ಕ್ರೀಡೆ

WPL-2024: ಆರ್‌ಸಿಬಿ ವಿರುದ್ಧ ಗೆದ್ದು ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಡೆಲ್ಲಿ

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವುಮೆನ್ಸ್‌ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 1 ರನ್ ಗಳ ರೋಚಕ ಗೆಲುವು ದಾಖಲಿಸಿದೆ.

ಆ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನ ಗಳಿಸಿದ ಜೊತೆಗೆ ಪ್ಲೇ ಆಫ್ ಗೆ ಅರ್ಹತೆ ಪಡೆದುಕೊಂಡಿತು.

ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಜೆಮೀಮಾ ರೋಡಿಗ್ರಸ್ 58, ಆಲಿಸ್ ಕ್ಯಾಪ್ಸಿ 48 ಅವರ ಅಮೋಘ ಆಟದಿಂದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.

ಈ ಗುರಿ ಬೆನ್ನಟ್ಟಿದ್ದ ಆರ್ ಸಿಬಿ ಪರ ತಂಡದ ನಾಯಕಿ ಸ್ಮೃತಿ ಮಂದನಾ ಕೇವಲ 5 ರನ್ ಗಳಿಗೆ ಔಟಾಗುವ ಮೂಲಕ ನಿರಾಸೆ ಉಂಟುಮಾಡಿದರು. ನಂತರ ಸೋಫಿ ಮೊಲಿನೆಕ್ಸ್ 33, ಎಲ್ಲಿಸ್ ಪೆರ್ರಿ 49 ರನ್ ಗಳ ನೆರವಿನಿಂದ ಗೆಲುವಿನ ಆಸೆ ಜೀವಂತವಾಗಿಟ್ಟುಕೊಂಡಿತ್ತು.

ನಂತರ ಬಂದ ರಿಚಾ ಘೋಷ್ ಬಿರುಸಿನ ಆಟವಾಡಿ ಗಮನ ಸೆಳೆದರು. ಕೊನೆ ಓವರ್ ನಲ್ಲಿ 17 ರನ್ ಬೇಕಿದ್ದಾಗ 2 ಸಿಕ್ಸರ್ ಸಿಡಿಸಿದರು. ಆದರೆ, ಕೊನೆ ಎಸೆತದಲ್ಲಿ 2 ರನ್ ಬೇಕಿದ್ದಾಗ ರಿಚಾ ರನೌಟ್ ಆಗುವುದರೊಂದಿಗೆ ಆರ್‌ಸಿಬಿ ಗೆಲುವನ್ನು ಡೆಲ್ಲಿ ಕಸಿದುಕೊಂಡಿತು. ಅಂತಿಮವಾಗಿ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಕೇವಲ 180 ರನ್ ಗಳಿಸುವ ಮೂಲಕ ಒಂದು ರನ್‌ಗಳಿಂದ ಪರಾಭವಗೊಂಡಿತು.

ಪಂದ್ಯ ಶ್ರೇಷ್ಠ: ಜೆಮೀಮಾ ರೋಡಿಗ್ರಸ್

andolanait

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago