ಕ್ರೀಡೆ

ಬೇರೆ ತಂಡಗಳ ಪರ ಕಣಕ್ಕಿಳಿದ ಭಾರತೀಯರು ಯಾರ್ಯಾರು ಗೊತ್ತಾ?

ಭಾರತದ ಮೂಲ ಆಟಗಾರರು ವಿವಿಧ ಅಂತರರಾಷ್ಟ್ರೀಯ ತಂಡಗಳನ್ನು ಪ್ರತಿನಿಧಿಸಿರುವ ಹಲವಾರು ಉದಾಹರಣೆಗಳನ್ನು ನಮ್ಮ ಕಣ್ಣಮುಂದಿದೆ. ಇದೇ ರೀತಿ 2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಮೂಲಕ ಆಟಗಾರರು ಬೇರೆ ಬೇರ ತಂಡಗಳನ್ನು ಪ್ರತಿನಿಧಿಸಿದ್ದು, ಅವರಲ್ಲಿ ಕೇಶವ್‌ ಮಹಾರಜ್‌, ರಚಿನ್‌ ರವೀಂದ್ರ ಹಾಗೂ ತೇಜಾ ನಿದಮನುರು ಈ ಬಾರಿಯ ವಿಶ್ವಕಪ್‌ನಲ್ಲಿ ಭಾಗವಹಿಸಿದ ಆಟಗಾರರಗಿದ್ದಾರೆ. ಈ ಮೂವರು ಆಟಗಾರರು ಈ ಟೂರ್ನಿಯಲ್ಲಿ ಎಷ್ಟು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ ಹಾಗೂ ಅವರ ಅಂಕಿ ಅಂಶ ಈ ಕೆಳಕಂಡಂತಿದೆ

ಹೆಸರು: ರಚಿನ್‌ ರವೀಂದ್ರ

ಜನನ: ನವೆಂಬರ್‌ 18,1999 (24 ವರ್ಷ)

ಸ್ಥಳ: ವೆಲ್ಲಿಂಗ್ಟನ್‌, ನ್ಯೂಜಿಲೆಂಡ್‌

ಪಾತ್ರ: ಬ್ಯಾಟಿಂಗ್‌ ಆಲ್‌ರೌಂಡರ್‌

ಬೆಂಗಳೂರು ಮೂಲದ ಉದ್ಯಮಿಗಳ ಮಗನಾದ ರಚಿನ್‌ ರವೀಂದ್ರ, ಈ ಬಾರಿಯ ವಿಶ್ವಕಪ್‌ನಲ್ಲಿ ತಮ್ಮೇ ಛಾಪು ಮೂಡಿಸುವ ಮೂಲಕ ವಿಶ್ವ ಕ್ರಿಕೆಟ್‌ನ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.

ವಿಶ್ವಕಪ್‌ನಲ್ಲಿ ಅತಿ ಕಡಿಮೆ ವಯಸ್ಸಿನ ಆಟಗಾರನೊಬ್ಬ ಶತಕ ಸಿಡಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅತಿ ಕಿರಿಯ ಬ್ಯಾಟರ್‌ ಒಬ್ಬರು ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ದಾಖಲೆಯು ಈ ಹಿಂದೆ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ಗೆಸರಿನಲ್ಲಿತ್ತು. ಈ ದಾಖಲೆಯನ್ನು ಮುರಿಯುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ಹೆಗ್ಗಳಿಕೆಗೆ ಉದಯೋನ್ಮುಕ ಆಟಗಾರ  ರಚಿನ್‌ ರವೀಂದ್ರ ಪಾತ್ರರಾಗಿದ್ದಾರೆ.

