ಕ್ರೀಡೆ

ಏಷ್ಯನ್ ಯೂತ್ ಚೆಸ್ ಚಾಂಪಿಯನ್‌ಶಿಪ್‌ಗೆ ಮೈಸೂರಿನ ಧಾತ್ರಿ ಉಮೇಶ್

ಮೈಸೂರು : ಕರ್ನಾಟಕದ ಭರವಸೆಯ ಚೆಸ್ ಚಾಂಪಿಯನ್ ಧಾತ್ರಿ ಉಮೇಶ್ ಯುನೈಟೆಡ್ ಅರಬ್ ಎಮಿರೈಟ್ಸ್ ನಲ್ಲಿ ಈ ತಿಂಗಳು ನಡೆಯಲಿರುವ ಏಷ್ಯನ್ ಯೂತ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.

ಕಳೆದ ವರ್ಷದ ಅಂತ್ಯದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಚೆಸ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಚಾಪು ಮೂಡಿಸಲು ಸಜ್ಜಾಗಿದ್ದಾರೆ. ಐದನೇ ವಯಸ್ಸಿಗೆ ಚೆಸ್ ಆಟ ಆಡಲು ಪ್ರಾರಂಭಿಸಿದ ಧಾತ್ರಿ, ಮೊದಲಿಗೆ ಮೈಸೂರು ಚೆಸ್ ಸೆಂಟರ್‌ನ ಸುರೇಶ್ ಅವರ ಮಾರ್ಗದರ್ಶನದಲ್ಲಿ ಅನಂತರ ಬೆಂಗಳೂರಿನ ಅರವಿಂದ ಶಾಸ್ತ್ರಿಯವರ ಬಳಿ ಚದುರಂಗದ ಪಟ್ಟುಗಳನ್ನು ಕಲಿತು ಇದೀಗ ವಿಶ್ವಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಲು ಸಿದ್ಧವಾಗಿದ್ದಾರೆ.

ಈ ಬಾರಿಯ ಏಷ್ಯನ್ ಯೂತ್ ಚೆಸ್ ಚಾಂಪಿಯನ್‌ಶಿಪ್ ಯು.ಎ.ಯಿನ ಆಲ್ ಅಮೀನ್‌ನಲ್ಲಿ ಡಿಸೆಂಬರ್ 12 ರಿಂದ ಡಿಸೆಂಬರ್ 22 ರವರೆಗೆ ಆಯೋಜನೆಗೊಂಡಿದೆ. ಜಗತ್ತಿನ ಬಹುತೇಕ ಎಲ್ಲ ಚದುರಂಗದ ಆಟಗಾರರು ಈ ಪ್ರತಿಷ್ಠಿತ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ಧಾತ್ರಿ ಟೂರ್ನಿಯಲ್ಲಿ ಭಾಗವಹಿಸಲು ಡಿಸೆಂಬರ್ 11ರಂದು ದುಬೈಗೆ ಪ್ರಯಾಣ ಬೆಳೆಸಲಿದ್ದಾರೆ.

ಲೇಖಕ ಎಸ್ ಉಮೇಶ್ ಮತ್ತು ಬೃಂದಾ ದಂಪತಿಗಳ ಪುತ್ರಿಯಾದ ಧಾತ್ರಿ ಮೈಸೂರಿನ ಎನ್ ಪಿಎಸ್‌ ಶಾಲೆಯಲ್ಲಿ ಹತ್ತನೇ ತರಗತಿ ಮುಗಿಸಿ ಇದೀಗ ಮಂಗಳೂರಿನ ಎಕ್ಸ್ಪರ್ಟ್‌ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದಾರೆ. ಎಕ್ಸ್ಪರ್ಟ್‌ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಾದ ಡಾ. ವಿಜಯನ್ ಅವರು ಧಾತ್ರಿಯ ಈ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಧಾತ್ರಿ ನಮ್ಮ ಕಾಲೇಜಿನ ಹೆಮ್ಮೆ. ಆಕೆ ಮುಂಬರುವ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಸಾಧನೆ ಮಾಡಿ ದೇಶಕ್ಕೆ, ರಾಜ್ಯಕ್ಕೆ ಮತ್ತು ತಮ್ಮ ಕಾಲೇಜಿಗೆ ಕೀರ್ತಿ ತರುವಂತಾಗಲಿ ಎಂದು ಹಾರೈಸಿದ್ದಾರೆ.

lokesh

Recent Posts

ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣ: ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌

ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ಪ್ರಕರಣ ರದ್ದು…

45 mins ago

ಹಾಸನ| ಫೈನಾನ್ಸ್‌ ಸಿಬ್ಬಂದಿ ಕಿರುಕುಳ ಆರೋಪ: ವಿಷ ಕುಡಿದು ರೈತ ಆತ್ಮಹತ್ಯೆ

ಹಾಸನ: ಮನೆ ಸೀಜ್‌ ಮಾಡುವುದಾಗಿ ಫೈನಾನ್ಸ್‌ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ…

56 mins ago

ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ

ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ…

1 hour ago

4 ಲಕ್ಷ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಸಸ್ಪೆಂಡ್‌

ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ…

2 hours ago

ಜೈಲಿಗೆ ಹೋಗಿ ಬಂದ್ರೂ ಬುದ್ಧಿ ಕಲಿಯದ ರಜತ್:‌ ಮತ್ತೊಂದು ಯಡವಟ್ಟು.!

ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್‌ ಸೇದುತ್ತಾ ರಜತ್‌ ಫೋಟೋಶೂಟ್‌ ಮಾಡಿಸಿದ್ದು, ಬಿಗ್‌ಬಾಸ್‌ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ…

2 hours ago

ಮೈಸೂರು: ಲೋಕಾಯುಕ್ತ ಪೊಲೀಸರಿಂದ ಏಳು ಕಡೆ ದಾಳಿ: ದಾಖಲೆಗಳ ಪರಿಶೀಲನೆ

ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ.…

3 hours ago