ಕ್ರೀಡೆ

ಭಾರತ ಈ ಬಾರಿ ವಿಶ್ವಕಪ್ ಗೆಲ್ಲೋದು ಅನುಮಾನ: ಯುವರಾಜ್ ಸಿಂಗ್!

ಬೆಂಗಳೂರು: ತವರಿನ ಅಂಗಣದಲ್ಲಿ ನಡೆಯಲಿರುವ 13ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಟ್ರೋಫಿ ಗೆಲ್ಲುವ ನೆಚ್ಚಿನ ತಂಡ ಎಂದು ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಆದರೆ ಮಧ್ಯಮ ಕ್ರಮಾಂಕವನ್ನು ಬಲಿಷ್ಠಗೊಳ್ಳದಿದ್ದರೆ ರೋಹಿತ್ ಶರ್ಮಾ ಪಡೆ ಚಾಂಪಿಯನ್ ಪಟ್ಟ ಅಲಂಕರಿಸುವುದು ಅನುಮಾನ ಎಂದು ಸಿಕ್ಸರ್ ಗಳ ಸರದಾರ ಯುವರಾಜ್ ಸಿಂಗ್ ಭವಿಷ್ಯ ನುಡಿದಿದ್ದಾರೆ.

ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ಭಾರತದ ಆತಿಥ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ತನ್ನ ಅಭಿಯಾನ ಆರಂಭಿಸಿದರೆ, ಅಕ್ಟೋಬರ್ 15 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಎದುರು ಪೈಪೋಟಿ ನಡೆಸಲಿದೆ. 2011ರಲ್ಲಿ ಎಂಎಸ್‌ ಧೋನಿ ನಾಯಕತ್ವದ ಭಾರತ ತಂಡಕ್ಕೆ ಟ್ರೋಫಿ ಗೆದ್ದುಕೊಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಆಲ್‌ರೌಂಡರ್‌ ಯುವರಾಜ್ ಸಿಂಗ್, ಯುಟ್ಯೂಬ್ ವಾಹಿನಿಯ ‘ಕ್ರಿಕೆಟ್ ಬಾಸು’ ಚಾನಲ್‌ನಲ್ಲಿ ಮಾತನಾಡಿ ಭಾರತದ ಟ್ರೋಫಿ ಗೆಲುವಿನ ಸಾಧ್ಯತೆ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ಟ್ರೋಫಿ ಗೆಲ್ಲುವ ಬಗ್ಗೆ ಖಾತ್ರಿಯಿಲ್ಲ
ತವರಿನ ಅಂಗಣದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಮುಕುಟ ಅಲಂಕರಿಸುವ ಕುರಿತು ಪ್ರಸ್ತಾಪಿಸಿರುವ ಯುವಿ, “ಒಬ್ಬ ಅಪ್ಪಟ ದೇಶಪ್ರೇಮಿಯಾಗಿ ನಾನು ಕೂಡ ಟೀಮ್ ಇಂಡಿಯಾ ಚಾಂಪಿಯನ್ಸ್‌ ಪಟ್ಟ ಅಲಂಕರಿಸುವುದನ್ನು ನೋಡಲು ಬಯಸುತ್ತೇನೆ. ಆದರೆ ಭಾರತ ತಂಡ ಟ್ರೋಫಿ ಗೆದ್ದೇ ಗೆಲ್ಲುತ್ತದೆ ಎಂದು ನಾನು ನಿಸ್ಸಂದೇಹವಾಗಿ ಹೇಳಲಾರೆ, ರೋಹಿತ್ ಶರ್ಮಾ ಪಡೆ ಪಂದ್ಯಗಳನ್ನು ಗೆಲ್ಲುತ್ತದೆ ಎಂದು ಹೇಳಬಲ್ಲೆ. ಅಂದಹಾಗೆ ಭಾರತ ತಂಡವು ಗಾಯಾಳುಗಳ ಸಮಸ್ಯೆ ಎದುರಿಸುತ್ತಿದ್ದು ಮಧ್ಯಮ ಕ್ರಮಾಂಕದಲ್ಲಿ ಸಾಕಷ್ಟು ಸಮಸ್ಯೆಗಳು ಗೋಚರಿಸುತ್ತಿದೆ. ಇದರಿಂದ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲೋದು ಅನುಮಾನ,” ಎಂದು ಯುವಿ ಹೇಳಿದ್ದಾರೆ.

