ಕ್ರೀಡೆ

ಆಧುನಿಕ ಗರಡಿ ಮನೆಗೆ ಹೂಡಿಕೆ ಮಾಡಲಿದ್ದಾರೆ ಧೋನಿ

ಬೆಂಗಳೂರು : ಆಧುನಿಕ ಗರಡಿ ಮನೆ ತಗಡಾ ರಹೋಗೆ ಫಿಟ್ನೆಸ್‌ ಸ್ಟಾರ್ಟಪ್‌ ಗೆ ಮಹೇಂದ್ರ ಸಿಂಗ್‌ ಧೋನಿ ಹೂಡಿಕೆ ಮಾಡಲಿದ್ದಾರೆ. ತಗ್ಡಾ ರಹೋ ವ್ಯಾಯಾಮ ಶಾಲೆಯು ಸಾಂಪ್ರದಾಯಿಕ ಶೈಲಿಯ ವ್ಯಾಯಾಮ ಪದ್ದತಿಗೆ ಆಧುನಿಕ ಸ್ಪರ್ಷ ನೀಡುವ ಕಂಪನಿಯಾಗಿದೆ.

ಈ ಬಗ್ಗೆ ಮಾತನಾಡಿರುವ ಮಹೇಂದ್ರ ಸಿಂಗ್‌ ಧೋನಿ ತಗ್ಡಾ ರಹೋ ತುಂಬಾ ಕುತೂಹಲಕಾರಿ ಎನಿಸುತ್ತದೆ. ಜನರು ಮರೆತು ಹೋಗಿರುವ ದೈಹಿಕ ಕಸರತ್ತನ್ನು ಮರಳಿ ತರುತ್ತಿದೆ ಎಂದಿದ್ದಾರೆ.

ತಗ್ಡಾ ರಹೋ ಮಾದರಿಯ ತರಬೇತಿಯನ್ನು ಈಗಾಗಲೇ ಲಕ್ನೋ ಸೂಪರ್‌ ಜೇಂಟ್ಸ್‌ ಹರ್ಯಾಣ ಸ್ಟೀಲರ್ಸ್‌ ಕಬಡ್ಡಿ ತಂಡ, ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಗಳಲ್ಲಿ ಅಳವಡಿಸಿಕೊಳ್ಳಲಾಗಿದೆ.

ಸಾಂಪ್ರದಾಯಿಕ ಗರಡಿಮನೆಗಳಲ್ಲಿರುವ ವ್ಯಾಯಾಮ ಸಲಕರಣೆಗಳನ್ನು ಬಳಸಿ ಫಿಟ್ನೆಸ್‌ ತರಬೇತಿ ಕೊಡಲಾಗುತ್ತದೆ.

ಈ ರೀತಿಯ ವ್ಯಾಯಾಮ ಶಾಲೆಯನ್ನು ಮನಿಶ್‌ ಮಲ್ಹೋತ್ರಾ ಅವರು ಸ್ಥಾಪನೆ ಮಾಡಿದ್ದಾರೆ. ಇದರ ಮುಖ್ಯ ಶಾಖೆಯು ಬೆಂಗಳೂರಿನಲ್ಲಿದೆ.

ಇದರ ತರಬೇತಿ ಕೇಂದ್ರಗಳನ್ನು ಡಗ್‌ ಔಟ್‌ ಎಂದು ಕರೆಯಲಾಗುತ್ತದೆ. ಈಗಾಗಲೇ ಇದರಲ್ಲಿ ಬಹಳ ಜನರು ತರಬೇತಿ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಅಲಸೂರಿನ ಎಸ್ ಯುಎಫ್‌ಸಿ ಗ್ರೌಂಡ್ಸ್‌ ಹಾಗೂ ಎಚ್‌ಎಸ್‌ಆರ್‌ ಲೇಔಟ್‌ ನಲ್ಲಿ ಇದರ ಎರಡು ಶಾಖೆಗಳಿವೆ.

ಇಲ್ಲಿ ಗರಡಿ ಮನೆಯಲ್ಲಿ ಬಳಸಲಾಗುತ್ತಿದ್ದ ಸಾಂಪ್ರದಾಯಿಕ ಸಲಕರಣೆಗಳನ್ನು ಬಳಸಿಕೊಂಡು ಆಧುನಿಕ ಶೈಲಿಯ ವ್ಯಾಯಾಮವನ್ನು ಕಲಿಸಲಾಗುತ್ತದೆ.

ಮುಂದಿನ ವರ್ದಲ್ಲಿ ನಾಲ್ಕರಿಂದ ಐದು ರಾಜ್ಯಗಳಿಗೆ ಈ ಡಗ್‌ ಹೌಸ್‌ ವ್ಯವಾಹರವನ್ನು ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ.

lokesh

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

11 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

11 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

11 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago