ಕ್ರೀಡೆ

ನನ್ನ ಮತ್ತು ಧೋನಿ ನಡುವೆ ಉತ್ತಮ ಗೆಳತನವಿರಲಿಲ್ಲ: ಯುವರಾಜ್ ಸಿಂಗ್

ನವದೆಹಲಿ : ಭಾರತ ಕ್ರಿಕೆಟ್ ತಂಡವು ಕಂಡು ಇಬ್ಬರು ಅತ್ಯುತ್ತಮ ಮಧ್ಯಮ ಕ್ರಮಾಂಕದ ಬ್ಯಾಟರ್ ಗಳು ಯುವರಾಜ್ ಸಿಂಗ್ ಹಾಗೂ ಎಂ.ಎಸ್.ಧೋನಿ. ಅವರಿಬ್ಬರೂ ಹಲವಾರು ವರ್ಷಗಳ ಕಾಲ ರಾಷ್ಟ್ರೀಯ ತಂಡಕ್ಕೆ ಸೇವೆ ಸಲ್ಲಿಸಿದ್ದು, ವಿವಿಧ ದೊಡ್ಡ ಕ್ರೀಡಾಕೂಟಗಳಲ್ಲಿನ ಪ್ರಶಸ್ತಿಗಳನ್ನು ಜಯಿಸುವಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸಿದ್ದಾರೆ.

ಈ ಇಬ್ಬರೂ ಬ್ಯಾಟರ್ ಗಳು ಸದ್ಯ ನಿವೃತ್ತರಾಗಿದ್ದರೂ, ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧಗಳ ಕುರಿತು ಈಗಲೂ ಕೆಲವು ನಂಬಿಕೆಗಳು ಹಾಗೂ ವದಂತಿಗಳಿವೆ. ಆದರೀಗ ಅವರಿಬ್ಬರೂ ಆತ್ಮೀಯ ಗೆಳೆಯರಾಗಿರಲಿಲ್ಲ ಎಂಬ ಸಂಗತಿಯನ್ನು ಯುವರಾಜ್ ಸಿಂಗ್ ಬಹಿರಂಗ ಪಡಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

“ನಾನು ಹಾಗೂ ಧೋನಿ ಭಾರತ ತಂಡದ ಪರವಾಗಿ ಕ್ರಿಕೆಟ್ ಆಡಿದ್ದರಿಂದಾಗಿ ನಾವಿಬ್ಬರೂ ಗೆಳೆಯರಾಗಿದ್ದೇವೆ” ಎಂದು ಯುವರಾಜ್‌ ಹೇಳಿದ್ದು, ತಮ್ಮ ವೈಯಕ್ತಿಕ ಜೀವನದಲ್ಲಿ ಇಬ್ಬರೂ ಪರಸ್ಪರ ಸಂಪರ್ಕ ಹೊಂದಿಲ್ಲದಿರುವುದು ಈ ಸಂದರ್ಭದಲ್ಲಿ ಬಹಿರಂಗವಾಗಿದೆ.

“ನಾನು ಮತ್ತು ಮಾಹಿ (ಧೋನಿ) ಆತ್ಮೀಯ ಗೆಳೆಯರಲ್ಲ. ನಾವು ಒಟ್ಟಿಗೆ ಕ್ರಿಕೆಟ್ ಆಡಿದ ಕಾರಣಕ್ಕೆ ಗೆಳೆಯರಾಗಿದ್ದೇವೆ. ಮಾಹಿಯ ಜೀವನ ಶೈಲಿಯು ನನಗಿಂತ ತುಂಬಾ ಭಿನ್ನವಾಗಿರುವುದರಿಂದ ನಾವಿಬ್ಬರೂ ಆತ್ಮೀಯ ಗೆಳೆಯರಾಗಲೇ ಇಲ್ಲ. ನಾವು ಕ್ರಿಕೆಟ್ ಕಾರಣಕ್ಕೆ ಮಾತ್ರ ಗೆಳೆಯರಾಗಿದ್ದೇವೆ.

ನಾನು ಮತ್ತು ಮಾಹಿ ಮೈದಾನಕ್ಕೆ ತೆರಳಿದಾಗ ದೇಶಕ್ಕಾಗಿ ಶೇ. 100ಕ್ಕಿಂತ ಹೆಚ್ಚು ಕಾಣಿಕೆ ನೀಡಿದ್ದೇವೆ. ಆ ಪಂದ್ಯಗಳಲ್ಲಿ ಅವರು ನಾಯಕರು, ನಾನು ಉಪ ನಾಯಕ ಆಗಿರುತ್ತಿದ್ದೆ. ನಾನು ತಂಡಕ್ಕೆ ಸೇರ್ಪಡೆಯಾದಾಗ ನಾನು ಅವರಿಗಿಂತ ನಾಲ್ಕು ವರ್ಷ ಕಿರಿಯನಾಗಿದ್ದೆ. ನೀವು ನಾಯಕ ಮತ್ತು ಉಪ ನಾಯಕರಾಗಿದ್ದಾಗ ನಿರ್ಧಾರ ಕೈಗೊಳ್ಳುವಾಗ ಭಿನ್ನಾಭಿಪ್ರಾಯ ಮೂಡುವುದು ಸಹಜ” ಎಂದು ಅವರು ಹೇಳಿಕೊಂಡಿದ್ದಾರೆ.

“ಕೆಲವು ಸಮಯ ಅವರು ತೆಗೆದುಕೊಂಡ ನಿರ್ಧಾರಗಳು ನನಗೆ ಇಷ್ಟವಾಗಿರಲಿಲ್ಲ; ನಾನು ತೆಗೆದುಕೊಂಡ ನಿರ್ಧಾರಗಳು ಅವರಿಗೆ ಇಷ್ಟವಾಗಿರಲಿಲ್ಲ. ಅದು ಪ್ರತಿ ತಂಡದಲ್ಲೂ ಆಗುತ್ತದೆ. ನಾನು ನನ್ನ ವೃತ್ತಿ ಜೀವನದ ಕೊನೆಯಲ್ಲಿದ್ದಾಗ, ನನ್ನ ವೃತ್ತಿ ಜೀವನದ ಬಗ್ಗೆ ನನಗೆ ಸರಿಯಾದ ಚಿತ್ರಣ ದೊರೆಯದೆ ಇದ್ದಾಗ ನಾನು ಅವರ ಸಲಹೆಯನ್ನು ಕೇಳಿದೆ. ಆಗ ಅವರು, ಆಯ್ಕೆ ಸಮಿತಿಯು ಸದ್ಯ ನಿನ್ನನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ನನಗೆ ಕನಿಷ್ಠ ಪಕ್ಷ ನೈಜ ಚಿತ್ರಣ ಬೇಕಿತ್ತು. ಆ ಘಟನೆ ನಡೆದದ್ದು 2019ರ ವಿಶ್ವಕಪ್ ಗೂ ಕೆಲವೇ ದಿನಗಳ ಮುನ್ನ. ಅದೇ ವಾಸ್ತವ” ಎಂದು ಬಹಿರಂಗಪಡಿಸಿದ್ದಾರೆ.

ಯಾವುದೇ ಕ್ರೀಡೆಯ ತಂಡದ ಸದಸ್ಯರು ಪರಸ್ಪರ ಅತ್ಯುತ್ತಮ ಗೆಳೆಯರಾಗಿರಬೇಕಾದ ಅಗತ್ಯವಿಲ್ಲ. ಆದರೆ, ಮೈದಾನಕ್ಕಿಳಿದಾಗ ಅವರು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ತಂಡಕ್ಕೆ ನೀಡಬೇಕು ಎಂದು ಯುವರಾಜ್ ಸಿಂಗ್ ಒತ್ತಿ ಹೇಳಿದ್ದಾರೆ.

ಯುವರಾಜ್ ಸಿಂಗ್ ಹಾಗೂ ಎಂ.ಎಸ್.ಧೋನಿ ಅತ್ಯುತ್ತಮ ಗೆಳೆಯರಲ್ಲವಾದರೂ, ಅವರಿಬ್ಬರೂ ಒಂದೇ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು.

andolanait

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

1 hour ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

2 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

2 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

2 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

6 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 hours ago