ಕ್ರೀಡೆ

ದೇವಧರ್‌ ಟ್ರೋಫಿ| ಸಾಯ್ ಸುದರ್ಶನ್‌ ಶತಕ: ಫೈನಲ್‌ ತಲುಪಿದ ದಕ್ಷಿಣ ವಲಯ

ಪುದುಚರಿ: ಸೋಲಿಲ್ಲದ ಸರದಾರನಂತೆ ಮೆರೆದಿರುವ ದಕ್ಷಿಣ ವಲಯ ತಂಡ 2023ರ ಸಾಲಿನ ಪ್ರತಿಷ್ಠಿತ ದೇವಧರ್‌ ಟ್ರೋಫಿ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಫೈನಲ್‌ಗೆ ದಾಪುಗಾಲಿಟ್ಟಿದೆ. ಆಗಸ್ಟ್‌ 1 (ಮಂಗಳವಾರ)ರಂದು ನಡೆದ ಪಂದ್ಯದಲ್ಲಿ ಯುವ ಬ್ಯಾಟರ್‌ ಸಾಯ್‌ ಸುದರ್ಶನ್‌ (132*) ಬಾರಿಸಿದ ಅಜೇಯ ಶತಕದ ಬಲದಿಂದ ಮಿಂಚಿದ ದಕ್ಷಿಣ ವಲಯ ತಂಡ 7 ವಿಕೆಟ್‌ಗಳಿಂದ ಕೇಂದ್ರ ವಲಯ ತಂಡವನ್ನು ಬಗ್ಗುಬಡಿಯುವ ಮೂಲಕ ಟೂರ್ನಿಯ ಫೈನಲ್‌ ಪ್ರವೇಶಿಸಿದೆ.

ಆಗಸ್ಟ್‌ 3ರಂದು ಇಲ್ಲಿನ ಸೈಚೆಮ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯ ತಂಡ ಸೌರಭ್ ತಿವಾರಿ ಸಾರಥ್ಯದ ಪೂರ್ವ ವಲಯ ಎದುರು ಪೈಪೋಟಿ ನಡೆಸಲಿದೆ.

ರೌಂಡ್‌ ರಾಬಿನ್‌ ಹಂತದಲ್ಲಿ ದಕ್ಷಿಣ ವಲಯ ತಾನು ಆಡಿದ ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದು ಒಟ್ಟಾರೆ 20 ಅಂಕಗಳನ್ನು ಕಲೆಹಾಕಿ ಅಗ್ರಸ್ಥಾನ ಪಡೆದುಕೊಂಡಿತು. ಫೈನಲ್‌ ತಲುಪಿರುವ ಈಸ್ಟ್‌ ಝೋನ್‌ ಎದುರು ನಡೆದಿದ್ದ ಪಂದ್ಯದಲ್ಲಿ 12 ರನ್‌ಗಳ ರೋಚಕ ಜಯ ದಕ್ಕಿಸಿಕೊಂಡಿತ್ತು. ಹೀಗಾಗಿ ಫೈನಲ್‌ನಲ್ಲಿ ದಕ್ಷಿಣ ಮತ್ತು ಪೂರ್ವ ವಲಯಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಈಸ್ಟ್‌ ಝೋನ್‌ ತನ್ನ ಕೊನೆ ಪಂದ್ಯದಲ್ಲಿ ವೆಸ್ಟ್‌ ಝೋನ್‌ ಎದುರು 157 ರನ್‌ಗಳ ಭರ್ಜರಿ ಜಯ ದಾಖಲಿಸಿದೆ.

ಟಾಸ್‌ ಗೆದ್ದು ಬ್ಯಾಟ್‌ ಮಾಡಿದ್ದ ಕೇಂದ್ರ ವಲಯ
ಮಂಗಳವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಕೇಂದ್ರ ವಲಯ (ಸೆಂಟ್ರಲ್‌ ಝೋನ್‌) ತಂಡ ತನ್ನ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 261 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತ್ತು. ಶಿವಂ ಚೌಧುರಿ (37), ಯಶ್‌ ದುಬೇ (77) ಮತ್ತು ಶಿವಂ ಮಾವಿ (38) ಬ್ಯಾಟಿಂಗ್‌ ನೆರವಿನಿಂದ ಕೇಂದ್ರ ವಲಯ 260ರ ಗಡಿ ದಾಟಿತು. ದಕ್ಷಿಣ ವಲಯ ಪರ ಮಿಂಚಿದ ಮೋಹಿತ್ ರೆದ್ಕಾಡ್‌ (51ಕ್ಕೆ 3), ವೈಶಾಕ್ ಕೌಶಿಕ್ (15ಕ್ಕೆ 2) ಮತ್ತು ಅರ್ಜುನ್‌ ತೆಂಡೂಲ್ಕರ್‌ (65ಕ್ಕೆ 2) ವಿಕೆಟ್‌ ಪಡೆದರು.

ಯಶಸ್ವಿ ರನ್‌ ಚೇಸ್‌ ಮಾಡಿದ ಸೌತ್ ಝೋನ್
ರನ್‌ ಚೇಸ್‌ ಆರಂಭಿಸಿದ ದಕ್ಷಿಣ ವಲಯಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಇನಿಂಗ್ಸ್‌ ಆರಂಭಿಸಿದ ನಾಯಕ ಮಯಾಂಕ ಅಗರ್ವಾಲ್‌ ಒಂದು ಎಸೆತವನ್ನೂ ಎದುರಿಸಿದರೆ, ಗಾಯದ ಸಮಸ್ಯೆಗೆ ತುತ್ತಾಗಿ ರಿಟೈರ್ಡ್‌ ಹರ್ಟ್‌ ಆದರು. ಮತ್ತೊಬ್ಬ ಓಪನರ್‌ ರೋಹನ್ ಕುನ್ನುಮಾಲ್‌ (24) ಸಿಕ್ಕ ಆರಂಭದ ಲಾಭ ತೆಗೆದುಕೊಳ್ಳಲಿಲ್ಲ.

3ನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡಿದ ಇನ್‌ ಫಾರ್ಮ್‌ ಬ್ಯಾಟರ್‌ ಸಾಯ್ ಸುದರ್ಶನ್‌, 136 ಎಸೆತಗಳಲ್ಲಿ 11 ಫೋರ್‌ ಮತ್ತೊಂದು ಸಿಕ್ಸರ್‌ ಒಳಗೊಂಡಂತೆ ಅಜೇಯ 132 ರನ್‌ ಬಾರಿಸಿದರು. ಅವರಿಗೆ ಇನಿಂಗ್ಸ್‌ ಮಧ್ಯದಲ್ಲಿ ರೋಹಿತ್‌ ರಾಯುಡು (37) ಮತ್ತು ವಾಷಿಂಗ್ಟನ್‌ ಸುಂದರ್‌ (47*) ಉತ್ತಮ ಸಾಥ್‌ ನೀಡಿದರು. 48.2 ಓವರ್‌ಗಳಲ್ಲಿ 262 ರನ್‌ ಕಲೆಹಾಕಿದ ಸೌತ್‌ಝೋನ್‌ 7 ವಿಕೆಟ್‌ಗಳ ಜಯ ತನ್ನದಾಗಿಸಿಕೊಂಡಿತು.

andolanait

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

6 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

7 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

7 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

8 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

9 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

17 hours ago