ಕ್ರೀಡೆ

ದೇವಧರ್ ಟ್ರೋಫಿ: ಅಗರ್ವಾಲ್ ಸಾರಥ್ಯದ ದಕ್ಷಿಣ ವಲಯ ಚಾಂಪಿಯನ್ಸ್

ಪುದುಚೇರಿ : ಪುದುಚೇರಿಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ದೇವಧರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಮಯಾಂಕ್ ಅಗರ್ವಾಲ್ ನೇತೃತ್ವದ ದಕ್ಷಿಣ ವಲಯ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಪೂರ್ವ ವಲಯ ತಂಡದ ವಿರುದ್ಧ ನಡೆದ ಅಂತಿಮ ಹಣಾಹಣಿಯಲ್ಲಿ ಟಾಸ್ ಗೆದ್ದ ದಕ್ಷಿಣ ವಲಯ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ದಕ್ಷಿಣ ವಲಯ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು.

ಮೊದಲ ವಿಕೆಟ್‌ಗೆ 181 ರನ್ ಪೇರಿಸಿದ ಈ ಜೋಡಿ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಇದರ ನಡುವೆ ರೋಹನ್ ಕೇವಲ 68 ಎಸೆತಗಳಲ್ಲಿ ಬಿರುಸಿನ ಸೆಂಚುರಿ ಸಿಡಿಸಿದರು. ಅಲ್ಲದೆ ಕೇವಲ 75 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್ಗಳೊಂದಿಗೆ 107 ರನ್ ಬಾರಿಸಿ ಔಟಾದರು. ಮತ್ತೊಂದೆಡೆ ಮಯಾಂಕ್ ಅಗರ್ವಾಲ್ 83 ಎಸೆತಗಳಲ್ಲಿ 4 ಫೋರ್ಗಳೊಂದಿಗೆ 63 ರನ್ ಕಲೆಹಾಕಿದರು.

ಆ ಬಳಿಕ ಬಂದ ಎನ್. ಜಗದೀಸನ್ (54) ಅರ್ಧಶತಕದ ಕೊಡುಗೆ ನೀಡಿದರೆ, ರೋಹಿತ್ ರಾಯುಡು 26 ರನ್ಗಳ ಕಾಣಿಕೆ ನೀಡಿದರು. ಇನ್ನು ಅಂತಿಮ ಹಂತದಲ್ಲಿ ಅಜೇಯ 24 ರನ್ ಬಾರಿಸಿ ಸಾಯಿ ಕಿಶೋರ್ ಅಬ್ಬರಿಸಿದರು. ಪರಿಣಾಮ ನಿಗದಿತ 50 ಓವರ್ಗಳಲ್ಲಿ ದಕ್ಷಿಣ ವಲಯ ತಂಡವು 8 ವಿಕೆಟ್ ಕಳೆದುಕೊಂಡು 328 ರನ್ ಕಲೆಹಾಕಿತು.

329 ರನ್‌ಗಳ ಕಠಿಣ ಗುರಿ ಬೆನ್ನತ್ತಿದ ಪೂರ್ವ ವಲಯ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಅಭಿಮನ್ಯು ಈಶ್ವರನ್ (1) ಅನ್ನು ವಿ ಕೌಶಿಕ್ ಔಟ್ ಮಾಡಿದರೆ, ಉತ್ಕರ್ಷ್ ಸಿಂಗ್ (4) ವಿಧ್ವತ್ ಕಾವೇರಪ್ಪ ಎಸೆತದಲ್ಲಿ ಔಟಾದರು. ಇನ್ನು ವಿರಾಟ್ ಸಿಂಗ್ (6) ಕೌಶಿಕ್‌ಗೆ ವಿಕೆಟ್ ಒಪ್ಪಿಸಿದರು.

ಈ ಹಂತದಲ್ಲಿ ಕಣಕ್ಕಿಳಿದ ಸಂದೀಪ್ ಕುಮಾರ್ 41 ರನ್ ಬಾರಿಸಿ ತಂಡಕ್ಕೆ ಆಸರೆಯಾದರು. ಇನ್ನು ನಾಯಕ ಸೌರಭ್ ತಿವಾರಿ 28 ರನ್ಗಳಿಸಿ ಔಟಾದರು. ಪರಿಣಾಮ ಕೇವಲ 115 ರನ್ಗಳಿಗೆ 5 ವಿಕೆಟ್ ಕಳೆದುಕೊಂಡು ಪೂರ್ವ ವಲಯ ಸಂಕಷ್ಟಕ್ಕೆ ಸಿಲುಕಿತ್ತು.

ಈ ವೇಳೆ ಕ್ರೀಸ್ಗೆ ಆಗಮಿಸಿದ ರಿಯಾನ್ ಪರಾಗ್ ಅಕ್ಷರಶಃ ಅಬ್ಬರಿಸಿದರು. ಕುಮಾರ್ ಕುಶಾಗ್ರ ಜೊತೆಗೂಡಿ ಬ್ಯಾಟ್ ಬೀಸಿದ ಪರಾಗ್ ದಕ್ಷಿಣ ವಲಯ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ ಯುವ ದಾಂಡಿಗನ ಬ್ಯಾಟ್ನಿಂದ 5 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳು ಮೂಡಿಬಂದವು.

6ನೇ ವಿಕೆಟ್ಗೆ 105 ರನ್ಗಳ ಜೊತೆಯಾಟವಾಡಿದ ರಿಯಾನ್ ಪರಾಗ್ ಹಾಗೂ ಕುಮಾರ್ ಕುಶಾಗ್ರರನ್ನು ಬೇರ್ಪಡಿಸುವಲ್ಲಿ ಕೊನೆಗೂ ವಾಷಿಂಗ್ಟನ್ ಸುಂದರ್ ಯಶಸ್ವಿಯಾದರು. 65 ಎಸೆತಗಳಲ್ಲಿ 95 ರನ್ ಬಾರಿಸಿದ್ದ ರಿಯಾನ್ ಪರಾಗ್ರನ್ನು ಸುಂದರ್ ಎಲ್ಬಿಡಬ್ಲ್ಯೂ ಮಾಡಿದರು.

ಇದರ ಬೆನ್ನಲ್ಲೇ 58 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 68 ಬಾರಿಸಿದ್ದ ಕುಮಾರ್ ಕುಶಾಗ್ರಗೂ ವಾಷಿಂಗ್ಟನ್ ಸುಂದರ್ ಪೆವಿಲಿಯನ್ ಹಾದಿ ತೋರಿಸಿದರು. ಬ್ಯಾಕ್ ಟು ಬ್ಯಾಕ್ ವಿಕೆಟ್ ಸಿಗುತ್ತಿದ್ದಂತೆ ಮೇಲುಗೈ ಸಾಧಿಸಿದ ದಕ್ಷಿಣ ವಲಯ ಬೌಲರ್ಗಳು 46.1 ಓವರ್ಗಳಲ್ಲಿ 283 ರನ್ಗಳಿಗೆ ಪೂರ್ವ ವಲಯವನ್ನು ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಈ ಮೂಲಕ 45 ರನ್ಗಳ ಅಮೋಘ ಗೆಲುವು ದಾಖಲಿಸಿ ದಕ್ಷಿಣ ವಲಯ ತಂಡವು ದೇವಧರ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಸಂಕ್ಷಿಪ್ತ ಸ್ಕೋರ್
ದಕ್ಷಿಣ ವಲಯ : 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 328 ರನ್ (ರೋಹನ್ ಕುನ್ನುಮಲ್ 107, ಮಯಾಂಕ್ ಅಗರ್ವಾಲ್ 63, ಎನ್. ಜಗದೀಶನ್ 54; ಉತ್ಕರ್ಷ್ ಸಿಂಗ್ 50ಕ್ಕೆ 2, ಶಹಬಾಝ್ ಅಹ್ಮದ್ 55ಕ್ಕೆ 2, ರಿಯಾನ್ ಪರಾಗ್ 60ಕ್ಕೆ 2).

ಪೂರ್ವ ವಲಯ : 46.1 ಓವರ್ ಗಳಲ್ಲಿ 283 ರನ್‌ಗೆ ಆಲ್‌ಔಟ್‌ (ರಿಯಾನ್ ಪರಾಗ್ 95, ಕುಮಾರ ಕುಶಾಗ್ರ 68; ವಾಷಿಂಗ್ಟನ್ ಸುಂದರ್ 60ಕ್ಕೆ 3, ವಾಸುಕಿ ಕೌಶಿಕ್ 49ಕ್ಕೆ 2, ವಿ. ವೈಶಾಕ್ 59ಕ್ಕೆ 2, ವಿದ್ವತ್ ಕಾವೇರಪ್ಪ 61ಕ್ಕೆ 2).

ಪಂದ್ಯ ಶ್ರೇಷ್ಠ: ರೋಹನ್ ಕುನ್ನುಮಲ್

ಸರಣಿ ಶ್ರೇಷ್ಠ: ರಿಯಾನ್ ಪರಾಗ್

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

12 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

13 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

13 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

15 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

15 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

16 hours ago