ಕ್ರೀಡೆ

ನನ್ನ ಮತ್ತು ಧೋನಿ ನಡುವೆ ಉತ್ತಮ ಗೆಳತನವಿರಲಿಲ್ಲ: ಯುವರಾಜ್ ಸಿಂಗ್

ನವದೆಹಲಿ : ಭಾರತ ಕ್ರಿಕೆಟ್ ತಂಡವು ಕಂಡು ಇಬ್ಬರು ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟರ್ ಗಳು ಯುವರಾಜ್ ಸಿಂಗ್ ಹಾಗೂ ಎಂ.ಎಸ್.ಧೋನಿ. ಅವರಿಬ್ಬರೂ ಹಲವಾರು ವರ್ಷಗಳ ಕಾಲ ರಾಷ್ಟ್ರೀಯ ತಂಡಕ್ಕೆ ಸೇವೆ ಸಲ್ಲಿಸಿದ್ದು, ವಿವಿಧ ದೊಡ್ಡ ಕ್ರೀಡಾಕೂಟಗಳಲ್ಲಿನ ಪ್ರಶಸ್ತಿಗಳನ್ನು ಜಯಿಸುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ.

ಈ ಇಬ್ಬರೂ ಬ್ಯಾಟರ್ ಗಳು ಸದ್ಯ ನಿವೃತ್ತರಾಗಿದ್ದರೂ, ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧಗಳ ಕುರಿತು ಈಗಲೂ ಕೆಲವು ನಂಬಿಕೆಗಳು ಹಾಗೂ ವದಂತಿಗಳಿವೆ. ಆದರೀಗ ಅವರಿಬ್ಬರೂ ಆತ್ಮೀಯ ಗೆಳೆಯರಾಗಿರಲಿಲ್ಲ ಎಂಬ ಸಂಗತಿಯನ್ನು ಯುವರಾಜ್ ಸಿಂಗ್ ಬಹಿರಂಗ ಪಡಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

“ನಾನು ಹಾಗೂ ಧೋನಿ ಭಾರತ ತಂಡದ ಪರವಾಗಿ ಕ್ರಿಕೆಟ್ ಆಡಿದ್ದರಿಂದಾಗಿ ನಾವಿಬ್ಬರೂ ಗೆಳೆಯರಾಗಿದ್ದೇವೆ” ಎಂದು ಯುವರಾಜ್‌ ಹೇಳಿದ್ದು, ತಮ್ಮ ವೈಯಕ್ತಿಕ ಜೀವನದಲ್ಲಿ ಇಬ್ಬರೂ ಪರಸ್ಪರ ಸಂಪರ್ಕ ಹೊಂದಿಲ್ಲದಿರುವುದು ಈ ಸಂದರ್ಭದಲ್ಲಿ ಬಹಿರಂಗವಾಗಿದೆ.

“ನಾನು ಮತ್ತು ಮಾಹಿ (ಧೋನಿ) ಆತ್ಮೀಯ ಗೆಳೆಯರಲ್ಲ. ನಾವು ಒಟ್ಟಿಗೆ ಕ್ರಿಕೆಟ್ ಆಡಿದ ಕಾರಣಕ್ಕೆ ಗೆಳೆಯರಾಗಿದ್ದೇವೆ. ಮಾಹಿಯ ಜೀವನ ಶೈಲಿಯು ನನಗಿಂತ ತುಂಬಾ ಭಿನ್ನವಾಗಿರುವುದರಿಂದ ನಾವಿಬ್ಬರೂ ಆತ್ಮೀಯ ಗೆಳೆಯರಾಗಲೇ ಇಲ್ಲ. ನಾವು ಕ್ರಿಕೆಟ್ ಕಾರಣಕ್ಕೆ ಮಾತ್ರ ಗೆಳೆಯರಾಗಿದ್ದೇವೆ.

ನಾನು ಮತ್ತು ಮಾಹಿ ಮೈದಾನಕ್ಕೆ ತೆರಳಿದಾಗ ದೇಶಕ್ಕಾಗಿ ಶೇ. 100ಕ್ಕಿಂತ ಹೆಚ್ಚು ಕಾಣಿಕೆ ನೀಡಿದ್ದೇವೆ. ಆ ಪಂದ್ಯಗಳಲ್ಲಿ ಅವರು ನಾಯಕರು, ನಾನು ಉಪ ನಾಯಕ ಆಗಿರುತ್ತಿದ್ದೆ. ನಾನು ತಂಡಕ್ಕೆ ಸೇರ್ಪಡೆಯಾದಾಗ ನಾನು ಅವರಿಗಿಂತ ನಾಲ್ಕು ವರ್ಷ ಕಿರಿಯನಾಗಿದ್ದೆ. ನೀವು ನಾಯಕ ಮತ್ತು ಉಪ ನಾಯಕರಾಗಿದ್ದಾಗ ನಿರ್ಧಾರ ಕೈಗೊಳ್ಳುವಾಗ ಭಿನ್ನಾಭಿಪ್ರಾಯ ಮೂಡುವುದು ಸಹಜ” ಎಂದು ಅವರು ಹೇಳಿಕೊಂಡಿದ್ದಾರೆ.

“ಕೆಲವು ಸಮಯ ಅವರು ತೆಗೆದುಕೊಂಡ ನಿರ್ಧಾರಗಳು ನನಗೆ ಇಷ್ಟವಾಗಿರಲಿಲ್ಲ; ನಾನು ತೆಗೆದುಕೊಂಡ ನಿರ್ಧಾರಗಳು ಅವರಿಗೆ ಇಷ್ಟವಾಗಿರಲಿಲ್ಲ. ಅದು ಪ್ರತಿ ತಂಡದಲ್ಲೂ ಆಗುತ್ತದೆ. ನಾನು ನನ್ನ ವೃತ್ತಿ ಜೀವನದ ಕೊನೆಯಲ್ಲಿದ್ದಾಗ, ನನ್ನ ವೃತ್ತಿ ಜೀವನದ ಬಗ್ಗೆ ನನಗೆ ಸರಿಯಾದ ಚಿತ್ರಣ ದೊರೆಯದೆ ಇದ್ದಾಗ ನಾನು ಅವರ ಸಲಹೆಯನ್ನು ಕೇಳಿದೆ. ಆಗ ಅವರು, ಆಯ್ಕೆ ಸಮಿತಿಯು ಸದ್ಯ ನಿನ್ನನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ನನಗೆ ಕನಿಷ್ಠ ಪಕ್ಷ ನೈಜ ಚಿತ್ರಣ ಬೇಕಿತ್ತು. ಆ ಘಟನೆ ನಡೆದದ್ದು 2019ರ ವಿಶ್ವಕಪ್ ಗೂ ಕೆಲವೇ ದಿನಗಳ ಮುನ್ನ. ಅದೇ ವಾಸ್ತವ” ಎಂದು ಬಹಿರಂಗಪಡಿಸಿದ್ದಾರೆ.

ಯಾವುದೇ ಕ್ರೀಡೆಯ ತಂಡದ ಸದಸ್ಯರು ಪರಸ್ಪರ ಅತ್ಯುತ್ತಮ ಗೆಳೆಯರಾಗಿರಬೇಕಾದ ಅಗತ್ಯವಿಲ್ಲ. ಆದರೆ, ಮೈದಾನಕ್ಕಿಳಿದಾಗ ಅವರು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ತಂಡಕ್ಕೆ ನೀಡಬೇಕು ಎಂದು ಯುವರಾಜ್ ಸಿಂಗ್ ಒತ್ತಿ ಹೇಳಿದ್ದಾರೆ.

ಯುವರಾಜ್ ಸಿಂಗ್ ಹಾಗೂ ಎಂ.ಎಸ್.ಧೋನಿ ಅತ್ಯುತ್ತಮ ಗೆಳೆಯರಲ್ಲವಾದರೂ, ಅವರಿಬ್ಬರೂ ಒಂದೇ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು.

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

2 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

5 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

7 hours ago