ಕ್ರೀಡೆ

ಮಹಿಳಾ ಚೆಸ್‌ ವಿಶ್ವಕಪ್‌ ಗೆದ್ದ 19ರ ಹರೆಯ ದಿವ್ಯಾ ದೇಶಮುಖ್

ಹೊಸದಿಲ್ಲಿ : 19ರ ಹರೆಯ ದಿವ್ಯಾ ದೇಶಮುಖ್‌ ಅನುಭವಿ ಆಟಗಾರ್ತಿ ಕೊನೆರು ಹಂಪಿ ಅವರನ್ನು ಮಣಿಸುವ ಮೂಲಕ 2025ರ ಮಹಿಳಾ ಚೆಸ್‌ ವಿಶ್ವಕಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಜಾರ್ಜಿಯಾದಲ್ಲಿ ನಡೆದ ಈ ವಿಶ್ವಕಪ್‌ ಫೈನಲ್‌ನಲ್ಲಿ ಚೆಸ್‌ ವಿಶ್ವಕಪ್‌ ಗೆದ್ದ ಮೊದಲ ಭಾರತೀಯ ಮಹಿಳಾ ಚೆಸ್‌ ತಾರೆ ಎಂಬ ಹೆಗ್ಗಳಿಕೆಗೆ ದಿವ್ಯಾ ಭಾಜನರಾಗಿದ್ದಾರೆ.

ಇಬ್ಬರ ನಡುವೆ ಶನಿವಾರ, ಭಾನುವಾರ ನಡೆದ ಫೈನಲ್‌ ಪಂದ್ಯಗಳ ನಂತರ ಸ್ಕೋರ್‌ 1-1ರಲ್ಲಿ ಸಮವಿತ್ತು. ಬಳಿಕ ಸೋಮವಾರ ನಡೆದ ಟೈ ಬ್ರೇಕರ್‌ನಲ್ಲಿ ಮೊದಲಿಗೆ ಡ್ರಾ ಸಾಧಿಸಿದ ದಿವ್ಯಾ, ಎರಡನೇ ಸುತ್ತಿನಲ್ಲೂ 2.5-1.5 ಅಂತರದಲ್ಲಿ ಗೆಲುವಿನ ನಗೆ ಬೀರಿದರು.

ಕಳೆದ ಮೂರು ವಾರಗಳಿಂದ ಜಾರ್ಜಿಯಾದ ಬಟುಮಿಯಲ್ಲಿ ನಡೆದ ಮಹಿಳಾ ಚೆಸ್ ವಿಶ್ವಕಪ್​ನಲ್ಲಿ ದಿವ್ಯಾ ದೇಶಮುಖ್ ಫೈನಲ್ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಅವರ ನಂತರ, ಭಾರತದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಕೊನೆರು ಹಂಪಿ ಕೂಡ ಫೈನಲ್ ತಲುಪುವ ಮೂಲಕ ಈ ಪ್ರಶಸ್ತಿ ಪಂದ್ಯವನ್ನು ಮತ್ತಷ್ಟು ವಿಶೇಷವಾಗಿಸಿದ್ದರು.

ಈ ಮೂಲಕ ಯಾರೇ ಗೆದ್ದರೂ, ಪ್ರಶಸ್ತಿ ಭಾರತದ ಪಾಲಾಗುವುದರ ಜೊತೆಗೆ ಮೊದಲ ಬಾರಿಗೆ ಭಾರತೀಯ ಮಹಿಳೆಯೊಬ್ಬರು ಚೆಸ್ ವಿಶ್ವಕಪ್ ಚಾಂಪಿಯನ್ ಆಗುತ್ತಿದ್ದರು. ಅದರಂತೆ ನಡೆದ ಫೈನಲ್ ಪಂದ್ಯದಲ್ಲಿ ಕೊನೆರು ಹಂಪಿ ಅವರ ಮೇಲೆ ನಿರೀಕ್ಷೆಗಳು ಹೆಚ್ಚಿದ್ದರೂ, ಯುವ ಆಟಗಾರ್ತಿಯ ಮುಂದೆ ಅನುಭವಿ ಕೊನೆರು ಹಂಪಿ ಅವರು ತಲೆಬಾಗಲೇಬೇಕಾಯಿತು.

ಆಂದೋಲನ ಡೆಸ್ಕ್

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

11 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

14 mins ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

19 mins ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

24 mins ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

29 mins ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

34 mins ago