ಕ್ರೀಡೆ

ಏಕದಿನ ಪಂದ್ಯದಲ್ಲಿ ದ್ವಿಶತಕ: ಟೀಂ ಇಂಡಿಯಾ ಆಯ್ಕೆಗಾರರ ಬಗ್ಗೆ ಯೋಚಿಸಿಲ್ಲವೆಂದ ಪೃಥ್ವಿ ಶಾ!

ಲಂಡನ್: ಕೌಂಟಿ ಮೈದಾನದಲ್ಲಿ ನಡೆದ ಸಾಮರ್‌ಸೆಟ್ ವಿರುದ್ಧದ ಏಕದಿನ ಕಪ್ ಪಂದ್ಯದಲ್ಲಿ ನಾರ್ಥಾಂಪ್ಟನ್‌ಶೈರ್‌ಗಾಗಿ ಹಲವಾರು ಲಿಸ್ಟ್ ಎ ದಾಖಲೆಗಳನ್ನು ಮುರಿದ ಟೀಮ್ ಇಂಡಿಯಾದ ಡ್ಯಾಶಿಂಗ್ ಓಪನರ್ ಪೃಥ್ವಿ ಶಾ, ಟೀಂ ಇಂಡಿಯಾ ಆಯ್ಕೆ ಸಮಿತಿಯ ಬಗ್ಗೆ ಯೋಚಿಸುತ್ತಿಲ್ಲ ಎಂದು ಹೇಳಿದರು.

ಪೃಥ್ವಿ ಶಾ ಅವರ ಬೃಹತ್ ಇನ್ನಿಂಗ್ಸ್ ಆಡಿದ್ದು 153 ಎಸೆತಗಳಲ್ಲಿ 28 ಬೌಂಡರಿ ಹಾಗೂ 11 ಸಿಕ್ಸರ್‌ಗಳ ನೆರವಿನಿಂದ 244 ರನ್ ಗಳಿಸಿದ್ದು ನಾರ್ಥಾಂಪ್ಟನ್‌ಶೈರ್ 8 ವಿಕೆಟ್‌ಗೆ 415 ರನ್ ಗಳಿಸಿ 87 ರನ್‌ಗಳ ಜಯ ಸಾಧಿಸಿತು. ಅವರ ಇನ್ನಿಂಗ್ಸ್ ಯಾವುದೇ ಲಿಸ್ಟ್ A ಪಂದ್ಯದಲ್ಲಿ ಆರನೇ ಅತಿ ಹೆಚ್ಚು ವೈಯಕ್ತಿಕ ದಾಖಲೆ ರನ್ ಆಗಿದೆ.

ಏಕದಿನದಲ್ಲಿ ದ್ವಿಶತಕ ಸಿಡಿಸಿದ ಪೃಥ್ವಿ ಶಾ : ಪೃಥ್ವಿ ಶಾ ನಾರ್ಥಾಂಪ್ಟನ್‌ಶೈರ್‌ಗೆ ಕೊನೆಯ ಎರಡು ಅವಕಾಶಗಳಲ್ಲಿ 34 ಮತ್ತು 26 ರನ್ ಗಳಿಸಿದರು. ನಂತರ ಗೇರ್ ಬದಲಾಯಿಸಿದ ಅವರು ಮೊದಲು 81 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರೈಸಿದರು. ನಂತರ ಕೇವಲ 129 ಎಸೆತಗಳಲ್ಲಿ ದ್ವಿಶತಕ ಬಾರಿಸಿದರು.

ಪೃಥ್ವಿ ಶಾ, ‘ವಾಸ್ತವವಾಗಿ ಭಾರತೀಯ ಆಯ್ಕೆದಾರರು ಏನು ಯೋಚಿಸುತ್ತಾರೆ ಎಂದು ನಾನು ಯೋಚಿಸುತ್ತಿಲ್ಲ, ಆದರೆ ನಾನು ಇಲ್ಲಿ ಉತ್ತಮ ಸಮಯವನ್ನು ಕಳೆಯಲು ಬಯಸುತ್ತೇನೆ. ಇಲ್ಲಿ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಉತ್ತಮ ಸಮಯವನ್ನು ಕಳೆಯಲು ಬಯಸುತ್ತೇನೆ. ನಾರ್ಥಾಂಪ್ಟನ್‌ಶೈರ್ ನನಗೆ ಈ ಅವಕಾಶವನ್ನು ನೀಡಿದೆ. ಅವರು ನಿಜವಾಗಿಯೂ ನನ್ನನ್ನು ನೋಡಿಕೊಳ್ಳುತ್ತಿದ್ದಾರೆ. ನಾನು ಅದನ್ನು ನಿಜವಾಗಿಯೂ ಆನಂದಿಸುತ್ತಿದ್ದೇನೆ ಎಂದರು.

ಕೆಲವೊಮ್ಮೆ ನೀವು ಅದೃಷ್ಟವಂತರಾಗಿರಬೇಕು : ಪೃಥ್ವಿ ಶಾ, ‘ಅಲ್ಲಿ ಸೂರ್ಯನ ಬೆಳಕಿತ್ತು. ಒಂದು ಮಾದರಿ ಭಾರತೀಯ ಹವಾಗುಣ ಎದುರಾದಂತೆ ಕಂಡುಬಂದಿತು. ಇದೇ ಕಾರಣಕ್ಕೆ ಇನ್‌ಸೈಡ್‌ ಎಡ್ಜ್ ಆದರೂ ಕೂಡ ನಾನು ಔಟ್‌ ಆಗಲಿಲ್ಲ. ಆನಂತರ ನಾನು ಆತ್ಮವಿಶ್ವಾಸದಿಂದ ಆಡಲು ಶುರು ಮಾಡಿದೆ. ಕೆಲವೊಮ್ಮೆ ಈ ರೀತಿಯ ಅದೃಷ್ಟ ಕೈ ಹಿಡಿಯಬೇಕಾಗುತ್ತದೆ. ಇಂದು ಅದೃಷ್ಟ ನನ್ನದಾಗಿತ್ತು. ಅದನ್ನು ಬಳಸಿಕೊಂಡೆ ಎಂದು ಹೇಳಿಕೊಂಡಿದ್ದಾರೆ.

 

194 ರನ್‌ಗಳ ಬೃಹತ್ ಜೊತೆಯಾಟ : 2021ರ ಫೆಬ್ರವರಿಯಲ್ಲಿ ನಡೆದ ವಿಜಯ್ ಹಝಾರೆ ಟ್ರೋಫಿ ವೇಳೆ ಮುಂಬೈ ತಂಡದ ಪರ ಅಬ್ಬರಿಸಿದ್ದ ಪೃಥ್ವಿ ಶಾ 152 ಎಸೆತಗಳಲ್ಲಿ 227 ರನ್‌ ಬಾರಿಸಿದ್ದರು. ಇದೀಗ ಲಿಸ್ಟ್‌ ‘ಎ’ ಕ್ರಿಕೆಟ್‌ನಲ್ಲಿನ ತಮ್ಮ ವೈಯಕ್ತಿಕ ರನ್ ಅನ್ನು ಮತ್ತಷ್ಟು ಸುಧಾರಿಸಿದ್ದಾರೆ.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

7 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

8 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

8 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

9 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago