ಕ್ರೀಡೆ

ಮತ್ತೆ ಮೆಂಟರ್‌ ಆಗಿ ಕೆಕೆಆರ್‌ಗೆ ಮರಳಿದ ಗಂಭೀರ್‌ ಬಗ್ಗೆ ಕಿಂಗ್‌ ಖಾನ್‌ ಹೇಳಿದ್ದೇನು ಗೊತ್ತಾ?

೨೦೨೨ರ ಐಪಿಎಲ್‌ನ ಲಕ್ನೋ ತಂಡದ ಮೆಂಟರ್‌ ಆಗಿದ್ದ ಗೌತಮ್‌ ಗಂಭೀರ್‌ ೨೦೨೪ರ ಐಪಿಎಲ್‌ನಲ್ಲಿ ಕೆಕೆಆರ್‌ ಪ್ರಾಂಚೈಸಿಗೆ ಮತ್ತೆ ಮರಳಿದ್ದಾರೆ. ೨೦೧೨ ಮತ್ತು ೨೦೧೪ ರಲ್ಲಿ ಕೊಲ್ಕತ್ತಾ ತಂಡ ಚಾಂಪಿಯನ್‌ ಆಗಿದ್ದಾಗ ಆ ತಂಡದ ನಾಯಕರಾಗಿದ್ದ ಗೌತಮ್‌ ಗಂಭೀರ್‌ ಮತ್ತೆ ತಂಡಕ್ಕೆ ಮರಳಿದ್ದಾರೆ.

ಈ ಬಗ್ಗೆ ಬಾಲಿವುಡ್‌ ಬಾದ್‌ಷಾ ಶಾರುಖ್‌ ಖಾನ್‌ ಅವರು ಮಾತನಾಡಿದ್ದು, ಗಂಭೀರ್‌ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. “ಗೌತಮ್ ಯಾವಾಗಲೂ ನಮ್ಮ ಕುಟುಂಬದ ಭಾಗವಾಗಿದ್ದಾರೆ ಮತ್ತು ಇದು ನಮ್ಮ ಕ್ಯಾಪ್ಟನ್ ಬೇರೆ ಅವತಾರದಲ್ಲಿ ‘ಮೆಂಟರ್’ ಆಗಿ ಮನೆಗೆ ಮರಳುತ್ತಿದ್ದಾರೆ. ಅವರನ್ನು ನಾವು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆವು ಮತ್ತು ಈಗ ನಾವೆಲ್ಲರೂ ಚಂದು (ಚಂದ್ರಕಾಂತ್ ಪಂಡಿತ್) ಸರ್ ಮತ್ತು ಗೌತಮ್ ಅವರು ಕೆಕೆಆರ್ ತಂಡದೊಂದಿಗೆ ಮ್ಯಾಜಿಕ್ ಮಾಡುವುದನ್ನು ಎದುರು ನೋಡುತ್ತಿದ್ದೇವೆ. ಅವರಿಂದಾಗಿ ತಂಡದಲ್ಲಿ ಎಂದೂ ಬತ್ತದ ಉತ್ಸಾಹ ಮತ್ತು ಕ್ರೀಡಾ ಮನೋಭಾವ ಹುಟ್ಟುಹಾಕಲು ನಿರೀಕ್ಷಿಸುತ್ತಿದ್ದೇವೆ’ ಎಂದು ತಂಡದ ಸಹ-ಮಾಲೀಕ ಶಾರುಖ್ ಖಾನ್ ತಿಳಿಸಿದ್ದಾರೆ.

