ಕ್ರೀಡೆ

ಏಷ್ಯನ್ ಯೂತ್ ಚೆಸ್ ಚಾಂಪಿಯನ್‌ಶಿಪ್‌ಗೆ ಮೈಸೂರಿನ ಧಾತ್ರಿ ಉಮೇಶ್

ಮೈಸೂರು : ಕರ್ನಾಟಕದ ಭರವಸೆಯ ಚೆಸ್ ಚಾಂಪಿಯನ್ ಧಾತ್ರಿ ಉಮೇಶ್ ಯುನೈಟೆಡ್ ಅರಬ್ ಎಮಿರೈಟ್ಸ್ ನಲ್ಲಿ ಈ ತಿಂಗಳು ನಡೆಯಲಿರುವ ಏಷ್ಯನ್ ಯೂತ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.

ಕಳೆದ ವರ್ಷದ ಅಂತ್ಯದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಚೆಸ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದು ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಚಾಪು ಮೂಡಿಸಲು ಸಜ್ಜಾಗಿದ್ದಾರೆ. ಐದನೇ ವಯಸ್ಸಿಗೆ ಚೆಸ್ ಆಟ ಆಡಲು ಪ್ರಾರಂಭಿಸಿದ ಧಾತ್ರಿ, ಮೊದಲಿಗೆ ಮೈಸೂರು ಚೆಸ್ ಸೆಂಟರ್‌ನ ಸುರೇಶ್ ಅವರ ಮಾರ್ಗದರ್ಶನದಲ್ಲಿ ಅನಂತರ ಬೆಂಗಳೂರಿನ ಅರವಿಂದ ಶಾಸ್ತ್ರಿಯವರ ಬಳಿ ಚದುರಂಗದ ಪಟ್ಟುಗಳನ್ನು ಕಲಿತು ಇದೀಗ ವಿಶ್ವಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಲು ಸಿದ್ಧವಾಗಿದ್ದಾರೆ.

ಈ ಬಾರಿಯ ಏಷ್ಯನ್ ಯೂತ್ ಚೆಸ್ ಚಾಂಪಿಯನ್‌ಶಿಪ್ ಯು.ಎ.ಯಿನ ಆಲ್ ಅಮೀನ್‌ನಲ್ಲಿ ಡಿಸೆಂಬರ್ 12 ರಿಂದ ಡಿಸೆಂಬರ್ 22 ರವರೆಗೆ ಆಯೋಜನೆಗೊಂಡಿದೆ. ಜಗತ್ತಿನ ಬಹುತೇಕ ಎಲ್ಲ ಚದುರಂಗದ ಆಟಗಾರರು ಈ ಪ್ರತಿಷ್ಠಿತ ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. ಧಾತ್ರಿ ಟೂರ್ನಿಯಲ್ಲಿ ಭಾಗವಹಿಸಲು ಡಿಸೆಂಬರ್ 11ರಂದು ದುಬೈಗೆ ಪ್ರಯಾಣ ಬೆಳೆಸಲಿದ್ದಾರೆ.

ಲೇಖಕ ಎಸ್ ಉಮೇಶ್ ಮತ್ತು ಬೃಂದಾ ದಂಪತಿಗಳ ಪುತ್ರಿಯಾದ ಧಾತ್ರಿ ಮೈಸೂರಿನ ಎನ್ ಪಿಎಸ್‌ ಶಾಲೆಯಲ್ಲಿ ಹತ್ತನೇ ತರಗತಿ ಮುಗಿಸಿ ಇದೀಗ ಮಂಗಳೂರಿನ ಎಕ್ಸ್ಪರ್ಟ್‌ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದಾರೆ. ಎಕ್ಸ್ಪರ್ಟ್‌ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಾದ ಡಾ. ವಿಜಯನ್ ಅವರು ಧಾತ್ರಿಯ ಈ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಧಾತ್ರಿ ನಮ್ಮ ಕಾಲೇಜಿನ ಹೆಮ್ಮೆ. ಆಕೆ ಮುಂಬರುವ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಸಾಧನೆ ಮಾಡಿ ದೇಶಕ್ಕೆ, ರಾಜ್ಯಕ್ಕೆ ಮತ್ತು ತಮ್ಮ ಕಾಲೇಜಿಗೆ ಕೀರ್ತಿ ತರುವಂತಾಗಲಿ ಎಂದು ಹಾರೈಸಿದ್ದಾರೆ.

lokesh

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago