ಕ್ರೀಡೆ

ಭಾರತ ಸೋತಿದಕ್ಕೆ ನೊಂದ ಅಭಿಮಾನಿಗಳು ಮಾಡಿದ್ದೇನು ಗೊತ್ತಾ?

ಮೈಸೂರು : ಈ ಬಾರಿಯ ವಿಶ್ವಕಪ್ ನಲ್ಲಿ ಅಜೇಯ ಓಟ ಸಾಧಿಸಿದ್ದ ಭಾರತ ತಂಡ ಫೈನಲ್‌ನಲ್ಲಿ ಆಸೀಸ್‌ ವಿರುದ್ಧ ಮುಗ್ಗರಿಸಿ ಟ್ರೋಫಿ ಕೈಚೆಲ್ಲಿದ್ದಾರೆ.

ಆ ಮೂಲಕ ೧೨ ವರ್ಷಗಳ ಟ್ರೋಫಿ ಗೆಲ್ಲುವ  ಕನಸು ಮತ್ತೆ ಕನಸಾಗಿಯೇ ಉಳಿಯಿತು.

ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ  ತಂಡ ಭಾರತೀಯ ನೆಲದಲ್ಲಿ ವಿಶ್ವಕಪ್ ಗೆದ್ದುಕೊಂಡಿತು. ಇದು ಅವರ ಆರನೇ ಪ್ರಶಸ್ತಿಯಾಗಿದೆ. ಇದೇ ವರ್ಷ ಭಾರತ ತಂಡ ಆಸೀಸ್‌ ವಿರುದ್ಧವೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿಯೂ ಸೋತಿತ್ತು. ಇದೇ ವೇಳೆ ಭಾರತ ವಿಶ್ವಕಪ್ ಗೆಲ್ಲುತ್ತದೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು.

ಆದರೆ ಭಾರತೀಯ ಅಭಿಮಾನಿಗಳ ಕನಸು ಭಗ್ನಗೊಂಡ ನಂತರ ಅಭಿಮಾನಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಬೇಸರದ ವಿಡಿಯೋಗಳು ಸಾಕಷ್ಟು ವೈರಲ್‌ ಆಗುತ್ತಿದೆ.

ಭಾರತ ಸೋತಿದಕ್ಕೆ ಟಿವಿ ಒಡೆದ ಅಭಿಮಾನಿ: ಭಾರತದ ಸೋಲಿನ ನಂತರ ಟಿವಿ ಒಡೆದ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಸ್ಟ್ರೇಲಿಯ ಪಂದ್ಯವನ್ನು ಗೆದ್ದ ತಕ್ಷಣ, ಅವರ ಆಟಗಾರರು ಹರ್ಷೋದ್ಗಾರ ಮಾಡುತ್ತಾ ಕ್ರೀಡಾಂಗಣಕ್ಕೆ ಓಡಿಹೋದದ್ದನ್ನು ಟಿವಿಯಲ್ಲಿ ನೋಡುತ್ತಿದ್ದ ಅಭಿಮಾನಿ ಬಳಿಕ ಟಿವಿಯನ್ನು ಮನೆಯಿಂದ ಹೊರಗೆ ತೆಗೆದ ಜೋರಾಗಿ ನೆಲಕ್ಕೆ ಹಾಕಿ ಬಳಿಕ ದೊಣ್ಣೆಯಿಂದ ಟಿವಿ ಒಡೆದಿದ್ದಾನೆ.

ಅಷ್ಟರಲ್ಲಿ ಅವನ ಹಿಂದೆ ಯಾರೋ ‘ಹೇ ಮ್ಯಾನ್ 60 ಸಾವಿರ ಟಿವಿ’ ಅನ್ನುವುದು ಕೇಳಿಸುತ್ತದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸೋಲಿಗೆ ಕಣ್ಣಿರಿಟ್ಟ ಚಿಣ್ಣರಿ:  ಭಾರತದ ಸೋಲಿಗೆ ಚಿಕ್ಕ ಮಗು ಅಳುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ.

ಸದ್ಯ ಈ ವಿಡಿಯೋ ಅಂತರ್ಜಾಲದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಸೋಲಿಗೆ ಅವರ ತಾಯಿ ಮಗುವಿನ ಕಣ್ಣೀರು ಒರೆಸಿ ಸಾಂತ್ವನ ಹೇಳುತ್ತಿರುವುದು ಕಂಡು ಬಂದಿದೆ.

ಇಬ್ಬರು ಅಭಿಮಾನಿ ಸಾವು : ಇದಕ್ಕೂ ದೊಡ್ಡ ದುರಂತವೆಂದರೆ, ವಿಶ್ವಕಪ್‌ನಲ್ಲಿ ಭಾರತದ ಸೋಲುತ್ತಿದ್ದಂತೆ ಇಬ್ಬರು ಟೀಂ ಇಂಡಿಯಾ ಅಭಿಮಾನಿಗಳ ಸಾವಾಗಿದೆ. ತಿರುಪತಿಯ ಗ್ರಾಮಾಂತರ ಮಂಡಲ ದುರ್ಗಸಮುದ್ರದ ಜ್ಯೋತಿ ಕುಮಾರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಭಾರತ ಸೋತ ನಂತರ ಬಂಕುರಾದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಕುರಾದ ಬೆಲಿಯತೋರ್‌ನ ರಾಹುಲ್ ಲೋಹರ್ (23) ಎಂಬ ಯುವ ಸೋಲಿನ ನನೋವನ್ನು ತಡೆದುಕೊಳ್ಳಲಾಗದೇ ಆತ್ಮಹತ್ಯ ಮಾಡಿಕೊಂಡಿದ್ದಾನೆ.

ರಾತ್ರಿ 11 ಗಂಟೆ ಸುಮಾರಿಗೆ ರಾಹುಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದ ಮೂಲಗಳು ಹೇಳಿವೆ.

https://x.com/mufaddal_vohra/status/1726421724827377853?s=20

andolanait

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

5 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

5 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

10 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

10 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

10 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

10 hours ago