ಕ್ರೀಡೆ

ಭಾರತ ಸೋತಿದಕ್ಕೆ ನೊಂದ ಅಭಿಮಾನಿಗಳು ಮಾಡಿದ್ದೇನು ಗೊತ್ತಾ?

ಮೈಸೂರು : ಈ ಬಾರಿಯ ವಿಶ್ವಕಪ್ ನಲ್ಲಿ ಅಜೇಯ ಓಟ ಸಾಧಿಸಿದ್ದ ಭಾರತ ತಂಡ ಫೈನಲ್‌ನಲ್ಲಿ ಆಸೀಸ್‌ ವಿರುದ್ಧ ಮುಗ್ಗರಿಸಿ ಟ್ರೋಫಿ ಕೈಚೆಲ್ಲಿದ್ದಾರೆ.

ಆ ಮೂಲಕ ೧೨ ವರ್ಷಗಳ ಟ್ರೋಫಿ ಗೆಲ್ಲುವ  ಕನಸು ಮತ್ತೆ ಕನಸಾಗಿಯೇ ಉಳಿಯಿತು.

ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ  ತಂಡ ಭಾರತೀಯ ನೆಲದಲ್ಲಿ ವಿಶ್ವಕಪ್ ಗೆದ್ದುಕೊಂಡಿತು. ಇದು ಅವರ ಆರನೇ ಪ್ರಶಸ್ತಿಯಾಗಿದೆ. ಇದೇ ವರ್ಷ ಭಾರತ ತಂಡ ಆಸೀಸ್‌ ವಿರುದ್ಧವೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿಯೂ ಸೋತಿತ್ತು. ಇದೇ ವೇಳೆ ಭಾರತ ವಿಶ್ವಕಪ್ ಗೆಲ್ಲುತ್ತದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು.

ಆದರೆ ಭಾರತೀಯ ಅಭಿಮಾನಿಗಳ ಕನಸು ಭಗ್ನಗೊಂಡ ನಂತರ ಅಭಿಮಾನಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಬೇಸರದ ವಿಡಿಯೋಗಳು ಸಾಕಷ್ಟು ವೈರಲ್‌ ಆಗುತ್ತಿದೆ.

ಭಾರತ ಸೋತಿದಕ್ಕೆ ಟಿವಿ ಒಡೆದ ಅಭಿಮಾನಿ: ಭಾರತದ ಸೋಲಿನ ನಂತರ ಟಿವಿ ಒಡೆದ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಸ್ಟ್ರೇಲಿಯ ಪಂದ್ಯವನ್ನು ಗೆದ್ದ ತಕ್ಷಣ, ಅವರ ಆಟಗಾರರು ಹರ್ಷೋದ್ಗಾರ ಮಾಡುತ್ತಾ ಕ್ರೀಡಾಂಗಣಕ್ಕೆ ಓಡಿಹೋದದ್ದನ್ನು ಟಿವಿಯಲ್ಲಿ ನೋಡುತ್ತಿದ್ದ ಅಭಿಮಾನಿ ಬಳಿಕ ಟಿವಿಯನ್ನು ಮನೆಯಿಂದ ಹೊರಗೆ ತೆಗೆದ ಜೋರಾಗಿ ನೆಲಕ್ಕೆ ಹಾಕಿ ಬಳಿಕ ದೊಣ್ಣೆಯಿಂದ ಟಿವಿ ಒಡೆದಿದ್ದಾನೆ.

ಅಷ್ಟರಲ್ಲಿ ಅವನ ಹಿಂದೆ ಯಾರೋ ‘ಹೇ ಮ್ಯಾನ್ 60 ಸಾವಿರ ಟಿವಿ’ ಅನ್ನುವುದು ಕೇಳಿಸುತ್ತದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸೋಲಿಗೆ ಕಣ್ಣಿರಿಟ್ಟ ಚಿಣ್ಣರಿ:  ಭಾರತದ ಸೋಲಿಗೆ ಚಿಕ್ಕ ಮಗು ಅಳುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಸದ್ಯ ಈ ವಿಡಿಯೋ ಅಂತರ್ಜಾಲದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಸೋಲಿಗೆ ಅವರ ತಾಯಿ ಮಗುವಿನ ಕಣ್ಣೀರು ಒರೆಸಿ ಸಾಂತ್ವನ ಹೇಳುತ್ತಿರುವುದು ಕಂಡು ಬಂದಿದೆ.

ಇಬ್ಬರು ಅಭಿಮಾನಿ ಸಾವು : ಇದಕ್ಕೂ ದೊಡ್ಡ ದುರಂತವೆಂದರೆ, ವಿಶ್ವಕಪ್‌ನಲ್ಲಿ ಭಾರತದ ಸೋಲುತ್ತಿದ್ದಂತೆ ಇಬ್ಬರು ಟೀಂ ಇಂಡಿಯಾ ಅಭಿಮಾನಿಗಳ ಸಾವಾಗಿದೆ. ತಿರುಪತಿಯ ಗ್ರಾಮಾಂತರ ಮಂಡಲ ದುರ್ಗಸಮುದ್ರದ ಜ್ಯೋತಿ ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಭಾರತ ಸೋತ ನಂತರ ಬಂಕುರಾದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಕುರಾದ ಬೆಲಿಯತೋರ್‌ನ ರಾಹುಲ್ ಲೋಹರ್ (23) ಎಂಬ ಯುವ ಸೋಲಿನ ನನೋವನ್ನು ತಡೆದುಕೊಳ್ಳಲಾಗದೇ ಆತ್ಮಹತ್ಯ ಮಾಡಿಕೊಂಡಿದ್ದಾನೆ.

ರಾತ್ರಿ 11 ಗಂಟೆ ಸುಮಾರಿಗೆ ರಾಹುಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದ ಮೂಲಗಳು ಹೇಳಿವೆ.

https://x.com/mufaddal_vohra/status/1726421724827377853?s=20

andolanait

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

2 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

2 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

2 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

2 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

11 hours ago