ಕ್ರೀಡೆ

ಮುಂಬೈ ವಿರುದ್ಧ ರೋಚಕ ಗೆಲುವು ಕಂಡ ಡೆಲ್ಲಿ ಕ್ಯಾಪಿಟಲ್ಸ್‌

ದೆಹಲಿ : ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 43ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 10 ರನ್‌ಗಳ ಗೆಲುವನ್ನು ದಾಖಲಿಸಿತು.

ಪಂದ್ಯದಲ್ಲಿ ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್‌ ಮೆಕ್‌ಗುರ್ಕ್‌ ಅಬ್ಬರದ ಅರ್ಧಶತಕ, ಶಾಯ್‌ ಹೋಪ್‌ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 257 ರನ್‌ ಕಲೆಹಾಕಿ 258 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಲು ಯತ್ನಿಸಿದ ಮುಂಬೈ ಇಂಡಿಯನ್ಸ್‌ ತಿಲಕ್‌ ವರ್ಮಾ, ಪಾಂಡ್ಯ ಹಾಗೂ ಟಿಮ್‌ ಡೇವಿಡ್‌ ಹೋರಾಟದ ನಡುವೆಯೂ ವಿಫಲವಾಯಿತು. ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 247 ರನ್‌ ಗಳಿಸಿತು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಜೇಸನ್‌ ಫ್ರೇಸರ್‌ ಮೆಕ್‌ಗುರ್ಕ್‌ ಹಾಗೂ ಅಭಿಷೇಕ್‌ ಪೊರೆಲ್‌ 114 ರನ್‌ಗಳ ಜತೆಯಾಟವನ್ನಾಡುವ ಮೂಲಕ ಭರ್ಜರಿ ಆರಂಭವನ್ನು ಕಟ್ಟಿಕೊಟ್ಟರು. ಅಭಿಷೇಕ್‌ ಪೊರೆಲ್‌ 36 (27) ರನ್‌ ಗಳಿಸಿದರೆ, 27 ಎಸೆತಗಳಲ್ಲಿ 11 ಬೌಂಡರಿ ಹಾಗೂ 6 ಸಿಕ್ಸರ್‌ ಸಹಿತ 84 ರನ್‌ ಬಾರಿಸಿದರು. ಇನ್ನುಳಿದಂತೆ ಶಾಯ್‌ ಹೋಪ್‌ 41 (17) ರನ್‌, ನಾಯಕ ರಿಷಭ್‌ ಪಂತ್‌ 29 (19) ರನ್‌, ಅಕ್ಷರ್ ಪಟೇಲ್‌ ಅಜೇಯ 11 (6) ರನ್‌ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 48 (25) ರನ್‌ ಬಾರಿಸಿದರು.

ಮುಂಬೈ ಇಂಡಿಯನ್ಸ್‌ ಪರ ಲೂಕ್‌ ವುಡ್‌, ಜಸ್‌ಪ್ರೀತ್‌ ಬುಮ್ರಾ, ಪಿಯೂಷ್‌ ಚಾವ್ಲಾ ಮತ್ತು ಮೊಹಮ್ಮದ್‌ ನಬಿ ತಲಾ ಒಂದೊಂದು ವಿಕೆಟ್‌ ಪಡೆದುಕೊಂಡರು.

ಮುಂಬೈ ಇಂಡಿಯನ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಇಶಾನ್‌ ಕಿಶನ್‌ 20 (14) ರನ್‌ ಮತ್ತು ರೋಹಿತ್‌ ಶರ್ಮಾ 8(8) ರನ್‌ ಗಳಿಸಿದರು. ಸೂರ್ಯಕುಮಾರ್‌ ಯಾದವ್‌ 26 (13) ರನ್‌ ಕಲೆಹಾಕಿದರು. ಬಳಿಕ ನಾಲ್ಕನೇ ವಿಕೆಟ್‌ಗೆ ಒಂದಾದ ತಿಲಕ್‌ ವರ್ಮಾ ಹಾಗೂ ನಾಯಕ ಹಾರ್ದಿಕ್‌ ಪಾಂಡ್ಯ 71 ರನ್‌ಗಳ ಜತೆಯಾಟವಾಡುವ ಮೂಲಕ ಗೆಲುವಿನ ನಿರೀಕ್ಷೆ ಹುಟ್ಟಿಸಿದರು. ತಿಲಕ್‌ ವರ್ಮಾ 63 (32) ರನ್‌ ಮತ್ತು ಹಾರ್ದಿಕ್‌ ಪಾಂಡ್ಯ 46 (24) ರನ್‌ ಬಾರಿಸಿದರು. ನಂತರ ಟಿಮ್‌ ಡೇವಿಡ್‌ ಸಹ 37 (17) ರನ್‌ ಬಾರಿಸಿ ಗೆಲುವಿನ ನಿರೀಕ್ಷೆ ಹುಟ್ಟುಹಾಕಿ ವಿಕೆಟ್‌ ಒಪ್ಪಿಸಿದರು. ಇನ್ನುಳಿದಂತೆ ನೇಹಲ್‌ ವಾಡೆರಾ 4 (2) ರನ್‌, ಮೊಹಮ್ಮದ್‌ ನಬಿ 7 (4) ರನ್‌, ಪಿಯೂಷ್‌ ಚಾವ್ಲಾ 10 (4) ರನ್‌ ಹಾಗೂ ಲೂಕ್‌ ವುಡ್‌ ಅಜೇಯ 9 (3) ರನ್‌ ಕಲೆಹಾಕಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ರಸಿಖ್‌ ಡರ್‌ ಸಲಾಮ್‌ 3 ವಿಕೆಟ್‌, ಮುಕೇಶ್‌ ಕುಮಾರ್‌ 3 ಮತ್ತು ಖಲೀಲ್‌ ಅಹ್ಮದ್‌ 2 ವಿಕೆಟ್‌ ಪಡೆದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

36 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

42 mins ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

51 mins ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

1 hour ago

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

2 hours ago

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…

2 hours ago