ಕ್ರೀಡೆ

ಸಿಎಸ್‌ಕೆ ಬೌಲರ್‌ಗಳಿಂದಾಗಿ ಧೋನಿಗೆ ಸಂಕಷ್ಟ: ವೀರೇಂದ್ರ ಸೆಹ್ವಾಗ್

ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್‌ ಬೌಲರ್‌ಗಳು ಕಳಪೆ ಬೌಲಿಂಗ್ ಮಾಡುವ ಮೂಲಕ ನಾಯಕ ಮಹೇಂದ್ರಸಿಂಗ್ ಧೋನಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಬೌಲರ್‌ಗಳು ಆದಷ್ಟು ಬೇಗ ಸುಧಾರಿಸಿಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.

ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ದೊಡ್ಡ ಮೊತ್ತ ಪೇರಿಸಿತ್ತು. ಆದರೆ ಚೆನ್ನೈ ಬೌಲರ್‌ಗಳು ಉತ್ತಮವಾಗಿ ಬೌಲಿಂಗ್ ಮಾಡಿರಲಿಲ್ಲ. ಇದರಿಂದಾಗಿ ಚೆನ್ನೈ ತಂಡವು ಪ್ರಯಾಸದ ಜಯ ಸಾಧಿಸಿತು.

‘ವೈಡ್ ಮತ್ತು ನೋಬಾಲ್‌ಗಳನ್ನು ಕಡಿಮೆ ಮಾಡಬೇಕು. ರನ್‌ಗಳನ್ನು ಬಿಟ್ಟುಕೊಡಬಾರದು. ಬಿಗಿ ದಾಳಿ ನಡೆಸಬೇಕು ಎಂದು ಧೋನಿ ಈ ಹಿಂದೆಯೇ ತಮ್ಮ ಬೌಲರ್‌ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಯುವ ಬೌಲರ್‌ಗಳು ಕಳಪೆ ಬೌಲಿಂಗ್ ಮಾಡಿದ್ದಾರೆ. ವೈಡ್‌ಗಳನ್ನು ಹೆಚ್ಚು ಹಾಕಿದ್ದಾರೆ. ಇದೇ ರೀತಿ ಮುಂದುವರಿದರೆ ನಾಯಕ ಧೋನಿ ಮುಂದೊಂದು ದಿನ ಆಮಾನತು ಶಿಕ್ಷೆಗೊಳಗಾಗಬಹುದು’ ಎಂದು ಸೆಹ್ವಾಗ್ ಕಳವಳ ವ್ಯಕ್ತಪಡಿಸಿದ್ದಾರೆ.

‘ಆರ್‌ಸಿಬಿ ಎದುರಿನ ಪಂದ್ಯದಲ್ಲಿ ಚೆನ್ನೈ ಬೌಲರ್‌ಗಳೂ 37 ಡಾಟ್ ಬಾಲ್ ಹಾಕಿದ್ದಾರೆ. ಆದರೂ ಬೆಂಗಳೂರು ತಂಡವು 8 ವಿಕೆಟ್‌ಗಳಿಗೆ 218 ರನ್‌ ಗಳಿಸಿತು. ಇದರರ್ಥ ಕೇವಲ 14 ಓವರ್‌ಗಳಲ್ಲಿ ಇಷ್ಟು ಪ್ರಮಾಣದ ರನ್‌ಗಳು ಸೇರಿದವು. ಅಲ್ಲದೇ ಆರು ವೈಡ್‌ಬಾಲ್‌ಗಳನ್ನೂ ಹಾಕಿದ್ದಾರೆ. ಇದು ಸುಧಾರಣೆಯಾಗಬೇಕು. ಮೊದಲು ಬ್ಯಾಟಿಂಗ್ ಮಾಡಿ ಬೃಹತ್ ಮೊತ್ತ ಪೇರಿಸಿದ ಮೇಲೂ ಬೌಲರ್‌ಗಳು ಕೈಚೆಲ್ಲಬಾರದು’ ಎಂದು ಕ್ರಿಕ್‌ಬಜ್ ಶೋನಲ್ಲಿ ಸೆಹ್ವಾಗ್ ಹೇಳಿದ್ದಾರೆ.

ಚೆನ್ನೈ ತಂಡದ ಮಧ್ಯಮವೇಗಿಗಳಾದ ದೀಪಕ್ ಚಾಹರ್, ಮುಖೇಶ್ ಚೌಧರಿ ಹಾಗೂ ಸಿಸಾಂದ ಮಗಾಲ ಅವರು ಗಾಯಗೊಂಡಿದ್ದಾರೆ. ಬೆನ್‌ ಸ್ಟೋಕ್ಸ್‌ ಮಂಡಿನೋವು ಇರುವುದರಿಂದ ಬೌಲಿಂಗ್ ಮಾಡುತ್ತಿಲ್ಲ.

andolanait

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

38 mins ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

2 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

4 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

4 hours ago