ಕ್ರೀಡೆ

ಮತ್ತೆ ಮೆಂಟರ್‌ ಆಗಿ ಕೆಕೆಆರ್‌ಗೆ ಮರಳಿದ ಗಂಭೀರ್‌ ಬಗ್ಗೆ ಕಿಂಗ್‌ ಖಾನ್‌ ಹೇಳಿದ್ದೇನು ಗೊತ್ತಾ?

೨೦೨೨ರ ಐಪಿಎಲ್‌ನ ಲಕ್ನೋ ತಂಡದ ಮೆಂಟರ್‌ ಆಗಿದ್ದ ಗೌತಮ್‌ ಗಂಭೀರ್‌ ೨೦೨೪ರ ಐಪಿಎಲ್‌ನಲ್ಲಿ ಕೆಕೆಆರ್‌ ಪ್ರಾಂಚೈಸಿಗೆ ಮತ್ತೆ ಮರಳಿದ್ದಾರೆ. ೨೦೧೨ ಮತ್ತು ೨೦೧೪ ರಲ್ಲಿ ಕೊಲ್ಕತ್ತಾ ತಂಡ ಚಾಂಪಿಯನ್‌ ಆಗಿದ್ದಾಗ ಆ ತಂಡದ ನಾಯಕರಾಗಿದ್ದ ಗೌತಮ್‌ ಗಂಭೀರ್‌ ಮತ್ತೆ ತಂಡಕ್ಕೆ ಮರಳಿದ್ದಾರೆ.

ಈ ಬಗ್ಗೆ ಬಾಲಿವುಡ್‌ ಬಾದ್‌ಷಾ ಶಾರುಖ್‌ ಖಾನ್‌ ಅವರು ಮಾತನಾಡಿದ್ದು, ಗಂಭೀರ್‌ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. “ಗೌತಮ್ ಯಾವಾಗಲೂ ನಮ್ಮ ಕುಟುಂಬದ ಭಾಗವಾಗಿದ್ದಾರೆ ಮತ್ತು ಇದು ನಮ್ಮ ಕ್ಯಾಪ್ಟನ್ ಬೇರೆ ಅವತಾರದಲ್ಲಿ ‘ಮೆಂಟರ್’ ಆಗಿ ಮನೆಗೆ ಮರಳುತ್ತಿದ್ದಾರೆ. ಅವರನ್ನು ನಾವು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆವು ಮತ್ತು ಈಗ ನಾವೆಲ್ಲರೂ ಚಂದು (ಚಂದ್ರಕಾಂತ್ ಪಂಡಿತ್) ಸರ್ ಮತ್ತು ಗೌತಮ್ ಅವರು ಕೆಕೆಆರ್ ತಂಡದೊಂದಿಗೆ ಮ್ಯಾಜಿಕ್ ಮಾಡುವುದನ್ನು ಎದುರು ನೋಡುತ್ತಿದ್ದೇವೆ. ಅವರಿಂದಾಗಿ ತಂಡದಲ್ಲಿ ಎಂದೂ ಬತ್ತದ ಉತ್ಸಾಹ ಮತ್ತು ಕ್ರೀಡಾ ಮನೋಭಾವ ಹುಟ್ಟುಹಾಕಲು ನಿರೀಕ್ಷಿಸುತ್ತಿದ್ದೇವೆ’ ಎಂದು ತಂಡದ ಸಹ-ಮಾಲೀಕ ಶಾರುಖ್ ಖಾನ್ ತಿಳಿಸಿದ್ದಾರೆ.

ನೈಟ್ ರೈಡರ್ಸ್ ಸಹಾಯಕ ಸಿಬ್ಬಂದಿಯನ್ನು ಮುನ್ನಡೆಸುವ ಕಾರ್ಯಕ್ಕೆ ಮುಖ್ಯ ಕೋಚ್ ಚಂದ್ರಕಾಂತ್ ಪಂಡಿತ್ ನೇತೃತ್ವ ವಹಿಸಿದ್ದಾರೆ. ಅಭಿಷೇಕ್ ನಾಯರ್ (ಸಹಾಯಕ ಕೋಚ್), ಜೇಮ್ಸ್ ಫೋಸ್ಟರ್ (ಸಹಾಯಕ ಕೋಚ್), ಭರತ್ ಅರುಣ್ (ಬೌಲಿಂಗ್ ಕೋಚ್) ಮತ್ತು ರಿಯಾನ್ ಟೆನ್ ಡೋಸ್ಚೇಟ್ (ಫೀಲ್ಡಿಂಗ್ ಕೋಚ್) ತಂಡವನ್ನು ಮುನ್ನಡೆಸಲ್ಲಿದ್ದಾರೆ.

೨೦೧೨ ಮತ್ತು ೨೦೧೪ರಲ್ಲಿ ತಂಡ ಗೆದ್ದಾಗ ಗಂಭೀರ್‌ ನಾಯಕರಾಗಿದ್ದರು. ೨೦೨೧ರಲ್ಲಿ ರನ್ನರ್‌ ಅಪ್‌ ಆಗಿ ಸ್ಥಾನ ಪಡೆದಿತ್ತು. ಒಟ್ಟಾರೆ ಗೌತಮ್‌ ಗಂಭಿರ್‌ ಕೆಕೆಆರ್‌ ಪರ ಆಡಿರುವ ೨೦೧೧ ರಿಂದ ೨೦೧೭ ವರೆಗೆ ಕಪ್‌ ಗೆದ್ದಿರುವುದನ್ನು ಸೇರಿ ಐದು ಬಾರಿ ಪ್ಲೇ ಆಫ್‌ಗೆ ಅರ್ಹತೆ ಪಡೆದಿತ್ತು. ಸಂಸದರಾಗಿರುವ ಗೌತಮ್‌ ಗಂಭಿರ್‌ ಫ್ರಾಂಚೈಸಿ ಮೆಂಟರ್‌ ಆಗಿದ್ದ ಇವರು ಗ್ಲೋಬಲ್‌ ಮೆಂಟರ್‌ ಹುದ್ದೆಗೆ ಏರಿದರು. ದಕ್ಷಿಣ ಆಫ್ರಿಕಾದಲ್ಲಿ ನಡೆದ SA20 ಲೀಗ್‌ನಲ್ಲಿ ಡರ್ಬನ್‌ ಸೂಪರ್‌ ಜೈಂಟ್ಸ್‌ನ ಭಾಗವಾಗಿದ್ದರು.

ಗಂಭೀರ್‌ ಹೇಳಿದ್ದೇನು? : “ನಾನು ಭಾವನಾತ್ಮಕ ವ್ಯಕ್ತಿಯಲ್ಲ ಮತ್ತು ಹೆಚ್ಚಿನ ವಿಷಯಗಳು ನನ್ನನ್ನು ವಿಚಲಿತವಾಗುವಂತೆ ಮಾಡುವುದಿಲ್ಲ. ಆದರೆ, ಇದು ವಿಭಿನ್ನವಾಗಿದೆ. ಎಲ್ಲಿಂದ ಆರಂಭವಾಯಿತೋ, ಅಲ್ಲಿಗೆ ಹಿಂತಿರುಗುತ್ತಿದ್ದೇನೆ. ಇಂದು, ನನ್ನ ಮಾತಿನಲ್ಲಿ ಉತ್ಸಾಹ ಮತ್ತು ನನ್ನ ಹೃದಯದಲ್ಲಿ ಬೆಂಕಿಯಿದೆ. ನಾನು ಮತ್ತೊಮ್ಮೆ ಆ ನೇರಳೆ ಮತ್ತು ಚಿನ್ನದ ಜರ್ಸಿಗೆ ಜಾರಿಕೊಳ್ಳುತ್ತಿದ್ದೇನೆ'”ಎಂದು ಗಂಭೀರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

https://x.com/GautamGambhir/status/1727207189063077902?s=20

andolanait

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

1 hour ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

2 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

2 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

2 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

2 hours ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

5 hours ago