮೇಘನಾ ಸಿಂಗ್ 37/4 ಮತ್ತು ಆ್ಯಷ್ಟೆ ಗಾರ್ಡನರ್ ಎರಡು ವಿಕೆಟ್ ಗಳಿಸಿದರು.

ಈ ಮೊತ್ತ ಬೆನ್ನತ್ತಿದ ಗುಜರಾತ್‌ಗೆ ಡೆಲ್ಲಿ ತಂಡದ ವೇಗಿಗಳು ಕಾಡಿದರು. ಗುಜರಾತ್‌ಗೆ ಆರಂಭದಿಂದಲೇ ಪೆಟ್ಟು ನೀಡುತ್ತಾ ಬಂದರು. ಶಿಖಾ ಪಾಂಡೆ ಆರಂಭಿಕರಾಗಿ ಬಂದ ಲಾರಾ ವೋಲ್ವಾರ್ಡ್‌ ಅವರನ್ನು ಬಂದ ದಾರಿಯಲ್ಲೇ ಹಿಂತಿರುಗಿಸುವ ಮೂಲಕ ಆರಂಭಿಕ ಆಘಾತ ನೀಡಿದರು, ನಾಯಕಿ ಬೆತ್‌ ಮೂನಿ 12 ರನ್‌ ಗಳಿಸಿ ಜಾನೆಸನ್‌ ಅವರಿಗೆ ವಿಕಟ್‌ ಒಪ್ಪಿಸಿ ಹೊರ ನಡೆದರು. ಆಶ್ಲೀಗ್‌ ಗಾರ್ಡನರ್‌ 31 ಎಸೆತಗಳಲ್ಲಿ 5ಬೌಂಡರಿ ಮತ್ತು 1 ಸಿಕ್ಸರ್‌ ಸಹಿತ 40 ರನ್‌ ಬಾರಿಸಿ ತಂಡಕ್ಕೆ ಅಲ್ಪ ಚೇತರಿಕೆ ನೀಡಿದರು. ಆದರೆ ಗಾರ್ಡನರ್‌ ಅವರಿಗೆ ಬೇರಾರೂ ಸಾಥ್‌ ನೀಡಲಿಲ್ಲ.

ಡೆಲ್ಲಿ ಪರ ರಾಧಾ ಯಾದವ್‌ 20/3, ಜೆಸ್‌ ಜನಾಸೆನ್‌ 22/3 ವಿಕೆಟ್‌ ಪಡೆದರು ಮಿಂಚಿದರು.

ಪಂದ್ಯ ಶ್ರೇಷ್ಠ: ಜೆಸ್‌ ಜೊನಾಸೆನ್‌

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

7 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

7 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

7 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

8 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

8 hours ago