ರೋಹಿತ್ ಶರ್ಮಾರಂತಹ ಪ್ರಬುದ್ಧ ನಾಯಕನನ್ನು ಟೀಮ್ ಇಂಡಿಯಾ ಹೊಂದಿದೆ. ಇನ್ನು ವಿಶ್ವಕಪ್‌ ಟೂರ್ನಿಯಲ್ಲಿ ಅವರಿಗೆ ಉತ್ತಮ ಆರಂಭಿಕ ಜೊತೆಗಾರನ ಅಗತ್ಯವಿದೆ. ಆ ಆಟಗಾರನೊಂದಿಗೆ ರೋಹಿತ್‌ ಸಾಕಷ್ಟು ಪಂದ್ಯಗಳನ್ನು ಆಡುವ ಅವಶ್ಯಕತೆ ಇದೆ. ವಿಶ್ವಕಪ್‌ಗಾಗಿ 20 ಆಟಗಾರರ ತಂಡ ರೂಪಿಸಿ ಎಂದು ಸಲಹೆ ನೀಡಿದ ಯುವರಾಜ್ ಸಿಂಗ್, ಆ ಬಳಿಕ ಕೆಲ ಪೂರ್ವಸಿದ್ಧತಾ ಪಂದ್ಯಗಳನ್ನು ಆಯೋಜಿಸಿ ಬಲಿಷ್ಠ 15 ಸದಸ್ಯರ ತಂಡವನ್ನು ಘೋಷಿಸಬೇಕೆಂದಿದ್ದಾರೆ.

ಮಧ್ಯಮ ಕ್ರಮಾಂಕ ಬಲಗೊಳ್ಳಬೇಕು
“ಟೀಮ್ ಇಂಡಿಯಾದ ಟಾಪ್ ಆರ್ಡರ್ ಸಾಕಷ್ಟು ಬಲಿಷ್ಠವಾಗಿದೆ. ಆದರೆ ಮಧ್ಯಮ ಕ್ರಮಾಂಕದಲ್ಲಿ ನೂನ್ಯತೆಗಳು ಎದ್ದು ಕಾಣುತ್ತಿದೆ. ಟ್ರೋಫಿ ಗೆಲ್ಲಬೇಕಾದರೆ 4 ಮತ್ತು 5 ಕ್ರಮಾಂಕದ ಬ್ಯಾಟರ್‌ಗಳು ನಿರ್ಣಾಯಕ ಪಾತ್ರ ವಹಿಸಬೇಕು. ಉದಾಹರಣೆಗೆ ರಿಷಭ್ ಪಂತ್ ಅವರು ಐಪಿಎಲ್ ಟೂರ್ನಿಯಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಿದ್ದಾರೆ, ಟೀಮ್ ಇಂಡಿಯಾದಲ್ಲೂ ಅವರನ್ನು ಅದೇ ಕ್ರಮಾಂಕದಲ್ಲಿ ಆಡಿಸಬೇಕು. 4ನೇ ಕ್ರಮಾಂಕದ ಬ್ಯಾಟರ್ ರನ್ ಗಳಿಸುವುದನ್ನು ಮಾತ್ರ ಗುರಿಯಾಗಿಸಿಕೊಳ್ಳಬಾರದು. ಬದಲಿಗೆ ಒತ್ತಡ ನಿಭಾಯಿಸಿ ತಂಡಕ್ಕೆ ಗೆಲುವು ತಂದುಕೊಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು,” ಎಂದು ಯುವಿ ಸಲಹೆ ನೀಡಿದ್ದಾರೆ.

ರಿಂಕು ಸಿಂಗ್‌ಗೆ ಅವಕಾಶ ನೀಡಿ
ಮಧ್ಯಮ ಕ್ರಮಾಂಕದಲ್ಲಿ ತಮ್ಮ ಬ್ಯಾಟಿಂಗ್ ವೈಭವದಿಂದಲೇ ಭಾರತಕ್ಕೆ ಟಿ20, ಏಕದಿನ ಹಾಗೂ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಡಲು ಸಹಕರಿಸಿರುವ ಯುವರಾಜ್ ಸಿಂಗ್, ವಿಶ್ವಕಪ್ ಟೂರ್ನಿಯ ನಾಕೌಟ್ ಹಂತಗಳಲ್ಲಿ 4ನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾವನ್ನು ಬಲಿಷ್ಠಗೊಳಿಸಲು ಕನ್ನಡಿಗ ಕೆಎಲ್ ರಾಹುಲ್ ಹಾಗೂ ಯುವ ಆಟಗಾರ ರಿಂಕು ಸಿಂಗ್ ರಂತಹ ಸಮರ್ಥರ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.

“ರಿಂಕು ಸಿಂಗ್ ಅವರು ಅತ್ಯಮೋಘ ಬ್ಯಾಟಿಂಗ್ ಪ್ರದರ್ಶನ ತೋರುವ ಸಾಮರ್ಥ್ಯ ಹೊಂದಿದ್ದಾರೆ. ಉತ್ತಮ ಜೊತೆಯಾಟ ನೀಡುವ ಜೊತೆಗೆ ಒತ್ತಡ ಸಂದರ್ಭ ನಿಭಾಯಿಸಿ ತಂಡಕ್ಕೆ ಗೆಲುವು ತಂದುಕೊಡುವ ಜಾಣ್ಮೆ ಹೊಂದಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ನೀವು ರಿಂಕು ಸಿಂಗ್ ರನ್ನು ಆಡಿಸಲು ಯೋಚಿಸಿದರೆ ಅವನಿಗೆ ಸಾಕಷ್ಟು ಪಂದ್ಯ ಆಡುವ ಅವಕಾಶ ನೀಡಬೇಕು,” ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

andolanait

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

7 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

7 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

8 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

8 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

8 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

8 hours ago