ಕ್ರೀಡೆ

US open 2024| ಜೊಕೊವಿಕ್‌ಗೆ ಸೋಲು; ಈ ವರ್ಷ ಒಂದೂ ಗ್ರ್ಯಾಂಡ್‌ ಸ್ಲಾಮ್‌ ಗೆಲ್ಲದ ಸರ್ಬಿಯಾ ಕಿಂಗ್‌

ನ್ಯೂಯಾರ್ಕ್‌: ಅಮೇರಿಕಾ ಓಪನ್‌ ಗ್ರಾಂಡ್‌ಸ್ಲಾಮ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ನ ಮೂರನೇ ಸುತ್ತಿನಲ್ಲಿ ಸರ್ಬಿಯಾದ ಲೆಜೆಂಡ್‌ ನೊವಾಕ್‌ ಜೊಕೊವಿಕ್‌ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರನಡೆದಿದ್ದಾರೆ.

ಆಸೀಸ್‌ ಆಟಗಾರ ಅಲೆಕ್ಸಿ ಪೊಪಿರಿನ್‌ ವಿರುದ್ಧ 6-4, 6-4, 2-6, 6-4 ಅಂತರದಿಂದ ಹೀನಾಯ ಸೋಲು ಕಾಣುವ ಮೂಲಕ ತಮ್ಮ ಅಭಿಯಾನವನ್ನು ಇಲ್ಲಿಗೆ ಮುಗಿಸಿದರು.

24 ಬಾರಿಯ ಗ್ರ್ಯಾಂಡ್‌ ಸ್ಲಾಮ್‌ ವಿನ್ನರ್‌ ಜೊಕೊವಿಕ್‌ ಅವರು 2017ರ ಬಳಿಕ ಇದೇ ಮೊದಲ ಬಾರಿಗೆ 2024ರಲ್ಲಿ ಒಂದೇ ಒಂದು ಗ್ರ್ಯಾಂಡ್‌ಸ್ಲಾಮ್‌ ಗೆಲ್ಲುವಲ್ಲಿ ಜೊಕೊವಿಕ್‌ ವಿಫಲರಾಗಿದ್ದಾರೆ.

37 ವರ್ಷದ ಜೊಕೊವಿಕ್‌ ಅವರು 2011, 2015, 2018 ಹಾಗೂ 2023 ರಲ್ಲಿ ಅಮೇರಿಕಾ ಓಪನ್‌ ಗ್ರ್ಯಾಂಡ್‌ಸ್ಲಾಮ್‌ ಕಿರೀಟ ಗೆದ್ದಿದ್ದರು. ಆದರೆ ಈ ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ವಿಫಲರಾಗಿ ಟೂರ್ನಿಯಿಂದ ಹೊರ ನಡೆದರು.

ಅಮೇರಿಕಾ ಓಪನ್‌ನಲ್ಲಿ ಮೊದಲ ಸುತ್ತಿನಲ್ಲೇ ಸ್ಪೇನ್‌ನ ಆಲ್ಕರಾಜ್‌ ಸೋಲು ಕಂಡಿದ್ದರು. ಈಗ ಮತ್ತೊಂದು ಅಚ್ಚರಿಯ ಫಲಿತಾಂಶ ಬಂದಿದ್ದು, ಜೊಕೊವಿಕ್‌ ಕೂಡಾ ಟೂರ್ನಿಯಿಂದ ನಿರ್ಗಮಿಸಿದ್ದಾರೆ.

https://x.com/usopen/status/1829731427698499914

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

13 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

13 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

14 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

14 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

14 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

15 hours ago