ಕ್ರೀಡೆ

ಗುಜರಾತ್‌ ಟೈಟನ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ ರೋಚಕ ಜಯ

ದೆಹಲಿ: ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌ ವಿರುದ್ಧ 4 ರನ್‌ಗಳ ರೋಚಕ ಗೆಲುವನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ಟೈಟನ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು ಡೆಲ್ಲಿ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಡೆಲ್ಲಿ ಕ್ಯಾಪಿಟಲ್ಸ್‌ ಅಕ್ಷರ್‌ ಪಟೇಲ್‌, ನಾಯಕ ರಿಷಭ್‌ ಪಂತ್‌ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 224 ರನ್‌ ಕಲೆಹಾಕಿ ಗುಜರಾತ್‌ಗೆ 223 ರನ್‌ಗಳ ಕಠಿಣ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನತ್ತುವಲ್ಲಿ ಹೋರಾಡಿ ಸೋತ ಗುಜರಾತ್‌ ಟೈಟನ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 220 ರನ್‌ ಕಲೆಹಾಕಿತು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 11 (7) ರನ್ ಹಾಗೂ ಜೇಕ್‌ ಫ್ರೇಸರ್‌ ಮೆಕ್‌ಗರ್ಕ್‌ ‌23 (14) ರನ್‌ ಗಳಿಸಿದರು. ಶಾಯ್‌ ಹೋಪ್‌ 5 (6) ರನ್‌ ಕಲೆಹಾಕಿದರು. ನಾಲ್ಕನೇ ವಿಕೆಟ್‌ಗೆ ಶತಕದ ಜತೆಯಾಡಿದ ಅಕ್ಷರ್‌ ಪಟೇಲ್‌ ಹಾಗೂ ಪಂತ್‌ ಜೋಡಿ ತಂಡಕ್ಕೆ ಆಸರೆಯಾಯಿತು. ಅಕ್ಷರ್‌ ಪಟೇಲ್‌ 66 (43) ರನ್‌ ಬಾರಿಸಿದರೆ, ಪಂತ್‌ ಅಜೇಯ 88 (43) ರನ್‌ ಬಾರಿಸಿದರು ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 26 (7) ರನ್‌ ಕಲೆಹಾಕಿದರು.

ಗುಜರಾತ್ ಟೈಟನ್ಸ್‌ ಪರ ಸಂದೀಪ್‌ ವಾರಿಯರ್‌ 3 ವಿಕೆಟ್‌ ಮತ್ತು ನೂರ್‌ ಅಹ್ಮದ್‌ ಒಂದು ವಿಕೆಟ್‌ ಪಡೆದರು.

ಗುಜರಾತ್‌ ಟೈಟನ್ಸ್‌ ಇನ್ನಿಂಗ್ಸ್:‌ ಗುಜರಾತ್ ಟೈಟನ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಶುಭ್ ಮನ್ ಗಿಲ್ ಕೇವಲ‌ 6 (5) ರನ್ ಗಳಿಸಿ ವಿಫಲರಾದರೆ, ವೃದ್ಧಿಮಾನ್ ಸಹಾ 39 (25) ರನ್ ಗಳಿಸಿದರು. ಸಾಯಿ ಸುದರ್ಶನ್ 65 (39) ರನ್ ಬಾರಿಸಿ ಉತ್ತಮ ಪ್ರದರ್ಶನ ನೀಡಿದರು. ಇನ್ನುಳಿದಂತೆ ಅಜ್ಮತ್ಉಲ್ಲಾ 1 (2) ರನ್, ಶಾರುಖ್ ಖಾನ್ 8 (5) ರನ್, ರಾಹುಲ್ ತೆವಾಟಿಯಾ 4 (5) ರನ್ ಕಲೆಹಾಕಿದರು. ಅಂತಿಮ ಹಂತದಲ್ಲಿ ನಿರೀಕ್ಷೆ ಹುಟ್ಟುಹಾಕಿದ ಡೇವಿಡ್‌ ಮಿಲ್ಲರ್‌ 55 (23) ರನ್‌ ಗಳಿಸಿದರು. ಮಿಲ್ಲರ್‌ ವಿಕೆಟ್‌ ಬಳಿಕ ಬೌಂಡರಿ ಬಾರಿಸುವ ಮೂಲಕ ಅಬ್ಬರಿಸಿದ ರವಿಶ್ರೀನಿವಾಸನ್‌ ಸಾಯಿ ಕಿಶೋರ್ 13 (6) ರನ್‌ ಬಾರಿಸಿದರೆ, ರಶೀದ್‌ ಖಾನ್‌ ಅಜೇಯ 21 (11) ರನ್‌ ಕಲೆಹಾಕಿ ಗೆಲುವಿನ ನಿರೀಕ್ಷೆ ಹುಟ್ಟಿಸಿ ಕೊನೆಯಲ್ಲಿ ಎಡವಿದರು ಮತ್ತು ಯಾವುದೇ ಎಸೆತ ಎದುರಿಸದ ಮೋಹಿತ್‌ ಶರ್ಮಾ ಅಜೇಯರಾಗಿ ಉಳಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ರಸಿಕ್‌ ಡರ್‌ ಸಲಾಮ್‌ 3 ವಿಕೆಟ್‌, ಕುಲ್‌ದೀಪ್‌ ಯಾದವ್‌ 2 ವಿಕೆಟ್‌, ಅನ್ರಿಚ್‌ ನಾರ್ಕಿಯಾ, ಮುಕೇಶ್‌ ಕುಮಾರ್‌ ಹಾಗೂ ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago