ಕ್ರೀಡೆ

ಐಪಿಎಲ್‌ನಿಂದ ಹೊರ ಬಿದ್ದ ಬಳಿಕ ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಡಿಕೆ

ಬೆಂಗಳೂರು: ಪ್ರತಿ ವರ್ಷದಂತೆ ಈ ವರ್ಷವೂ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ತನ್ನ ಪ್ರದರ್ಶನ ತೋರಲು ವಿಫಲವಾದ ಆರ್‌ಸಿಬಿ ಈ ಬಾರಿಯೂ ತನ್ನ ಕಪ್‌ ಗೆಲ್ಲುವ ಕನಸನ್ನು ಭಗ್ನಗೊಳಿಸಿದೆ. ಪ್ಲೇಆಫ್‌ಗೆ ಒಂದೇ ಮೆಟ್ಟಿಲು ಎಂಬಂತಿದ್ದ ಪಂದ್ಯದಲ್ಲಿ ಆರ್‌ಸಿಬಿ ಎಡವಿದರೂ ಈ ಪಂದ್ಯಾಕೂಟದ ಆರಂಭದಿಂದಲೂ ತನ್ನ ನಿರೀಕ್ಷಿತ ಮಟ್ಟದ ಆಟವನ್ನು ಪ್ರದರ್ಶಿಸುವಲ್ಲಿ ವಿಫಲವಾಗಿತ್ತು.

ಆರ್‌ಸಿಬಿ ಒಂದು ತಂಡವಾಗಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲವಾದರೂ ಆರ್‌ಸಿಬಿ ತಂಡದ ಬ್ಯಾಟ್ಸ್‌ಮ್ಯಾನ್‌ಗಳ ಪೈಕಿ ಪ್ರಚಂಡ ಫಾರ್ಮ್‌ನಲ್ಲಿದ್ದ ನಾಯಕ ಫಾಫ್‌, ಕೊಹ್ಲಿ ಮತ್ತು ಮ್ಯಾಕ್ಸಿ ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಈ ಬಾರಿಯಾದರೂ ತಂಡ ಟ್ರೋಫಿ ಗೆಲ್ಲುವ ಕನಸು ಅಭಿಮಾನಿಗಳಲ್ಲಿ ಗರಿಗೆದರುವಂತೆ ಮಾಡಿದ್ದರು. ಬೌಲಿಂಗ್‌ ವಿಭಾಗದಲ್ಲಿ ಯಶಸ್ವಿ ಎನಿಸಿದ್ದು ಸಿರಾಜ್‌ ಮಾತ್ರ.

ಆದರೂ ತಂಡದ ಆಟಗಾರರ ಪೈಕಿ ಒಬ್ಬರಾಗಿರುವ ದಿನೇಶ್‌ ಕಾರ್ತಿಕ್‌ ಅವರು ಅಭಿಮಾನಿಗಳಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ. ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಅತ್ಯಂತ ನಿರಾಶಾದಾಯಕ ಪ್ರದರ್ಶನ ನೀಡಿದ್ದ ಡಿಕೆ ಅಭಿಮಾನಿಗಳಿಗೆ ತನ್ನ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಋತುವಿನಲ್ಲಿ ಆರ್‌ಸಿಬಿ ಪರ ಒಟ್ಟು 13 ಪಂದ್ಯಗಳನ್ನಾಡಿರುವ ಡಿಕೆಯ ಬ್ಯಾಟ್‌ನಿಂದ ಸಿಡಿದಿದ್ದು ಕೇವಲ 140 ರನ್‌. ಸರಾಸರಿ ಕೇವಲ 11.67. ಮಿಡ್‌ ಆರ್ಡರ್‌ನಲ್ಲಿ ಸ್ಪೋಟಕ ಪ್ರದರ್ಶನ ನೀಡುವ ದಿನೇಶ್‌ ಕಾರ್ತಿಕ್‌ ಅವರ ಸತತ ವೈಫಲ್ಯವೇ ತಂಡಕ್ಕೆ ದೊಡ್ಡ ಹೊಡೆತ ನೀಡಿತ್ತು. ಪ್ಲೇ ಆಫ್‌ಗೂ ಹೆಜ್ಜೆಯಿಡದ ಆರ್‌ಸಿಬಿ ಟೂರ್ನಿಯಿಂದಲೇ ಹೊರಬಿದ್ದ ಬಳಿಕ ದಿನೇಶ್‌ ಕಾರ್ತಿಕ್‌ ಈ ಬಗ್ಗೆ ಹೇಳಿಕೊಂಡಿದ್ದಾರೆ.

ಈ ಕುರಿತು ತಮ್ಮ ಟ್ವಿಟರ್‌ ನಲ್ಲಿ ಬರೆದುಕೊಂಡಿರುವ ದಿನೇಶ್‌ ಕಾರ್ತಿಕ್‌ ʻನಮಗೆ ನಿರೀಕ್ಷೆಗೆ ತಕ್ಕಂತೆ ಆಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಿತಾಂಶ ನಮ್ಮ ಪರವಾಗಿರಲಿಲ್ಲ. ಕನಸನ್ನು ತಲುಪಲು, ನಾವು ಅದನ್ನು ಮತ್ತಷ್ಟು ಅನುಸರಿಸುವುದನ್ನು ಮುಂದುವರಿಸುತ್ತೇವೆ. ಒಳ್ಳೆಯ ಮತ್ತು ಕೆಟ್ಟ ಸಮಯದಲ್ಲಿ ನಮ್ಮೊಂದಿಗಿದ್ದ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ನೀವೇ ನಮಗೆ ಸಂಪೂರ್ಣ ಜಗತ್ತುʼ ಎಂದು ಬರೆದುಕೊಂಡಿದ್ದಾರೆ.

andolanait

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

2 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

3 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

3 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

3 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago