ಕ್ರೀಡೆ

US open 2024| ಜೊಕೊವಿಕ್‌ಗೆ ಸೋಲು; ಈ ವರ್ಷ ಒಂದೂ ಗ್ರ್ಯಾಂಡ್‌ ಸ್ಲಾಮ್‌ ಗೆಲ್ಲದ ಸರ್ಬಿಯಾ ಕಿಂಗ್‌

ನ್ಯೂಯಾರ್ಕ್‌: ಅಮೇರಿಕಾ ಓಪನ್‌ ಗ್ರಾಂಡ್‌ಸ್ಲಾಮ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ನ ಮೂರನೇ ಸುತ್ತಿನಲ್ಲಿ ಸರ್ಬಿಯಾದ ಲೆಜೆಂಡ್‌ ನೊವಾಕ್‌ ಜೊಕೊವಿಕ್‌ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರನಡೆದಿದ್ದಾರೆ.

ಆಸೀಸ್‌ ಆಟಗಾರ ಅಲೆಕ್ಸಿ ಪೊಪಿರಿನ್‌ ವಿರುದ್ಧ 6-4, 6-4, 2-6, 6-4 ಅಂತರದಿಂದ ಹೀನಾಯ ಸೋಲು ಕಾಣುವ ಮೂಲಕ ತಮ್ಮ ಅಭಿಯಾನವನ್ನು ಇಲ್ಲಿಗೆ ಮುಗಿಸಿದರು.

24 ಬಾರಿಯ ಗ್ರ್ಯಾಂಡ್‌ ಸ್ಲಾಮ್‌ ವಿನ್ನರ್‌ ಜೊಕೊವಿಕ್‌ ಅವರು 2017ರ ಬಳಿಕ ಇದೇ ಮೊದಲ ಬಾರಿಗೆ 2024ರಲ್ಲಿ ಒಂದೇ ಒಂದು ಗ್ರ್ಯಾಂಡ್‌ಸ್ಲಾಮ್‌ ಗೆಲ್ಲುವಲ್ಲಿ ಜೊಕೊವಿಕ್‌ ವಿಫಲರಾಗಿದ್ದಾರೆ.

37 ವರ್ಷದ ಜೊಕೊವಿಕ್‌ ಅವರು 2011, 2015, 2018 ಹಾಗೂ 2023 ರಲ್ಲಿ ಅಮೇರಿಕಾ ಓಪನ್‌ ಗ್ರ್ಯಾಂಡ್‌ಸ್ಲಾಮ್‌ ಕಿರೀಟ ಗೆದ್ದಿದ್ದರು. ಆದರೆ ಈ ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿ ಟೂರ್ನಿಯಿಂದ ಹೊರ ನಡೆದರು.

ಅಮೇರಿಕಾ ಓಪನ್‌ನಲ್ಲಿ ಮೊದಲ ಸುತ್ತಿನಲ್ಲೇ ಸ್ಪೇನ್‌ನ ಆಲ್ಕರಾಜ್‌ ಸೋಲು ಕಂಡಿದ್ದರು. ಈಗ ಮತ್ತೊಂದು ಅಚ್ಚರಿಯ ಫಲಿತಾಂಶ ಬಂದಿದ್ದು, ಜೊಕೊವಿಕ್‌ ಕೂಡಾ ಟೂರ್ನಿಯಿಂದ ನಿರ್ಗಮಿಸಿದ್ದಾರೆ.

https://x.com/usopen/status/1829731427698499914

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

14 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

25 mins ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

44 mins ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

2 hours ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

2 hours ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

2 hours ago