ಕ್ರೀಡೆ

ಮಹಿಳಾ ಚೆಸ್‌ ವಿಶ್ವಕಪ್‌ ಗೆದ್ದ 19ರ ಹರೆಯ ದಿವ್ಯಾ ದೇಶಮುಖ್

ಹೊಸದಿಲ್ಲಿ : 19ರ ಹರೆಯ ದಿವ್ಯಾ ದೇಶಮುಖ್‌ ಅನುಭವಿ ಆಟಗಾರ್ತಿ ಕೊನೆರು ಹಂಪಿ ಅವರನ್ನು ಮಣಿಸುವ ಮೂಲಕ 2025ರ ಮಹಿಳಾ ಚೆಸ್‌ ವಿಶ್ವಕಪ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಜಾರ್ಜಿಯಾದಲ್ಲಿ ನಡೆದ ಈ ವಿಶ್ವಕಪ್‌ ಫೈನಲ್‌ನಲ್ಲಿ ಚೆಸ್‌ ವಿಶ್ವಕಪ್‌ ಗೆದ್ದ ಮೊದಲ ಭಾರತೀಯ ಮಹಿಳಾ ಚೆಸ್‌ ತಾರೆ ಎಂಬ ಹೆಗ್ಗಳಿಕೆಗೆ ದಿವ್ಯಾ ಭಾಜನರಾಗಿದ್ದಾರೆ.

ಇಬ್ಬರ ನಡುವೆ ಶನಿವಾರ, ಭಾನುವಾರ ನಡೆದ ಫೈನಲ್‌ ಪಂದ್ಯಗಳ ನಂತರ ಸ್ಕೋರ್‌ 1-1ರಲ್ಲಿ ಸಮವಿತ್ತು. ಬಳಿಕ ಸೋಮವಾರ ನಡೆದ ಟೈ ಬ್ರೇಕರ್‌ನಲ್ಲಿ ಮೊದಲಿಗೆ ಡ್ರಾ ಸಾಧಿಸಿದ ದಿವ್ಯಾ, ಎರಡನೇ ಸುತ್ತಿನಲ್ಲೂ 2.5-1.5 ಅಂತರದಲ್ಲಿ ಗೆಲುವಿನ ನಗೆ ಬೀರಿದರು.

ಕಳೆದ ಮೂರು ವಾರಗಳಿಂದ ಜಾರ್ಜಿಯಾದ ಬಟುಮಿಯಲ್ಲಿ ನಡೆದ ಮಹಿಳಾ ಚೆಸ್ ವಿಶ್ವಕಪ್​ನಲ್ಲಿ ದಿವ್ಯಾ ದೇಶಮುಖ್ ಫೈನಲ್ ತಲುಪುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಅವರ ನಂತರ, ಭಾರತದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಕೊನೆರು ಹಂಪಿ ಕೂಡ ಫೈನಲ್ ತಲುಪುವ ಮೂಲಕ ಈ ಪ್ರಶಸ್ತಿ ಪಂದ್ಯವನ್ನು ಮತ್ತಷ್ಟು ವಿಶೇಷವಾಗಿಸಿದ್ದರು.

ಈ ಮೂಲಕ ಯಾರೇ ಗೆದ್ದರೂ, ಪ್ರಶಸ್ತಿ ಭಾರತದ ಪಾಲಾಗುವುದರ ಜೊತೆಗೆ ಮೊದಲ ಬಾರಿಗೆ ಭಾರತೀಯ ಮಹಿಳೆಯೊಬ್ಬರು ಚೆಸ್ ವಿಶ್ವಕಪ್ ಚಾಂಪಿಯನ್ ಆಗುತ್ತಿದ್ದರು. ಅದರಂತೆ ನಡೆದ ಫೈನಲ್ ಪಂದ್ಯದಲ್ಲಿ ಕೊನೆರು ಹಂಪಿ ಅವರ ಮೇಲೆ ನಿರೀಕ್ಷೆಗಳು ಹೆಚ್ಚಿದ್ದರೂ, ಯುವ ಆಟಗಾರ್ತಿಯ ಮುಂದೆ ಅನುಭವಿ ಕೊನೆರು ಹಂಪಿ ಅವರು ತಲೆಬಾಗಲೇಬೇಕಾಯಿತು.

ಆಂದೋಲನ ಡೆಸ್ಕ್

Recent Posts

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

1 hour ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

1 hour ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

2 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

3 hours ago

ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ: ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…

3 hours ago

ಶೃಂಗೇರಿ ಅಂಚೆ ಮತ ಮರು ಎಣಿಕೆ ಪ್ರಕರಣ: ಯಥಾಸ್ಥಿತಿ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…

3 hours ago