ಕ್ರೀಡೆ

ಆಧುನಿಕ ಗರಡಿ ಮನೆಗೆ ಹೂಡಿಕೆ ಮಾಡಲಿದ್ದಾರೆ ಧೋನಿ

ಬೆಂಗಳೂರು : ಆಧುನಿಕ ಗರಡಿ ಮನೆ ತಗಡಾ ರಹೋಗೆ ಫಿಟ್ನೆಸ್‌ ಸ್ಟಾರ್ಟಪ್‌ ಗೆ ಮಹೇಂದ್ರ ಸಿಂಗ್‌ ಧೋನಿ ಹೂಡಿಕೆ ಮಾಡಲಿದ್ದಾರೆ. ತಗ್ಡಾ ರಹೋ ವ್ಯಾಯಾಮ ಶಾಲೆಯು ಸಾಂಪ್ರದಾಯಿಕ ಶೈಲಿಯ ವ್ಯಾಯಾಮ ಪದ್ದತಿಗೆ ಆಧುನಿಕ ಸ್ಪರ್ಷ ನೀಡುವ ಕಂಪನಿಯಾಗಿದೆ.

ಈ ಬಗ್ಗೆ ಮಾತನಾಡಿರುವ ಮಹೇಂದ್ರ ಸಿಂಗ್‌ ಧೋನಿ ತಗ್ಡಾ ರಹೋ ತುಂಬಾ ಕುತೂಹಲಕಾರಿ ಎನಿಸುತ್ತದೆ. ಜನರು ಮರೆತು ಹೋಗಿರುವ ದೈಹಿಕ ಕಸರತ್ತನ್ನು ಮರಳಿ ತರುತ್ತಿದೆ ಎಂದಿದ್ದಾರೆ.

ತಗ್ಡಾ ರಹೋ ಮಾದರಿಯ ತರಬೇತಿಯನ್ನು ಈಗಾಗಲೇ ಲಕ್ನೋ ಸೂಪರ್‌ ಜೇಂಟ್ಸ್‌ ಹರ್ಯಾಣ ಸ್ಟೀಲರ್ಸ್‌ ಕಬಡ್ಡಿ ತಂಡ, ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಗಳಲ್ಲಿ ಅಳವಡಿಸಿಕೊಳ್ಳಲಾಗಿದೆ.

ಸಾಂಪ್ರದಾಯಿಕ ಗರಡಿಮನೆಗಳಲ್ಲಿರುವ ವ್ಯಾಯಾಮ ಸಲಕರಣೆಗಳನ್ನು ಬಳಸಿ ಫಿಟ್ನೆಸ್‌ ತರಬೇತಿ ಕೊಡಲಾಗುತ್ತದೆ.

ಈ ರೀತಿಯ ವ್ಯಾಯಾಮ ಶಾಲೆಯನ್ನು ಮನಿಶ್‌ ಮಲ್ಹೋತ್ರಾ ಅವರು ಸ್ಥಾಪನೆ ಮಾಡಿದ್ದಾರೆ. ಇದರ ಮುಖ್ಯ ಶಾಖೆಯು ಬೆಂಗಳೂರಿನಲ್ಲಿದೆ.

ಇದರ ತರಬೇತಿ ಕೇಂದ್ರಗಳನ್ನು ಡಗ್‌ ಔಟ್‌ ಎಂದು ಕರೆಯಲಾಗುತ್ತದೆ. ಈಗಾಗಲೇ ಇದರಲ್ಲಿ ಬಹಳ ಜನರು ತರಬೇತಿ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಅಲಸೂರಿನ ಎಸ್ ಯುಎಫ್‌ಸಿ ಗ್ರೌಂಡ್ಸ್‌ ಹಾಗೂ ಎಚ್‌ಎಸ್‌ಆರ್‌ ಲೇಔಟ್‌ ನಲ್ಲಿ ಇದರ ಎರಡು ಶಾಖೆಗಳಿವೆ.

ಇಲ್ಲಿ ಗರಡಿ ಮನೆಯಲ್ಲಿ ಬಳಸಲಾಗುತ್ತಿದ್ದ ಸಾಂಪ್ರದಾಯಿಕ ಸಲಕರಣೆಗಳನ್ನು ಬಳಸಿಕೊಂಡು ಆಧುನಿಕ ಶೈಲಿಯ ವ್ಯಾಯಾಮವನ್ನು ಕಲಿಸಲಾಗುತ್ತದೆ.

ಮುಂದಿನ ವರ್ದಲ್ಲಿ ನಾಲ್ಕರಿಂದ ಐದು ರಾಜ್ಯಗಳಿಗೆ ಈ ಡಗ್‌ ಹೌಸ್‌ ವ್ಯವಾಹರವನ್ನು ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ.

lokesh

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

6 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

6 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

8 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

8 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

9 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

10 hours ago