ಕ್ರೀಡೆ

ವಿಶ್ವಕಪ್‌ ಸಮಯ ನೀಡುವ ಪ್ರಧಾನಿಗೆ ಮಣಿಪುರ ನೆನಪಾಗಲಿಲ್ಲವೇ: ಕಾಂಗ್ರೆಸ್‌ ಪ್ರಶ್ನೆ

ನವದೆಹಲಿ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯವನ್ನು  ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹೋಗಿರುವ ಕುರಿತು ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಮಣಿಪುರ ದ ಹಿಂಸಾಚಾರ ಕುರಿತು ಆ ಸ್ಥಳಕ್ಕೆ ಭೆಟಿ ನೀಡಲು ಪ್ರಧಾನಿ ಮೋದಿ ಅವರಿಗೆ ಸಮಯವಿಲ್ಲ. ಆದರೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಫೈನಲ್‌ ಪಂದ್ಯ ವೀಕ್ಷಣೆಗೆ ಅವರಿಗೆ ಸಮಯವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, “ಪ್ರಧಾನ ಮಂತ್ರಿಯವರು  ಅಹಮದಾಬಾದ್‌ನಲ್ಲಿರುವ ತಮ್ಮದೇ ಹೆಸರಿನ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡರು. ತೆಲಂಗಾಣ ಮತ್ತು ರಾಜಸ್ಥಾನದಲ್ಲಿ ಅವರು ನಾಳೆಯಿಂದ ಮತ್ತೆ ಕಾಂಗ್ರೆಸ್ ವಿರುದ್ಧ ನಿಂದಿಸಲು ಮತ್ತು ದೂರಲು ಶುರುಮಾಡುತ್ತಾರೆ. ಆದರೆ, ಉದ್ವಿಗ್ನತೆಯಿಂದ ಕೂಡಿರುವ ಮಣಿಪುರಕ್ಕೆ ಭೇಟಿ ನೀಡುವುದು ಸೂಕ್ತ ಎಂಬುದು ಅವರು ಅರ್ಥ ಮಾಡಿಕೊಂಡಿಲ್ಲ, ಇದರಿಂದ ಅವರ (ಮೋದಿ) ಆದ್ಯತೆ ಏನೆಂಬುದು ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ.

ಕಳೆದ 6 ತಿಂಗಳಿನಿಂದ ತಮಣಿಪುರದಲ್ಲಿ ಮೈಕೈ ಹಾಗೂ ಕುಕಿ ಬುಡಕಟ್ಟು ಸಮುದಾಯದ ನಡುವೆ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಇದುವರೆಗೂ 175 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಇದುವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ.

andolanait

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

2 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

2 hours ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

2 hours ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

5 hours ago