ಕ್ರೀಡೆ

ಮತ್ತೆ ಮೆಂಟರ್‌ ಆಗಿ ಕೆಕೆಆರ್‌ಗೆ ಮರಳಿದ ಗಂಭೀರ್‌ ಬಗ್ಗೆ ಕಿಂಗ್‌ ಖಾನ್‌ ಹೇಳಿದ್ದೇನು ಗೊತ್ತಾ?

೨೦೨೨ರ ಐಪಿಎಲ್‌ನ ಲಕ್ನೋ ತಂಡದ ಮೆಂಟರ್‌ ಆಗಿದ್ದ ಗೌತಮ್‌ ಗಂಭೀರ್‌ ೨೦೨೪ರ ಐಪಿಎಲ್‌ನಲ್ಲಿ ಕೆಕೆಆರ್‌ ಪ್ರಾಂಚೈಸಿಗೆ ಮತ್ತೆ ಮರಳಿದ್ದಾರೆ. ೨೦೧೨ ಮತ್ತು ೨೦೧೪ ರಲ್ಲಿ ಕೊಲ್ಕತ್ತಾ ತಂಡ ಚಾಂಪಿಯನ್‌ ಆಗಿದ್ದಾಗ ಆ ತಂಡದ ನಾಯಕರಾಗಿದ್ದ ಗೌತಮ್‌ ಗಂಭೀರ್‌ ಮತ್ತೆ ತಂಡಕ್ಕೆ ಮರಳಿದ್ದಾರೆ.

ಈ ಬಗ್ಗೆ ಬಾಲಿವುಡ್‌ ಬಾದ್‌ಷಾ ಶಾರುಖ್‌ ಖಾನ್‌ ಅವರು ಮಾತನಾಡಿದ್ದು, ಗಂಭೀರ್‌ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. “ಗೌತಮ್ ಯಾವಾಗಲೂ ನಮ್ಮ ಕುಟುಂಬದ ಭಾಗವಾಗಿದ್ದಾರೆ ಮತ್ತು ಇದು ನಮ್ಮ ಕ್ಯಾಪ್ಟನ್ ಬೇರೆ ಅವತಾರದಲ್ಲಿ ‘ಮೆಂಟರ್’ ಆಗಿ ಮನೆಗೆ ಮರಳುತ್ತಿದ್ದಾರೆ. ಅವರನ್ನು ನಾವು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆವು ಮತ್ತು ಈಗ ನಾವೆಲ್ಲರೂ ಚಂದು (ಚಂದ್ರಕಾಂತ್ ಪಂಡಿತ್) ಸರ್ ಮತ್ತು ಗೌತಮ್ ಅವರು ಕೆಕೆಆರ್ ತಂಡದೊಂದಿಗೆ ಮ್ಯಾಜಿಕ್ ಮಾಡುವುದನ್ನು ಎದುರು ನೋಡುತ್ತಿದ್ದೇವೆ. ಅವರಿಂದಾಗಿ ತಂಡದಲ್ಲಿ ಎಂದೂ ಬತ್ತದ ಉತ್ಸಾಹ ಮತ್ತು ಕ್ರೀಡಾ ಮನೋಭಾವ ಹುಟ್ಟುಹಾಕಲು ನಿರೀಕ್ಷಿಸುತ್ತಿದ್ದೇವೆ’ ಎಂದು ತಂಡದ ಸಹ-ಮಾಲೀಕ ಶಾರುಖ್ ಖಾನ್ ತಿಳಿಸಿದ್ದಾರೆ.

