ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ಗಳು ಕಳಪೆ ಬೌಲಿಂಗ್ ಮಾಡುವ ಮೂಲಕ ನಾಯಕ ಮಹೇಂದ್ರಸಿಂಗ್ ಧೋನಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಬೌಲರ್ಗಳು ಆದಷ್ಟು ಬೇಗ ಸುಧಾರಿಸಿಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.
ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ದೊಡ್ಡ ಮೊತ್ತ ಪೇರಿಸಿತ್ತು. ಆದರೆ ಚೆನ್ನೈ ಬೌಲರ್ಗಳು ಉತ್ತಮವಾಗಿ ಬೌಲಿಂಗ್ ಮಾಡಿರಲಿಲ್ಲ. ಇದರಿಂದಾಗಿ ಚೆನ್ನೈ ತಂಡವು ಪ್ರಯಾಸದ ಜಯ ಸಾಧಿಸಿತು.
‘ವೈಡ್ ಮತ್ತು ನೋಬಾಲ್ಗಳನ್ನು ಕಡಿಮೆ ಮಾಡಬೇಕು. ರನ್ಗಳನ್ನು ಬಿಟ್ಟುಕೊಡಬಾರದು. ಬಿಗಿ ದಾಳಿ ನಡೆಸಬೇಕು ಎಂದು ಧೋನಿ ಈ ಹಿಂದೆಯೇ ತಮ್ಮ ಬೌಲರ್ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಯುವ ಬೌಲರ್ಗಳು ಕಳಪೆ ಬೌಲಿಂಗ್ ಮಾಡಿದ್ದಾರೆ. ವೈಡ್ಗಳನ್ನು ಹೆಚ್ಚು ಹಾಕಿದ್ದಾರೆ. ಇದೇ ರೀತಿ ಮುಂದುವರಿದರೆ ನಾಯಕ ಧೋನಿ ಮುಂದೊಂದು ದಿನ ಆಮಾನತು ಶಿಕ್ಷೆಗೊಳಗಾಗಬಹುದು’ ಎಂದು ಸೆಹ್ವಾಗ್ ಕಳವಳ ವ್ಯಕ್ತಪಡಿಸಿದ್ದಾರೆ.
‘ಆರ್ಸಿಬಿ ಎದುರಿನ ಪಂದ್ಯದಲ್ಲಿ ಚೆನ್ನೈ ಬೌಲರ್ಗಳೂ 37 ಡಾಟ್ ಬಾಲ್ ಹಾಕಿದ್ದಾರೆ. ಆದರೂ ಬೆಂಗಳೂರು ತಂಡವು 8 ವಿಕೆಟ್ಗಳಿಗೆ 218 ರನ್ ಗಳಿಸಿತು. ಇದರರ್ಥ ಕೇವಲ 14 ಓವರ್ಗಳಲ್ಲಿ ಇಷ್ಟು ಪ್ರಮಾಣದ ರನ್ಗಳು ಸೇರಿದವು. ಅಲ್ಲದೇ ಆರು ವೈಡ್ಬಾಲ್ಗಳನ್ನೂ ಹಾಕಿದ್ದಾರೆ. ಇದು ಸುಧಾರಣೆಯಾಗಬೇಕು. ಮೊದಲು ಬ್ಯಾಟಿಂಗ್ ಮಾಡಿ ಬೃಹತ್ ಮೊತ್ತ ಪೇರಿಸಿದ ಮೇಲೂ ಬೌಲರ್ಗಳು ಕೈಚೆಲ್ಲಬಾರದು’ ಎಂದು ಕ್ರಿಕ್ಬಜ್ ಶೋನಲ್ಲಿ ಸೆಹ್ವಾಗ್ ಹೇಳಿದ್ದಾರೆ.
ಚೆನ್ನೈ ತಂಡದ ಮಧ್ಯಮವೇಗಿಗಳಾದ ದೀಪಕ್ ಚಾಹರ್, ಮುಖೇಶ್ ಚೌಧರಿ ಹಾಗೂ ಸಿಸಾಂದ ಮಗಾಲ ಅವರು ಗಾಯಗೊಂಡಿದ್ದಾರೆ. ಬೆನ್ ಸ್ಟೋಕ್ಸ್ ಮಂಡಿನೋವು ಇರುವುದರಿಂದ ಬೌಲಿಂಗ್ ಮಾಡುತ್ತಿಲ್ಲ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…