ಕ್ರೀಡೆ

ಮತ್ತೆ ಮೆಂಟರ್‌ ಆಗಿ ಕೆಕೆಆರ್‌ಗೆ ಮರಳಿದ ಗಂಭೀರ್‌ ಬಗ್ಗೆ ಕಿಂಗ್‌ ಖಾನ್‌ ಹೇಳಿದ್ದೇನು ಗೊತ್ತಾ?

೨೦೨೨ರ ಐಪಿಎಲ್‌ನ ಲಕ್ನೋ ತಂಡದ ಮೆಂಟರ್‌ ಆಗಿದ್ದ ಗೌತಮ್‌ ಗಂಭೀರ್‌ ೨೦೨೪ರ ಐಪಿಎಲ್‌ನಲ್ಲಿ ಕೆಕೆಆರ್‌ ಪ್ರಾಂಚೈಸಿಗೆ ಮತ್ತೆ ಮರಳಿದ್ದಾರೆ. ೨೦೧೨ ಮತ್ತು ೨೦೧೪ ರಲ್ಲಿ ಕೊಲ್ಕತ್ತಾ ತಂಡ ಚಾಂಪಿಯನ್‌ ಆಗಿದ್ದಾಗ ಆ ತಂಡದ ನಾಯಕರಾಗಿದ್ದ ಗೌತಮ್‌ ಗಂಭೀರ್‌ ಮತ್ತೆ ತಂಡಕ್ಕೆ ಮರಳಿದ್ದಾರೆ.

ಈ ಬಗ್ಗೆ ಬಾಲಿವುಡ್‌ ಬಾದ್‌ಷಾ ಶಾರುಖ್‌ ಖಾನ್‌ ಅವರು ಮಾತನಾಡಿದ್ದು, ಗಂಭೀರ್‌ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. “ಗೌತಮ್ ಯಾವಾಗಲೂ ನಮ್ಮ ಕುಟುಂಬದ ಭಾಗವಾಗಿದ್ದಾರೆ ಮತ್ತು ಇದು ನಮ್ಮ ಕ್ಯಾಪ್ಟನ್ ಬೇರೆ ಅವತಾರದಲ್ಲಿ ‘ಮೆಂಟರ್’ ಆಗಿ ಮನೆಗೆ ಮರಳುತ್ತಿದ್ದಾರೆ. ಅವರನ್ನು ನಾವು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆವು ಮತ್ತು ಈಗ ನಾವೆಲ್ಲರೂ ಚಂದು (ಚಂದ್ರಕಾಂತ್ ಪಂಡಿತ್) ಸರ್ ಮತ್ತು ಗೌತಮ್ ಅವರು ಕೆಕೆಆರ್ ತಂಡದೊಂದಿಗೆ ಮ್ಯಾಜಿಕ್ ಮಾಡುವುದನ್ನು ಎದುರು ನೋಡುತ್ತಿದ್ದೇವೆ. ಅವರಿಂದಾಗಿ ತಂಡದಲ್ಲಿ ಎಂದೂ ಬತ್ತದ ಉತ್ಸಾಹ ಮತ್ತು ಕ್ರೀಡಾ ಮನೋಭಾವ ಹುಟ್ಟುಹಾಕಲು ನಿರೀಕ್ಷಿಸುತ್ತಿದ್ದೇವೆ’ ಎಂದು ತಂಡದ ಸಹ-ಮಾಲೀಕ ಶಾರುಖ್ ಖಾನ್ ತಿಳಿಸಿದ್ದಾರೆ.

ನೈಟ್ ರೈಡರ್ಸ್ ಸಹಾಯಕ ಸಿಬ್ಬಂದಿಯನ್ನು ಮುನ್ನಡೆಸುವ ಕಾರ್ಯಕ್ಕೆ ಮುಖ್ಯ ಕೋಚ್ ಚಂದ್ರಕಾಂತ್ ಪಂಡಿತ್ ನೇತೃತ್ವ ವಹಿಸಿದ್ದಾರೆ. ಅಭಿಷೇಕ್ ನಾಯರ್ (ಸಹಾಯಕ ಕೋಚ್), ಜೇಮ್ಸ್ ಫೋಸ್ಟರ್ (ಸಹಾಯಕ ಕೋಚ್), ಭರತ್ ಅರುಣ್ (ಬೌಲಿಂಗ್ ಕೋಚ್) ಮತ್ತು ರಿಯಾನ್ ಟೆನ್ ಡೋಸ್ಚೇಟ್ (ಫೀಲ್ಡಿಂಗ್ ಕೋಚ್) ತಂಡವನ್ನು ಮುನ್ನಡೆಸಲ್ಲಿದ್ದಾರೆ.

೨೦೧೨ ಮತ್ತು ೨೦೧೪ರಲ್ಲಿ ತಂಡ ಗೆದ್ದಾಗ ಗಂಭೀರ್‌ ನಾಯಕರಾಗಿದ್ದರು. ೨೦೨೧ರಲ್ಲಿ ರನ್ನರ್‌ ಅಪ್‌ ಆಗಿ ಸ್ಥಾನ ಪಡೆದಿತ್ತು. ಒಟ್ಟಾರೆ ಗೌತಮ್‌ ಗಂಭಿರ್‌ ಕೆಕೆಆರ್‌ ಪರ ಆಡಿರುವ ೨೦೧೧ ರಿಂದ ೨೦೧೭ ವರೆಗೆ ಕಪ್‌ ಗೆದ್ದಿರುವುದನ್ನು ಸೇರಿ ಐದು ಬಾರಿ ಪ್ಲೇ ಆಫ್‌ಗೆ ಅರ್ಹತೆ ಪಡೆದಿತ್ತು. ಸಂಸದರಾಗಿರುವ ಗೌತಮ್‌ ಗಂಭಿರ್‌ ಫ್ರಾಂಚೈಸಿ ಮೆಂಟರ್‌ ಆಗಿದ್ದ ಇವರು ಗ್ಲೋಬಲ್‌ ಮೆಂಟರ್‌ ಹುದ್ದೆಗೆ ಏರಿದರು. ದಕ್ಷಿಣ ಆಫ್ರಿಕಾದಲ್ಲಿ ನಡೆದ SA20 ಲೀಗ್‌ನಲ್ಲಿ ಡರ್ಬನ್‌ ಸೂಪರ್‌ ಜೈಂಟ್ಸ್‌ನ ಭಾಗವಾಗಿದ್ದರು.

ಗಂಭೀರ್‌ ಹೇಳಿದ್ದೇನು? : “ನಾನು ಭಾವನಾತ್ಮಕ ವ್ಯಕ್ತಿಯಲ್ಲ ಮತ್ತು ಹೆಚ್ಚಿನ ವಿಷಯಗಳು ನನ್ನನ್ನು ವಿಚಲಿತವಾಗುವಂತೆ ಮಾಡುವುದಿಲ್ಲ. ಆದರೆ, ಇದು ವಿಭಿನ್ನವಾಗಿದೆ. ಎಲ್ಲಿಂದ ಆರಂಭವಾಯಿತೋ, ಅಲ್ಲಿಗೆ ಹಿಂತಿರುಗುತ್ತಿದ್ದೇನೆ. ಇಂದು, ನನ್ನ ಮಾತಿನಲ್ಲಿ ಉತ್ಸಾಹ ಮತ್ತು ನನ್ನ ಹೃದಯದಲ್ಲಿ ಬೆಂಕಿಯಿದೆ. ನಾನು ಮತ್ತೊಮ್ಮೆ ಆ ನೇರಳೆ ಮತ್ತು ಚಿನ್ನದ ಜರ್ಸಿಗೆ ಜಾರಿಕೊಳ್ಳುತ್ತಿದ್ದೇನೆ'”ಎಂದು ಗಂಭೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

https://x.com/GautamGambhir/status/1727207189063077902?s=20

andolanait

Recent Posts

ಜೆಫ್ರಿ ಜತೆ ಸಂಪರ್ಕ : ಬ್ರಿಟನ್‌ ಮಾಜಿ ರಾಜಕುಮಾರ ಆ್ಯಂಡ್ರೂ ಬಂಧನ

ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…

9 mins ago

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

24 mins ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

38 mins ago

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

3 hours ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

3 hours ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

3 hours ago