ನೈಟ್ ರೈಡರ್ಸ್ ಸಹಾಯಕ ಸಿಬ್ಬಂದಿಯನ್ನು ಮುನ್ನಡೆಸುವ ಕಾರ್ಯಕ್ಕೆ ಮುಖ್ಯ ಕೋಚ್ ಚಂದ್ರಕಾಂತ್ ಪಂಡಿತ್ ನೇತೃತ್ವ ವಹಿಸಿದ್ದಾರೆ. ಅಭಿಷೇಕ್ ನಾಯರ್ (ಸಹಾಯಕ ಕೋಚ್), ಜೇಮ್ಸ್ ಫೋಸ್ಟರ್ (ಸಹಾಯಕ ಕೋಚ್), ಭರತ್ ಅರುಣ್ (ಬೌಲಿಂಗ್ ಕೋಚ್) ಮತ್ತು ರಿಯಾನ್ ಟೆನ್ ಡೋಸ್ಚೇಟ್ (ಫೀಲ್ಡಿಂಗ್ ಕೋಚ್) ತಂಡವನ್ನು ಮುನ್ನಡೆಸಲ್ಲಿದ್ದಾರೆ.

೨೦೧೨ ಮತ್ತು ೨೦೧೪ರಲ್ಲಿ ತಂಡ ಗೆದ್ದಾಗ ಗಂಭೀರ್‌ ನಾಯಕರಾಗಿದ್ದರು. ೨೦೨೧ರಲ್ಲಿ ರನ್ನರ್‌ ಅಪ್‌ ಆಗಿ ಸ್ಥಾನ ಪಡೆದಿತ್ತು. ಒಟ್ಟಾರೆ ಗೌತಮ್‌ ಗಂಭಿರ್‌ ಕೆಕೆಆರ್‌ ಪರ ಆಡಿರುವ ೨೦೧೧ ರಿಂದ ೨೦೧೭ ವರೆಗೆ ಕಪ್‌ ಗೆದ್ದಿರುವುದನ್ನು ಸೇರಿ ಐದು ಬಾರಿ ಪ್ಲೇ ಆಫ್‌ಗೆ ಅರ್ಹತೆ ಪಡೆದಿತ್ತು. ಸಂಸದರಾಗಿರುವ ಗೌತಮ್‌ ಗಂಭಿರ್‌ ಫ್ರಾಂಚೈಸಿ ಮೆಂಟರ್‌ ಆಗಿದ್ದ ಇವರು ಗ್ಲೋಬಲ್‌ ಮೆಂಟರ್‌ ಹುದ್ದೆಗೆ ಏರಿದರು. ದಕ್ಷಿಣ ಆಫ್ರಿಕಾದಲ್ಲಿ ನಡೆದ SA20 ಲೀಗ್‌ನಲ್ಲಿ ಡರ್ಬನ್‌ ಸೂಪರ್‌ ಜೈಂಟ್ಸ್‌ನ ಭಾಗವಾಗಿದ್ದರು.

ಗಂಭೀರ್‌ ಹೇಳಿದ್ದೇನು? : “ನಾನು ಭಾವನಾತ್ಮಕ ವ್ಯಕ್ತಿಯಲ್ಲ ಮತ್ತು ಹೆಚ್ಚಿನ ವಿಷಯಗಳು ನನ್ನನ್ನು ವಿಚಲಿತವಾಗುವಂತೆ ಮಾಡುವುದಿಲ್ಲ. ಆದರೆ, ಇದು ವಿಭಿನ್ನವಾಗಿದೆ. ಎಲ್ಲಿಂದ ಆರಂಭವಾಯಿತೋ, ಅಲ್ಲಿಗೆ ಹಿಂತಿರುಗುತ್ತಿದ್ದೇನೆ. ಇಂದು, ನನ್ನ ಮಾತಿನಲ್ಲಿ ಉತ್ಸಾಹ ಮತ್ತು ನನ್ನ ಹೃದಯದಲ್ಲಿ ಬೆಂಕಿಯಿದೆ. ನಾನು ಮತ್ತೊಮ್ಮೆ ಆ ನೇರಳೆ ಮತ್ತು ಚಿನ್ನದ ಜರ್ಸಿಗೆ ಜಾರಿಕೊಳ್ಳುತ್ತಿದ್ದೇನೆ'”ಎಂದು ಗಂಭೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

https://x.com/GautamGambhir/status/1727207189063077902?s=20

andolanait

Recent Posts

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

19 mins ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

45 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

2 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

3 hours ago