ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ಗಳು ಕಳಪೆ ಬೌಲಿಂಗ್ ಮಾಡುವ ಮೂಲಕ ನಾಯಕ ಮಹೇಂದ್ರಸಿಂಗ್ ಧೋನಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಬೌಲರ್ಗಳು ಆದಷ್ಟು ಬೇಗ ಸುಧಾರಿಸಿಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.
ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ದೊಡ್ಡ ಮೊತ್ತ ಪೇರಿಸಿತ್ತು. ಆದರೆ ಚೆನ್ನೈ ಬೌಲರ್ಗಳು ಉತ್ತಮವಾಗಿ ಬೌಲಿಂಗ್ ಮಾಡಿರಲಿಲ್ಲ. ಇದರಿಂದಾಗಿ ಚೆನ್ನೈ ತಂಡವು ಪ್ರಯಾಸದ ಜಯ ಸಾಧಿಸಿತು.
‘ವೈಡ್ ಮತ್ತು ನೋಬಾಲ್ಗಳನ್ನು ಕಡಿಮೆ ಮಾಡಬೇಕು. ರನ್ಗಳನ್ನು ಬಿಟ್ಟುಕೊಡಬಾರದು. ಬಿಗಿ ದಾಳಿ ನಡೆಸಬೇಕು ಎಂದು ಧೋನಿ ಈ ಹಿಂದೆಯೇ ತಮ್ಮ ಬೌಲರ್ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಯುವ ಬೌಲರ್ಗಳು ಕಳಪೆ ಬೌಲಿಂಗ್ ಮಾಡಿದ್ದಾರೆ. ವೈಡ್ಗಳನ್ನು ಹೆಚ್ಚು ಹಾಕಿದ್ದಾರೆ. ಇದೇ ರೀತಿ ಮುಂದುವರಿದರೆ ನಾಯಕ ಧೋನಿ ಮುಂದೊಂದು ದಿನ ಆಮಾನತು ಶಿಕ್ಷೆಗೊಳಗಾಗಬಹುದು’ ಎಂದು ಸೆಹ್ವಾಗ್ ಕಳವಳ ವ್ಯಕ್ತಪಡಿಸಿದ್ದಾರೆ.
‘ಆರ್ಸಿಬಿ ಎದುರಿನ ಪಂದ್ಯದಲ್ಲಿ ಚೆನ್ನೈ ಬೌಲರ್ಗಳೂ 37 ಡಾಟ್ ಬಾಲ್ ಹಾಕಿದ್ದಾರೆ. ಆದರೂ ಬೆಂಗಳೂರು ತಂಡವು 8 ವಿಕೆಟ್ಗಳಿಗೆ 218 ರನ್ ಗಳಿಸಿತು. ಇದರರ್ಥ ಕೇವಲ 14 ಓವರ್ಗಳಲ್ಲಿ ಇಷ್ಟು ಪ್ರಮಾಣದ ರನ್ಗಳು ಸೇರಿದವು. ಅಲ್ಲದೇ ಆರು ವೈಡ್ಬಾಲ್ಗಳನ್ನೂ ಹಾಕಿದ್ದಾರೆ. ಇದು ಸುಧಾರಣೆಯಾಗಬೇಕು. ಮೊದಲು ಬ್ಯಾಟಿಂಗ್ ಮಾಡಿ ಬೃಹತ್ ಮೊತ್ತ ಪೇರಿಸಿದ ಮೇಲೂ ಬೌಲರ್ಗಳು ಕೈಚೆಲ್ಲಬಾರದು’ ಎಂದು ಕ್ರಿಕ್ಬಜ್ ಶೋನಲ್ಲಿ ಸೆಹ್ವಾಗ್ ಹೇಳಿದ್ದಾರೆ.
ಚೆನ್ನೈ ತಂಡದ ಮಧ್ಯಮವೇಗಿಗಳಾದ ದೀಪಕ್ ಚಾಹರ್, ಮುಖೇಶ್ ಚೌಧರಿ ಹಾಗೂ ಸಿಸಾಂದ ಮಗಾಲ ಅವರು ಗಾಯಗೊಂಡಿದ್ದಾರೆ. ಬೆನ್ ಸ್ಟೋಕ್ಸ್ ಮಂಡಿನೋವು ಇರುವುದರಿಂದ ಬೌಲಿಂಗ್ ಮಾಡುತ್ತಿಲ್ಲ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…