ಕ್ರೀಡೆ

ಭಾರತ ಸೋತಿದಕ್ಕೆ ನೊಂದ ಅಭಿಮಾನಿಗಳು ಮಾಡಿದ್ದೇನು ಗೊತ್ತಾ?

ಮೈಸೂರು : ಈ ಬಾರಿಯ ವಿಶ್ವಕಪ್ ನಲ್ಲಿ ಅಜೇಯ ಓಟ ಸಾಧಿಸಿದ್ದ ಭಾರತ ತಂಡ ಫೈನಲ್‌ನಲ್ಲಿ ಆಸೀಸ್‌ ವಿರುದ್ಧ ಮುಗ್ಗರಿಸಿ ಟ್ರೋಫಿ ಕೈಚೆಲ್ಲಿದ್ದಾರೆ.

ಆ ಮೂಲಕ ೧೨ ವರ್ಷಗಳ ಟ್ರೋಫಿ ಗೆಲ್ಲುವ  ಕನಸು ಮತ್ತೆ ಕನಸಾಗಿಯೇ ಉಳಿಯಿತು.

ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ  ತಂಡ ಭಾರತೀಯ ನೆಲದಲ್ಲಿ ವಿಶ್ವಕಪ್ ಗೆದ್ದುಕೊಂಡಿತು. ಇದು ಅವರ ಆರನೇ ಪ್ರಶಸ್ತಿಯಾಗಿದೆ. ಇದೇ ವರ್ಷ ಭಾರತ ತಂಡ ಆಸೀಸ್‌ ವಿರುದ್ಧವೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿಯೂ ಸೋತಿತ್ತು. ಇದೇ ವೇಳೆ ಭಾರತ ವಿಶ್ವಕಪ್ ಗೆಲ್ಲುತ್ತದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು.

ಆದರೆ ಭಾರತೀಯ ಅಭಿಮಾನಿಗಳ ಕನಸು ಭಗ್ನಗೊಂಡ ನಂತರ ಅಭಿಮಾನಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಬೇಸರದ ವಿಡಿಯೋಗಳು ಸಾಕಷ್ಟು ವೈರಲ್‌ ಆಗುತ್ತಿದೆ.

ಭಾರತ ಸೋತಿದಕ್ಕೆ ಟಿವಿ ಒಡೆದ ಅಭಿಮಾನಿ: ಭಾರತದ ಸೋಲಿನ ನಂತರ ಟಿವಿ ಒಡೆದ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಸ್ಟ್ರೇಲಿಯ ಪಂದ್ಯವನ್ನು ಗೆದ್ದ ತಕ್ಷಣ, ಅವರ ಆಟಗಾರರು ಹರ್ಷೋದ್ಗಾರ ಮಾಡುತ್ತಾ ಕ್ರೀಡಾಂಗಣಕ್ಕೆ ಓಡಿಹೋದದ್ದನ್ನು ಟಿವಿಯಲ್ಲಿ ನೋಡುತ್ತಿದ್ದ ಅಭಿಮಾನಿ ಬಳಿಕ ಟಿವಿಯನ್ನು ಮನೆಯಿಂದ ಹೊರಗೆ ತೆಗೆದ ಜೋರಾಗಿ ನೆಲಕ್ಕೆ ಹಾಕಿ ಬಳಿಕ ದೊಣ್ಣೆಯಿಂದ ಟಿವಿ ಒಡೆದಿದ್ದಾನೆ.

ಅಷ್ಟರಲ್ಲಿ ಅವನ ಹಿಂದೆ ಯಾರೋ ‘ಹೇ ಮ್ಯಾನ್ 60 ಸಾವಿರ ಟಿವಿ’ ಅನ್ನುವುದು ಕೇಳಿಸುತ್ತದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸೋಲಿಗೆ ಕಣ್ಣಿರಿಟ್ಟ ಚಿಣ್ಣರಿ:  ಭಾರತದ ಸೋಲಿಗೆ ಚಿಕ್ಕ ಮಗು ಅಳುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಸದ್ಯ ಈ ವಿಡಿಯೋ ಅಂತರ್ಜಾಲದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಸೋಲಿಗೆ ಅವರ ತಾಯಿ ಮಗುವಿನ ಕಣ್ಣೀರು ಒರೆಸಿ ಸಾಂತ್ವನ ಹೇಳುತ್ತಿರುವುದು ಕಂಡು ಬಂದಿದೆ.

ಇಬ್ಬರು ಅಭಿಮಾನಿ ಸಾವು : ಇದಕ್ಕೂ ದೊಡ್ಡ ದುರಂತವೆಂದರೆ, ವಿಶ್ವಕಪ್‌ನಲ್ಲಿ ಭಾರತದ ಸೋಲುತ್ತಿದ್ದಂತೆ ಇಬ್ಬರು ಟೀಂ ಇಂಡಿಯಾ ಅಭಿಮಾನಿಗಳ ಸಾವಾಗಿದೆ. ತಿರುಪತಿಯ ಗ್ರಾಮಾಂತರ ಮಂಡಲ ದುರ್ಗಸಮುದ್ರದ ಜ್ಯೋತಿ ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಭಾರತ ಸೋತ ನಂತರ ಬಂಕುರಾದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಕುರಾದ ಬೆಲಿಯತೋರ್‌ನ ರಾಹುಲ್ ಲೋಹರ್ (23) ಎಂಬ ಯುವ ಸೋಲಿನ ನನೋವನ್ನು ತಡೆದುಕೊಳ್ಳಲಾಗದೇ ಆತ್ಮಹತ್ಯ ಮಾಡಿಕೊಂಡಿದ್ದಾನೆ.

ರಾತ್ರಿ 11 ಗಂಟೆ ಸುಮಾರಿಗೆ ರಾಹುಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದ ಮೂಲಗಳು ಹೇಳಿವೆ.

https://x.com/mufaddal_vohra/status/1726421724827377853?s=20

andolanait

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

50 seconds ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

3 mins ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

4 mins ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

7 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

13 mins ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

19 mins ago