ನೈಟ್ ರೈಡರ್ಸ್ ಸಹಾಯಕ ಸಿಬ್ಬಂದಿಯನ್ನು ಮುನ್ನಡೆಸುವ ಕಾರ್ಯಕ್ಕೆ ಮುಖ್ಯ ಕೋಚ್ ಚಂದ್ರಕಾಂತ್ ಪಂಡಿತ್ ನೇತೃತ್ವ ವಹಿಸಿದ್ದಾರೆ. ಅಭಿಷೇಕ್ ನಾಯರ್ (ಸಹಾಯಕ ಕೋಚ್), ಜೇಮ್ಸ್ ಫೋಸ್ಟರ್ (ಸಹಾಯಕ ಕೋಚ್), ಭರತ್ ಅರುಣ್ (ಬೌಲಿಂಗ್ ಕೋಚ್) ಮತ್ತು ರಿಯಾನ್ ಟೆನ್ ಡೋಸ್ಚೇಟ್ (ಫೀಲ್ಡಿಂಗ್ ಕೋಚ್) ತಂಡವನ್ನು ಮುನ್ನಡೆಸಲ್ಲಿದ್ದಾರೆ.

೨೦೧೨ ಮತ್ತು ೨೦೧೪ರಲ್ಲಿ ತಂಡ ಗೆದ್ದಾಗ ಗಂಭೀರ್‌ ನಾಯಕರಾಗಿದ್ದರು. ೨೦೨೧ರಲ್ಲಿ ರನ್ನರ್‌ ಅಪ್‌ ಆಗಿ ಸ್ಥಾನ ಪಡೆದಿತ್ತು. ಒಟ್ಟಾರೆ ಗೌತಮ್‌ ಗಂಭಿರ್‌ ಕೆಕೆಆರ್‌ ಪರ ಆಡಿರುವ ೨೦೧೧ ರಿಂದ ೨೦೧೭ ವರೆಗೆ ಕಪ್‌ ಗೆದ್ದಿರುವುದನ್ನು ಸೇರಿ ಐದು ಬಾರಿ ಪ್ಲೇ ಆಫ್‌ಗೆ ಅರ್ಹತೆ ಪಡೆದಿತ್ತು. ಸಂಸದರಾಗಿರುವ ಗೌತಮ್‌ ಗಂಭಿರ್‌ ಫ್ರಾಂಚೈಸಿ ಮೆಂಟರ್‌ ಆಗಿದ್ದ ಇವರು ಗ್ಲೋಬಲ್‌ ಮೆಂಟರ್‌ ಹುದ್ದೆಗೆ ಏರಿದರು. ದಕ್ಷಿಣ ಆಫ್ರಿಕಾದಲ್ಲಿ ನಡೆದ SA20 ಲೀಗ್‌ನಲ್ಲಿ ಡರ್ಬನ್‌ ಸೂಪರ್‌ ಜೈಂಟ್ಸ್‌ನ ಭಾಗವಾಗಿದ್ದರು.

ಗಂಭೀರ್‌ ಹೇಳಿದ್ದೇನು? : “ನಾನು ಭಾವನಾತ್ಮಕ ವ್ಯಕ್ತಿಯಲ್ಲ ಮತ್ತು ಹೆಚ್ಚಿನ ವಿಷಯಗಳು ನನ್ನನ್ನು ವಿಚಲಿತವಾಗುವಂತೆ ಮಾಡುವುದಿಲ್ಲ. ಆದರೆ, ಇದು ವಿಭಿನ್ನವಾಗಿದೆ. ಎಲ್ಲಿಂದ ಆರಂಭವಾಯಿತೋ, ಅಲ್ಲಿಗೆ ಹಿಂತಿರುಗುತ್ತಿದ್ದೇನೆ. ಇಂದು, ನನ್ನ ಮಾತಿನಲ್ಲಿ ಉತ್ಸಾಹ ಮತ್ತು ನನ್ನ ಹೃದಯದಲ್ಲಿ ಬೆಂಕಿಯಿದೆ. ನಾನು ಮತ್ತೊಮ್ಮೆ ಆ ನೇರಳೆ ಮತ್ತು ಚಿನ್ನದ ಜರ್ಸಿಗೆ ಜಾರಿಕೊಳ್ಳುತ್ತಿದ್ದೇನೆ'”ಎಂದು ಗಂಭೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

https://x.com/GautamGambhir/status/1727207189063077902?s=20

andolanait

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

11 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago