ಕ್ರೀಡೆ

ಆಧುನಿಕ ಗರಡಿ ಮನೆಗೆ ಹೂಡಿಕೆ ಮಾಡಲಿದ್ದಾರೆ ಧೋನಿ

ಬೆಂಗಳೂರು : ಆಧುನಿಕ ಗರಡಿ ಮನೆ ತಗಡಾ ರಹೋಗೆ ಫಿಟ್ನೆಸ್‌ ಸ್ಟಾರ್ಟಪ್‌ ಗೆ ಮಹೇಂದ್ರ ಸಿಂಗ್‌ ಧೋನಿ ಹೂಡಿಕೆ ಮಾಡಲಿದ್ದಾರೆ. ತಗ್ಡಾ ರಹೋ ವ್ಯಾಯಾಮ ಶಾಲೆಯು ಸಾಂಪ್ರದಾಯಿಕ ಶೈಲಿಯ ವ್ಯಾಯಾಮ ಪದ್ದತಿಗೆ ಆಧುನಿಕ ಸ್ಪರ್ಷ ನೀಡುವ ಕಂಪನಿಯಾಗಿದೆ.

ಈ ಬಗ್ಗೆ ಮಾತನಾಡಿರುವ ಮಹೇಂದ್ರ ಸಿಂಗ್‌ ಧೋನಿ ತಗ್ಡಾ ರಹೋ ತುಂಬಾ ಕುತೂಹಲಕಾರಿ ಎನಿಸುತ್ತದೆ. ಜನರು ಮರೆತು ಹೋಗಿರುವ ದೈಹಿಕ ಕಸರತ್ತನ್ನು ಮರಳಿ ತರುತ್ತಿದೆ ಎಂದಿದ್ದಾರೆ.

ತಗ್ಡಾ ರಹೋ ಮಾದರಿಯ ತರಬೇತಿಯನ್ನು ಈಗಾಗಲೇ ಲಕ್ನೋ ಸೂಪರ್‌ ಜೇಂಟ್ಸ್‌ ಹರ್ಯಾಣ ಸ್ಟೀಲರ್ಸ್‌ ಕಬಡ್ಡಿ ತಂಡ, ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಗಳಲ್ಲಿ ಅಳವಡಿಸಿಕೊಳ್ಳಲಾಗಿದೆ.

ಸಾಂಪ್ರದಾಯಿಕ ಗರಡಿಮನೆಗಳಲ್ಲಿರುವ ವ್ಯಾಯಾಮ ಸಲಕರಣೆಗಳನ್ನು ಬಳಸಿ ಫಿಟ್ನೆಸ್‌ ತರಬೇತಿ ಕೊಡಲಾಗುತ್ತದೆ.

ಈ ರೀತಿಯ ವ್ಯಾಯಾಮ ಶಾಲೆಯನ್ನು ಮನಿಶ್‌ ಮಲ್ಹೋತ್ರಾ ಅವರು ಸ್ಥಾಪನೆ ಮಾಡಿದ್ದಾರೆ. ಇದರ ಮುಖ್ಯ ಶಾಖೆಯು ಬೆಂಗಳೂರಿನಲ್ಲಿದೆ.

ಇದರ ತರಬೇತಿ ಕೇಂದ್ರಗಳನ್ನು ಡಗ್‌ ಔಟ್‌ ಎಂದು ಕರೆಯಲಾಗುತ್ತದೆ. ಈಗಾಗಲೇ ಇದರಲ್ಲಿ ಬಹಳ ಜನರು ತರಬೇತಿ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಅಲಸೂರಿನ ಎಸ್ ಯುಎಫ್‌ಸಿ ಗ್ರೌಂಡ್ಸ್‌ ಹಾಗೂ ಎಚ್‌ಎಸ್‌ಆರ್‌ ಲೇಔಟ್‌ ನಲ್ಲಿ ಇದರ ಎರಡು ಶಾಖೆಗಳಿವೆ.

ಇಲ್ಲಿ ಗರಡಿ ಮನೆಯಲ್ಲಿ ಬಳಸಲಾಗುತ್ತಿದ್ದ ಸಾಂಪ್ರದಾಯಿಕ ಸಲಕರಣೆಗಳನ್ನು ಬಳಸಿಕೊಂಡು ಆಧುನಿಕ ಶೈಲಿಯ ವ್ಯಾಯಾಮವನ್ನು ಕಲಿಸಲಾಗುತ್ತದೆ.

ಮುಂದಿನ ವರ್ದಲ್ಲಿ ನಾಲ್ಕರಿಂದ ಐದು ರಾಜ್ಯಗಳಿಗೆ ಈ ಡಗ್‌ ಹೌಸ್‌ ವ್ಯವಾಹರವನ್ನು ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ.

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

6 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

7 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

17 hours ago