ಕ್ರೀಡೆ

ವಿಶ್ವಕಪ್‌ ಸಮಯ ನೀಡುವ ಪ್ರಧಾನಿಗೆ ಮಣಿಪುರ ನೆನಪಾಗಲಿಲ್ಲವೇ: ಕಾಂಗ್ರೆಸ್‌ ಪ್ರಶ್ನೆ

ನವದೆಹಲಿ : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯವನ್ನು  ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಹೋಗಿರುವ ಕುರಿತು ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಮಣಿಪುರ ದ ಹಿಂಸಾಚಾರ ಕುರಿತು ಆ ಸ್ಥಳಕ್ಕೆ ಭೆಟಿ ನೀಡಲು ಪ್ರಧಾನಿ ಮೋದಿ ಅವರಿಗೆ ಸಮಯವಿಲ್ಲ. ಆದರೆ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಫೈನಲ್‌ ಪಂದ್ಯ ವೀಕ್ಷಣೆಗೆ ಅವರಿಗೆ ಸಮಯವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, “ಪ್ರಧಾನ ಮಂತ್ರಿಯವರು  ಅಹಮದಾಬಾದ್‌ನಲ್ಲಿರುವ ತಮ್ಮದೇ ಹೆಸರಿನ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡರು. ತೆಲಂಗಾಣ ಮತ್ತು ರಾಜಸ್ಥಾನದಲ್ಲಿ ಅವರು ನಾಳೆಯಿಂದ ಮತ್ತೆ ಕಾಂಗ್ರೆಸ್ ವಿರುದ್ಧ ನಿಂದಿಸಲು ಮತ್ತು ದೂರಲು ಶುರುಮಾಡುತ್ತಾರೆ. ಆದರೆ, ಉದ್ವಿಗ್ನತೆಯಿಂದ ಕೂಡಿರುವ ಮಣಿಪುರಕ್ಕೆ ಭೇಟಿ ನೀಡುವುದು ಸೂಕ್ತ ಎಂಬುದು ಅವರು ಅರ್ಥ ಮಾಡಿಕೊಂಡಿಲ್ಲ, ಇದರಿಂದ ಅವರ (ಮೋದಿ) ಆದ್ಯತೆ ಏನೆಂಬುದು ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ.

ಕಳೆದ 6 ತಿಂಗಳಿನಿಂದ ತಮಣಿಪುರದಲ್ಲಿ ಮೈಕೈ ಹಾಗೂ ಕುಕಿ ಬುಡಕಟ್ಟು ಸಮುದಾಯದ ನಡುವೆ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಇದುವರೆಗೂ 175 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಇದುವರೆಗೂ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಕಾಂಗ್ರೆಸ್‌ ಆರೋಪಿಸುತ್ತಿದೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

24 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

24 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

24 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

24 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

24 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

24 hours ago