ಕ್ರೀಡೆ

IPL 2024: ಲಕ್ನೋ ವಿರುದ್ಧ ಗೆಲವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಲಕ್ನೋ: ಇಲ್ಲಿನ ಏಕನ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 26ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ 6 ವಿಕೆಟ್‌ಗಳ ಗೆಲುವನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ಆಯುಷ್‌ ಬದೋನಿ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 167 ರನ್‌ ಕಲೆಹಾಕಿ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ 168 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಡೆಲ್ಲಿ ಕ್ಯಾಪಿಟಲ್ಸ್‌ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ ಹಾಗೂ ನಾಯಕ ರಿಷಭ್‌ ಪಂತ್‌ ಉತ್ತಮ ಆಟದ ನೆರವಿನಿಂದ 18.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 170 ರನ್‌ ಕಲೆಹಾಕಿತು.

ಲಕ್ನೋ ಸೂಪರ್‌ಜೈಂಟ್ಸ್‌ ಇನ್ನಿಂಗ್ಸ್:‌ ತಂಡದ ಪರ ಕ್ವಿಂಟನ್‌ ಡಿ ಕಾಕ್‌ ಹಾಗೂ ಕೆಎಲ್‌ ರಾಹುಲ್‌ ಆರಂಭಿಕರಾಗಿ ಕಣಕ್ಕಿಳಿದರು. ಡಿಕಾಕ್‌ 19 (13) ರನ್‌ ಗಳಿಸಿದರೆ, ರಾಹುಲ್‌ 39 (22) ರನ್‌ ಗಳಿಸಿದರು. ಇನ್ನುಳಿದಂತೆ ದೇವದತ್‌ ಪಡಿಕ್ಕಲ್‌ 3(6) ರನ್, ಮಾರ್ಕಸ್‌ ಸ್ಟಾಯ್ನಿಸ್‌ 8 (10) ರನ್‌, ನಿಕೋಲಸ್‌ ಪೂರನ್‌ ಗೋಲ್ಡನ್‌ ಡಕ್‌, ದೀಪಕ್‌ ಹೂಡಾ 10 (13) ರನ್‌, ಕೃನಾಲ್‌ ಪಾಂಡ್ಯ 3 (4) ರನ್‌, ಅರ್ಷದ್‌ ಖಾನ್‌ ಅಜೇಯ 20 (16) ರನ್‌ ಹಾಗೂ ಅಂತಿಮ ಹಂತದಲ್ಲಿ ಆಸರೆಯಾದ ಆಯುಷ್‌ ಬದೋನಿ ಅಜೇಯ 55 (35) ರನ್‌ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ಕುಲ್‌ದೀಪ್‌ ಯಾದವ್‌ 3 ವಿಕೆಟ್‌, ಖಲೀಲ್‌ ಅಹ್ಮದ್‌ 2 ವಿಕೆಟ್‌, ಇಶಾಂತ್‌ ಶರ್ಮಾ ಹಾಗೂ ಮುಕೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 32 (22) ರನ್ ಹಾಗೂ ಡೇವಿಡ್‌ ವಾರ್ನರ್‌‌ 8 (9) ರನ್‌ ಕಲೆಹಾಕಿದರು. ಮೂರನೇ ವಿಕೆಟ್‌ಗೆ ಜತೆಯಾದ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ ಹಾಗೂ ನಾಯಕ ರಿಷಭ್‌ ಪಂತ್‌ 77 ರನ್‌ಗಳ ಜತೆಯಾಟವಾಡಿ ಆಸರೆಯಾದರು. ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ 55 (35) ರನ್‌, ಪಂತ್‌ 41 (24) ರನ್‌ ಬಾರಿಸಿದರು. ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 15 (9) ರನ್‌ ಮತ್ತು ಶಾಯ್‌ ಹೋಪ್‌ ಅಜೇಯ 11 (10) ರನ್‌ ಕಲೆಹಾಕಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಲಕ್ನೋ ಸೂಪರ್‌ ಜೈಂಟ್ಸ್‌ ಪರ ರವಿ ಬಿಷ್ಣೋಯಿ 2 ವಿಕೆಟ್‌, ಯಶ್‌ ಠಾಕೂರ್‌ ಹಾಗೂ ನವೀನ್‌ ಉಲ್‌ ಹಕ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

16 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

17 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

21 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago