ಕ್ರೀಡೆ

ಮಹಿಳಾ ಚೆಸ್‌ ವಿಶ್ವಕಪ್‌ ಗೆದ್ದ 19ರ ಹರೆಯ ದಿವ್ಯಾ ದೇಶಮುಖ್

ಹೊಸದಿಲ್ಲಿ : 19ರ ಹರೆಯ ದಿವ್ಯಾ ದೇಶಮುಖ್‌ ಅನುಭವಿ ಆಟಗಾರ್ತಿ ಕೊನೆರು ಹಂಪಿ ಅವರನ್ನು ಮಣಿಸುವ ಮೂಲಕ 2025ರ ಮಹಿಳಾ ಚೆಸ್‌ ವಿಶ್ವಕಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಜಾರ್ಜಿಯಾದಲ್ಲಿ ನಡೆದ ಈ ವಿಶ್ವಕಪ್‌ ಫೈನಲ್‌ನಲ್ಲಿ ಚೆಸ್‌ ವಿಶ್ವಕಪ್‌ ಗೆದ್ದ ಮೊದಲ ಭಾರತೀಯ ಮಹಿಳಾ ಚೆಸ್‌ ತಾರೆ ಎಂಬ ಹೆಗ್ಗಳಿಕೆಗೆ ದಿವ್ಯಾ ಭಾಜನರಾಗಿದ್ದಾರೆ.

ಇಬ್ಬರ ನಡುವೆ ಶನಿವಾರ, ಭಾನುವಾರ ನಡೆದ ಫೈನಲ್‌ ಪಂದ್ಯಗಳ ನಂತರ ಸ್ಕೋರ್‌ 1-1ರಲ್ಲಿ ಸಮವಿತ್ತು. ಬಳಿಕ ಸೋಮವಾರ ನಡೆದ ಟೈ ಬ್ರೇಕರ್‌ನಲ್ಲಿ ಮೊದಲಿಗೆ ಡ್ರಾ ಸಾಧಿಸಿದ ದಿವ್ಯಾ, ಎರಡನೇ ಸುತ್ತಿನಲ್ಲೂ 2.5-1.5 ಅಂತರದಲ್ಲಿ ಗೆಲುವಿನ ನಗೆ ಬೀರಿದರು.

ಕಳೆದ ಮೂರು ವಾರಗಳಿಂದ ಜಾರ್ಜಿಯಾದ ಬಟುಮಿಯಲ್ಲಿ ನಡೆದ ಮಹಿಳಾ ಚೆಸ್ ವಿಶ್ವಕಪ್​ನಲ್ಲಿ ದಿವ್ಯಾ ದೇಶಮುಖ್ ಫೈನಲ್ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಅವರ ನಂತರ, ಭಾರತದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಕೊನೆರು ಹಂಪಿ ಕೂಡ ಫೈನಲ್ ತಲುಪುವ ಮೂಲಕ ಈ ಪ್ರಶಸ್ತಿ ಪಂದ್ಯವನ್ನು ಮತ್ತಷ್ಟು ವಿಶೇಷವಾಗಿಸಿದ್ದರು.

ಈ ಮೂಲಕ ಯಾರೇ ಗೆದ್ದರೂ, ಪ್ರಶಸ್ತಿ ಭಾರತದ ಪಾಲಾಗುವುದರ ಜೊತೆಗೆ ಮೊದಲ ಬಾರಿಗೆ ಭಾರತೀಯ ಮಹಿಳೆಯೊಬ್ಬರು ಚೆಸ್ ವಿಶ್ವಕಪ್ ಚಾಂಪಿಯನ್ ಆಗುತ್ತಿದ್ದರು. ಅದರಂತೆ ನಡೆದ ಫೈನಲ್ ಪಂದ್ಯದಲ್ಲಿ ಕೊನೆರು ಹಂಪಿ ಅವರ ಮೇಲೆ ನಿರೀಕ್ಷೆಗಳು ಹೆಚ್ಚಿದ್ದರೂ, ಯುವ ಆಟಗಾರ್ತಿಯ ಮುಂದೆ ಅನುಭವಿ ಕೊನೆರು ಹಂಪಿ ಅವರು ತಲೆಬಾಗಲೇಬೇಕಾಯಿತು.

ಆಂದೋಲನ ಡೆಸ್ಕ್

Recent Posts

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

7 mins ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

32 mins ago

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್‌ ಸೇರಿದ ಧುರಂಧರ್-‌2

ಆದಿತ್ಯ ಧರ್‌ ನಿರ್ದೇಶನದ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…

43 mins ago

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ…

54 mins ago

ಮೈಸೂರು | ವರ್ತುಲ ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…

1 hour ago

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌…

1 hour ago