ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಬೌಲರ್ಗಳು ಕಳಪೆ ಬೌಲಿಂಗ್ ಮಾಡುವ ಮೂಲಕ ನಾಯಕ ಮಹೇಂದ್ರಸಿಂಗ್ ಧೋನಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಬೌಲರ್ಗಳು ಆದಷ್ಟು ಬೇಗ ಸುಧಾರಿಸಿಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.
ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ದೊಡ್ಡ ಮೊತ್ತ ಪೇರಿಸಿತ್ತು. ಆದರೆ ಚೆನ್ನೈ ಬೌಲರ್ಗಳು ಉತ್ತಮವಾಗಿ ಬೌಲಿಂಗ್ ಮಾಡಿರಲಿಲ್ಲ. ಇದರಿಂದಾಗಿ ಚೆನ್ನೈ ತಂಡವು ಪ್ರಯಾಸದ ಜಯ ಸಾಧಿಸಿತು.
‘ವೈಡ್ ಮತ್ತು ನೋಬಾಲ್ಗಳನ್ನು ಕಡಿಮೆ ಮಾಡಬೇಕು. ರನ್ಗಳನ್ನು ಬಿಟ್ಟುಕೊಡಬಾರದು. ಬಿಗಿ ದಾಳಿ ನಡೆಸಬೇಕು ಎಂದು ಧೋನಿ ಈ ಹಿಂದೆಯೇ ತಮ್ಮ ಬೌಲರ್ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಯುವ ಬೌಲರ್ಗಳು ಕಳಪೆ ಬೌಲಿಂಗ್ ಮಾಡಿದ್ದಾರೆ. ವೈಡ್ಗಳನ್ನು ಹೆಚ್ಚು ಹಾಕಿದ್ದಾರೆ. ಇದೇ ರೀತಿ ಮುಂದುವರಿದರೆ ನಾಯಕ ಧೋನಿ ಮುಂದೊಂದು ದಿನ ಆಮಾನತು ಶಿಕ್ಷೆಗೊಳಗಾಗಬಹುದು’ ಎಂದು ಸೆಹ್ವಾಗ್ ಕಳವಳ ವ್ಯಕ್ತಪಡಿಸಿದ್ದಾರೆ.
‘ಆರ್ಸಿಬಿ ಎದುರಿನ ಪಂದ್ಯದಲ್ಲಿ ಚೆನ್ನೈ ಬೌಲರ್ಗಳೂ 37 ಡಾಟ್ ಬಾಲ್ ಹಾಕಿದ್ದಾರೆ. ಆದರೂ ಬೆಂಗಳೂರು ತಂಡವು 8 ವಿಕೆಟ್ಗಳಿಗೆ 218 ರನ್ ಗಳಿಸಿತು. ಇದರರ್ಥ ಕೇವಲ 14 ಓವರ್ಗಳಲ್ಲಿ ಇಷ್ಟು ಪ್ರಮಾಣದ ರನ್ಗಳು ಸೇರಿದವು. ಅಲ್ಲದೇ ಆರು ವೈಡ್ಬಾಲ್ಗಳನ್ನೂ ಹಾಕಿದ್ದಾರೆ. ಇದು ಸುಧಾರಣೆಯಾಗಬೇಕು. ಮೊದಲು ಬ್ಯಾಟಿಂಗ್ ಮಾಡಿ ಬೃಹತ್ ಮೊತ್ತ ಪೇರಿಸಿದ ಮೇಲೂ ಬೌಲರ್ಗಳು ಕೈಚೆಲ್ಲಬಾರದು’ ಎಂದು ಕ್ರಿಕ್ಬಜ್ ಶೋನಲ್ಲಿ ಸೆಹ್ವಾಗ್ ಹೇಳಿದ್ದಾರೆ.
ಚೆನ್ನೈ ತಂಡದ ಮಧ್ಯಮವೇಗಿಗಳಾದ ದೀಪಕ್ ಚಾಹರ್, ಮುಖೇಶ್ ಚೌಧರಿ ಹಾಗೂ ಸಿಸಾಂದ ಮಗಾಲ ಅವರು ಗಾಯಗೊಂಡಿದ್ದಾರೆ. ಬೆನ್ ಸ್ಟೋಕ್ಸ್ ಮಂಡಿನೋವು ಇರುವುದರಿಂದ ಬೌಲಿಂಗ್ ಮಾಡುತ್ತಿಲ್ಲ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…