ಕ್ರೀಡೆ

IPL 2024: ಲಕ್ನೋ ವಿರುದ್ಧ ಗೆಲವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಲಕ್ನೋ: ಇಲ್ಲಿನ ಏಕನ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 26ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ 6 ವಿಕೆಟ್‌ಗಳ ಗೆಲುವನ್ನು ಕಂಡಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ಆಯುಷ್‌ ಬದೋನಿ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 167 ರನ್‌ ಕಲೆಹಾಕಿ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ 168 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಡೆಲ್ಲಿ ಕ್ಯಾಪಿಟಲ್ಸ್‌ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ ಹಾಗೂ ನಾಯಕ ರಿಷಭ್‌ ಪಂತ್‌ ಉತ್ತಮ ಆಟದ ನೆರವಿನಿಂದ 18.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 170 ರನ್‌ ಕಲೆಹಾಕಿತು.

ಲಕ್ನೋ ಸೂಪರ್‌ಜೈಂಟ್ಸ್‌ ಇನ್ನಿಂಗ್ಸ್:‌ ತಂಡದ ಪರ ಕ್ವಿಂಟನ್‌ ಡಿ ಕಾಕ್‌ ಹಾಗೂ ಕೆಎಲ್‌ ರಾಹುಲ್‌ ಆರಂಭಿಕರಾಗಿ ಕಣಕ್ಕಿಳಿದರು. ಡಿಕಾಕ್‌ 19 (13) ರನ್‌ ಗಳಿಸಿದರೆ, ರಾಹುಲ್‌ 39 (22) ರನ್‌ ಗಳಿಸಿದರು. ಇನ್ನುಳಿದಂತೆ ದೇವದತ್‌ ಪಡಿಕ್ಕಲ್‌ 3(6) ರನ್, ಮಾರ್ಕಸ್‌ ಸ್ಟಾಯ್ನಿಸ್‌ 8 (10) ರನ್‌, ನಿಕೋಲಸ್‌ ಪೂರನ್‌ ಗೋಲ್ಡನ್‌ ಡಕ್‌, ದೀಪಕ್‌ ಹೂಡಾ 10 (13) ರನ್‌, ಕೃನಾಲ್‌ ಪಾಂಡ್ಯ 3 (4) ರನ್‌, ಅರ್ಷದ್‌ ಖಾನ್‌ ಅಜೇಯ 20 (16) ರನ್‌ ಹಾಗೂ ಅಂತಿಮ ಹಂತದಲ್ಲಿ ಆಸರೆಯಾದ ಆಯುಷ್‌ ಬದೋನಿ ಅಜೇಯ 55 (35) ರನ್‌ ಗಳಿಸಿದರು.

ಡೆಲ್ಲಿ ಕ್ಯಾಪಿಟಲ್ಸ್‌ ಪರ ಕುಲ್‌ದೀಪ್‌ ಯಾದವ್‌ 3 ವಿಕೆಟ್‌, ಖಲೀಲ್‌ ಅಹ್ಮದ್‌ 2 ವಿಕೆಟ್‌, ಇಶಾಂತ್‌ ಶರ್ಮಾ ಹಾಗೂ ಮುಕೇಶ್‌ ಕುಮಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಡೆಲ್ಲಿ ಕ್ಯಾಪಿಟಲ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 32 (22) ರನ್ ಹಾಗೂ ಡೇವಿಡ್‌ ವಾರ್ನರ್‌‌ 8 (9) ರನ್‌ ಕಲೆಹಾಕಿದರು. ಮೂರನೇ ವಿಕೆಟ್‌ಗೆ ಜತೆಯಾದ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ ಹಾಗೂ ನಾಯಕ ರಿಷಭ್‌ ಪಂತ್‌ 77 ರನ್‌ಗಳ ಜತೆಯಾಟವಾಡಿ ಆಸರೆಯಾದರು. ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ 55 (35) ರನ್‌, ಪಂತ್‌ 41 (24) ರನ್‌ ಬಾರಿಸಿದರು. ಟ್ರಿಸ್ಟನ್‌ ಸ್ಟಬ್ಸ್‌ ಅಜೇಯ 15 (9) ರನ್‌ ಮತ್ತು ಶಾಯ್‌ ಹೋಪ್‌ ಅಜೇಯ 11 (10) ರನ್‌ ಕಲೆಹಾಕಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಲಕ್ನೋ ಸೂಪರ್‌ ಜೈಂಟ್ಸ್‌ ಪರ ರವಿ ಬಿಷ್ಣೋಯಿ 2 ವಿಕೆಟ್‌, ಯಶ್‌ ಠಾಕೂರ್‌ ಹಾಗೂ ನವೀನ್‌ ಉಲ್‌ ಹಕ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago