ಕ್ರೀಡೆ

ಗುಜರಾತ್‌ ಟೈಟನ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ರೋಚಕ ಜಯ

ದೆಹಲಿ: ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌ ವಿರುದ್ಧ 4 ರನ್‌ಗಳ ರೋಚಕ ಗೆಲುವನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ಟೈಟನ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು ಡೆಲ್ಲಿ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಡೆಲ್ಲಿ ಕ್ಯಾಪಿಟಲ್ಸ್‌ ಅಕ್ಷರ್‌ ಪಟೇಲ್‌, ನಾಯಕ ರಿಷಭ್‌ ಪಂತ್‌ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 224 ರನ್‌ ಕಲೆಹಾಕಿ ಗುಜರಾತ್‌ಗೆ 223 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ಹೋರಾಡಿ ಸೋತ ಗುಜರಾತ್‌ ಟೈಟನ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 220 ರನ್‌ ಕಲೆಹಾಕಿತು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 11 (7) ರನ್ ಹಾಗೂ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ‌23 (14) ರನ್‌ ಗಳಿಸಿದರು. ಶಾಯ್‌ ಹೋಪ್‌ 5 (6) ರನ್‌ ಕಲೆಹಾಕಿದರು. ನಾಲ್ಕನೇ ವಿಕೆಟ್‌ಗೆ ಶತಕದ ಜತೆಯಾಡಿದ ಅಕ್ಷರ್‌ ಪಟೇಲ್‌ ಹಾಗೂ ಪಂತ್‌ ಜೋಡಿ ತಂಡಕ್ಕೆ ಆಸರೆಯಾಯಿತು. ಅಕ್ಷರ್‌ ಪಟೇಲ್‌ 66 (43) ರನ್‌ ಬಾರಿಸಿದರೆ, ಪಂತ್‌ ಅಜೇಯ 88 (43) ರನ್‌ ಬಾರಿಸಿದರು ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 26 (7) ರನ್‌ ಕಲೆಹಾಕಿದರು.

ಗುಜರಾತ್ ಟೈಟನ್ಸ್‌ ಪರ ಸಂದೀಪ್‌ ವಾರಿಯರ್‌ 3 ವಿಕೆಟ್‌ ಮತ್ತು ನೂರ್‌ ಅಹ್ಮದ್‌ ಒಂದು ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ಗುಜರಾತ್ ಟೈಟನ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಶುಭ್ ಮನ್ ಗಿಲ್ ಕೇವಲ‌ 6 (5) ರನ್ ಗಳಿಸಿ ವಿಫಲರಾದರೆ, ವೃದ್ಧಿಮಾನ್ ಸಹಾ 39 (25) ರನ್ ಗಳಿಸಿದರು. ಸಾಯಿ ಸುದರ್ಶನ್ 65 (39) ರನ್ ಬಾರಿಸಿ ಉತ್ತಮ ಪ್ರದರ್ಶನ ನೀಡಿದರು. ಇನ್ನುಳಿದಂತೆ ಅಜ್ಮತ್ಉಲ್ಲಾ 1 (2) ರನ್, ಶಾರುಖ್ ಖಾನ್ 8 (5) ರನ್, ರಾಹುಲ್ ತೆವಾಟಿಯಾ 4 (5) ರನ್ ಕಲೆಹಾಕಿದರು. ಅಂತಿಮ ಹಂತದಲ್ಲಿ ನಿರೀಕ್ಷೆ ಹುಟ್ಟುಹಾಕಿದ ಡೇವಿಡ್‌ ಮಿಲ್ಲರ್‌ 55 (23) ರನ್‌ ಗಳಿಸಿದರು. ಮಿಲ್ಲರ್‌ ವಿಕೆಟ್‌ ಬಳಿಕ ಬೌಂಡರಿ ಬಾರಿಸುವ ಮೂಲಕ ಅಬ್ಬರಿಸಿದ ರವಿಶ್ರೀನಿವಾಸನ್‌ ಸಾಯಿ ಕಿಶೋರ್ 13 (6) ರನ್‌ ಬಾರಿಸಿದರೆ, ರಶೀದ್‌ ಖಾನ್‌ ಅಜೇಯ 21 (11) ರನ್‌ ಕಲೆಹಾಕಿ ಗೆಲುವಿನ ನಿರೀಕ್ಷೆ ಹುಟ್ಟಿಸಿ ಕೊನೆಯಲ್ಲಿ ಎಡವಿದರು ಮತ್ತು ಯಾವುದೇ ಎಸೆತ ಎದುರಿಸದ ಮೋಹಿತ್‌ ಶರ್ಮಾ ಅಜೇಯರಾಗಿ ಉಳಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ರಸಿಕ್‌ ಡರ್‌ ಸಲಾಮ್‌ 3 ವಿಕೆಟ್‌, ಕುಲ್‌ದೀಪ್‌ ಯಾದವ್‌ 2 ವಿಕೆಟ್‌, ಅನ್ರಿಚ್‌ ನಾರ್ಕಿಯಾ, ಮುಕೇಶ್‌ ಕುಮಾರ್‌ ಹಾಗೂ ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago