ಕ್ರೀಡೆ

‘ನಮ್ಮ ಭಾವನೆಗಳನ್ನು ನೋಯಿಸಬೇಡಿ..’: ಧೋನಿಗೆ ಮನವಿ ಮಾಡಿದ ಹರ್ಭಜನ್

ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಐಪಿಎಲ್ 2023 ರ ಅಂತ್ಯದ ನಂತರ ಧೋನಿ ಅವರ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಾರೆ ಎಂಬ ವಿಚಾರವು ದೊಡ್ಡ ಚರ್ಚೆಯ ವಿಷಯವಾಗಿದೆ.ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಈ ಬಗ್ಗೆ ಧೋನಿಯೂ ಹಲವು ಬಾರಿ ಸುಳಿವು ನೀಡಿದ್ದಾರೆ. ಆದರೆ ಎಲ್ ಎಸ್ ಜಿ ವಿರುದ್ಧದ ಟಾಸ್ ಸಮಯದಲ್ಲಿ ಕಾಮೆಂಟೇಟರ್ ಡ್ಯಾನಿ ಮಾರಿಸನ್ ಅವರು ನಿವೃತ್ತಿಯ ಬಗ್ಗೆ ಕೇಳಿದಾಗ, ಧೋನಿ ಐಪಿಎಲ್ 2023 ಅವರ ಕೊನೆಯ ಋತುವಿನ ಬಗ್ಗೆ ಎಂದಿಗೂ ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿರುವ ಹರ್ಭಜನ್ ಸಿಂಗ್, ಧೋನಿ ಇನ್ನೂ ಕೆಲವು ದೊಡ್ಡ ಶಾಟ್‌ಗಳು ಮತ್ತು ತ್ವರಿತ ಸಿಂಗಲ್‌ಗಳನ್ನು ಹೊಡೆಯುವ ಮೂಲಕ ತಮ್ಮ ಹಳೆಯ ವರ್ಶನ್ ನಂತೆ ಕಾಣುತ್ತಿದ್ದಾರೆ ಎಂದು ಹೇಳಿದರು.

“ಅವರು ತನ್ನ ಪೂರ್ಣ ವೇಗದಲ್ಲಿ ಓಡದಿದ್ದರೂ, ಸಿಕ್ಸರ್‌ಗಳನ್ನು ಸರಾಗವಾಗಿ ಹೊಡೆಯುತ್ತಿದ್ದಾರೆ. ಬ್ಯಾಟ್‌ ನೊಂದಿಗೆ ಇನ್ನೂ ಅಪಾಯಕಾರಿಯಾಗಿ ಕಾಣಿಸುತ್ತಿದ್ದಾರೆ. ಎಂಎಸ್ ಡಿ, ನಮ್ಮ ಭಾವನೆಗಳನ್ನು ನೋಯಿಸಬೇಡಿ. ನೀವು ಆಟ ಮುಂದುವರಿಸಬೇಕು” ಎಂದು ಹರ್ಭಜನ್ ಹೇಳಿದ್ದಾರೆ.

andolanait

Recent Posts

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…

16 mins ago

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿ

ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…

31 mins ago

ಏಪ್ರಿಲ್.‌15ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.‌15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

44 mins ago

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…

50 mins ago

ಹೆಬ್ಜುಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ: 11 ಮಂದಿ ಸಾವು

ಬೈರುತ್‌: ಅಮೇರಿಕಾ-ಇರಾನ್‌ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ನಡೆಸಿದ ದಾಳಿಯಲ್ಲಿ 11 ಮಂದಿ…

1 hour ago

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

2 hours ago