ಕ್ರೀಡೆ

ಆಧುನಿಕ ಗರಡಿ ಮನೆಗೆ ಹೂಡಿಕೆ ಮಾಡಲಿದ್ದಾರೆ ಧೋನಿ

ಬೆಂಗಳೂರು : ಆಧುನಿಕ ಗರಡಿ ಮನೆ ತಗಡಾ ರಹೋಗೆ ಫಿಟ್ನೆಸ್‌ ಸ್ಟಾರ್ಟಪ್‌ ಗೆ ಮಹೇಂದ್ರ ಸಿಂಗ್‌ ಧೋನಿ ಹೂಡಿಕೆ ಮಾಡಲಿದ್ದಾರೆ. ತಗ್ಡಾ ರಹೋ ವ್ಯಾಯಾಮ ಶಾಲೆಯು ಸಾಂಪ್ರದಾಯಿಕ ಶೈಲಿಯ ವ್ಯಾಯಾಮ ಪದ್ದತಿಗೆ ಆಧುನಿಕ ಸ್ಪರ್ಷ ನೀಡುವ ಕಂಪನಿಯಾಗಿದೆ.

ಈ ಬಗ್ಗೆ ಮಾತನಾಡಿರುವ ಮಹೇಂದ್ರ ಸಿಂಗ್‌ ಧೋನಿ ತಗ್ಡಾ ರಹೋ ತುಂಬಾ ಕುತೂಹಲಕಾರಿ ಎನಿಸುತ್ತದೆ. ಜನರು ಮರೆತು ಹೋಗಿರುವ ದೈಹಿಕ ಕಸರತ್ತನ್ನು ಮರಳಿ ತರುತ್ತಿದೆ ಎಂದಿದ್ದಾರೆ.

ತಗ್ಡಾ ರಹೋ ಮಾದರಿಯ ತರಬೇತಿಯನ್ನು ಈಗಾಗಲೇ ಲಕ್ನೋ ಸೂಪರ್‌ ಜೇಂಟ್ಸ್‌ ಹರ್ಯಾಣ ಸ್ಟೀಲರ್ಸ್‌ ಕಬಡ್ಡಿ ತಂಡ, ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿಗಳಲ್ಲಿ ಅಳವಡಿಸಿಕೊಳ್ಳಲಾಗಿದೆ.

ಸಾಂಪ್ರದಾಯಿಕ ಗರಡಿಮನೆಗಳಲ್ಲಿರುವ ವ್ಯಾಯಾಮ ಸಲಕರಣೆಗಳನ್ನು ಬಳಸಿ ಫಿಟ್ನೆಸ್‌ ತರಬೇತಿ ಕೊಡಲಾಗುತ್ತದೆ.

ಈ ರೀತಿಯ ವ್ಯಾಯಾಮ ಶಾಲೆಯನ್ನು ಮನಿಶ್‌ ಮಲ್ಹೋತ್ರಾ ಅವರು ಸ್ಥಾಪನೆ ಮಾಡಿದ್ದಾರೆ. ಇದರ ಮುಖ್ಯ ಶಾಖೆಯು ಬೆಂಗಳೂರಿನಲ್ಲಿದೆ.

ಇದರ ತರಬೇತಿ ಕೇಂದ್ರಗಳನ್ನು ಡಗ್‌ ಔಟ್‌ ಎಂದು ಕರೆಯಲಾಗುತ್ತದೆ. ಈಗಾಗಲೇ ಇದರಲ್ಲಿ ಬಹಳ ಜನರು ತರಬೇತಿ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನ ಅಲಸೂರಿನ ಎಸ್ ಯುಎಫ್‌ಸಿ ಗ್ರೌಂಡ್ಸ್‌ ಹಾಗೂ ಎಚ್‌ಎಸ್‌ಆರ್‌ ಲೇಔಟ್‌ ನಲ್ಲಿ ಇದರ ಎರಡು ಶಾಖೆಗಳಿವೆ.

ಇಲ್ಲಿ ಗರಡಿ ಮನೆಯಲ್ಲಿ ಬಳಸಲಾಗುತ್ತಿದ್ದ ಸಾಂಪ್ರದಾಯಿಕ ಸಲಕರಣೆಗಳನ್ನು ಬಳಸಿಕೊಂಡು ಆಧುನಿಕ ಶೈಲಿಯ ವ್ಯಾಯಾಮವನ್ನು ಕಲಿಸಲಾಗುತ್ತದೆ.

ಮುಂದಿನ ವರ್ದಲ್ಲಿ ನಾಲ್ಕರಿಂದ ಐದು ರಾಜ್ಯಗಳಿಗೆ ಈ ಡಗ್‌ ಹೌಸ್‌ ವ್ಯವಾಹರವನ್ನು ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

2 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

12 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

16 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

16 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

17 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

21 hours ago