ಐಸಿಸಿ ವಿಶ್ವಕಪ್‌ 2023ರಲ್ಲಿ 10 ಪಂದ್ಯಗಳನ್ನು ಆಡಿದ್ದು, ಬರೋಬ್ಬರಿ 578ರನ್‌ಗಳನ್ನು ಕಲೆಹಾಕಿದ್ದಾರೆ. ಇವುಗಳಲ್ಲಿ ಭರ್ಜರಿ 3 ಶತಕಗಳು ದಾಖಲಾಗಿವೆ. ಪದಾರ್ಪಣಾ ವಿಶ್ವಕಪ್‌ ಟೂರ್ನಿಯಲ್ಲಿ 3 ಶತಕ ದಾಖಲಿಸಿದ ಹೆಗ್ಗಳಿಕೆಯೂ ರಚಿನ್‌ರ ಪಾಲಾಗಿದೆ.

ಬ್ಯಾಟಿಂಗ್‌ ಅಷ್ಟೇ ಅಲ್ಲದೇ ಬೌಲಿಂಗ್‌ನಲ್ಲಿಯೂ ಕಮಾಲ್‌ ಮಾಡಿದ ಈ ಆಟಗಾರ 5 ಪ್ರಮುಖ ವಿಕೆಟ್‌ ಪಡೆಯುವಲ್ಲಿಯೂ ಸಫಲರಾಗಿದ್ದಾರೆ.

ಹೆಸರು: ಕೇಶವ್‌ ಆತ್ಮಾನಂದ ಮಹಾರಾಜ್‌

ಜನನ; ಫೇಬ್ರವರಿ 7,1990 (33 ವರ್ಷ)

ಸ್ಥಳ: ಡರ್ಬನ್‌, ದ. ಆಫ್ರಿಕಾ

ಬೌಲಿಂಗ್‌: ಎಡಗೈ ಸ್ಪಿನ್‌ ಬೌಲರ್‌

ಭಾರತೀಯ ಮೂಲದ ಎಡಗೈ ಸ್ಪಿನ್ನರ್‌ ಕೇಶವ್‌ ಮಹಾರಾಜ್‌ ದಕ್ಷಿಣ ಆಫ್ರಿಕಾ ತಂಡವನ್ನು ಪ್ರತಿನಿಧಿಸಿದ್ದಾರೆ. ಇದುವರೆಗೆ 41 ಏಕದಿನ, 26 ಟಿ20 ಮತ್ತು 49 ಟೆಸ್ಟ್‌ ಪಂದ್ಯಗಳನ್ನು ಆಡಿದ್ದಾರೆ.

ವಿಶ್ವಕಪ್‌ನಲ್ಲಿ 10 ಪಂದ್ಯಗಳಲ್ಲಿ 15 ವಿಕೆಟ್‌ ಪಡೆದು ದಕ್ಷಿಣ ಆಫ್ರಿಕಾ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಸೆಮಿಸ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ದ ಸೋತು ಚೋಕರ್ಸ್‌ ಪಟ್ಟವನ್ನು ತನನ್ನಲ್ಲಿಯೇ ಉಳಿಸಿಕೊಂಡಿದೆ.

ಹೆಸರು: ತೇಜ ನಿದಮನೂರು

ಜನನ: ಆಗಸ್ಟ್‌ 22, 1994

ಸ್ಥಳ: ವಿಜಯವಾಡ, ಆಂಧ್ರಪ್ರದೇಶ್‌

ಆಂಧ್ರ ಮೂಲದ ಬಲಗೈ ದಾಂಡಿಗ ತೇಜ ಅವರು, ನೆದರ್‌ಲೆಂಡ್ಸ್‌ಪರ 27 ಏಕದಿನ ಹಾಗೂ 6 ಟಿ20 ಪಂದ್ಯಗಳಲ್ಲಿ ಆಡಿದ್ದು, ವಿಶ್ವಕಪ್‌ನಲ್ಲಿ ಒಟ್ಟು 10 ಪಂದ್ಯಗಳಿಂದ ಒಂದು ಅರ್ಧ ಶತಕ ಸಹಿತ 174ರನ್‌ ಬಾರಿಸಿದ್ದಾರೆ.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

58 seconds ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago