ಕ್ರೀಡೆ

ದುಲೀಪ್‌ ಟ್ರೋಫಿ 2023: ಕೊನೆಗೂ ಪ್ರಶಸ್ತಿ ಬರ ನೀಗಿಸಿಕೊಂಡ ದಕ್ಷಿಣ ವಲಯ

ಬೆಂಗಳೂರು: ಹಲವು ವರ್ಷಗಳ ದುಲೀಪ್ ಟ್ರೋಫಿ ಪ್ರಶಸ್ತಿ ಬರವನ್ನು ಕೊನೆಗೂ ದಕ್ಷಿಣ ವಲಯ ನೀಗಿಸಿಕೊಂಡಿದ್ದು, ಪಶ್ಚಿಮ ವಲಯ ವಿರುದ್ಧದ ಫೈನಲ್ ಪಂದ್ಯದಲ್ಲಿ 75 ರನ್ ಗಳ ಜಯ ಸಾಧಿಸಿ ಪ್ರಶಸ್ತಿಗೆ ಮುತ್ತಿಟ್ಟಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುಲೀಪ್ ಟ್ರೋಫಿ ಫೈನಲ್  ಪಂದ್ಯದಲ್ಲಿ ಪಶ್ಚಿಮ ವಲಯ ತಂಡವನ್ನು 75 ರನ್​ಗಳಿಂದ ಮಣಿಸಿದ ದಕ್ಷಿಣ ವಲಯ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಸರ್ಫರಾಜ್ ಖಾನ್, ಚೇತೇಶ್ವರ್ ಪೂಜಾರರಂತಹ ಸ್ಟಾರ್ ಆಟಗಾರರ ದಂಡನ್ನೇ ಹೊಂದಿದ್ದ ಪಶ್ಚಿಮ ವಲಯ ತಂಡ ಈ ಪಂದ್ಯದ ಗೆಲ್ಲುವ ಫೆವರೆಟ್ ಎನಿಸಿಕೊಂಡಿತ್ತು. ಆದರೆ ಕನ್ನಡಿಗ ವಿಧ್ವತ್ ಕಾವೇರಪ್ಪ (Vidhwath Kaverappa) ದಾಳಿಗೆ ನಲುಗಿದ ಪ್ರಿಯಾಂಕ್ ಪಾಂಚಾಲ್ ಪಡೆ ಸುಲಭವಾಗಿ ಸೋಲೊಪ್ಪಿಕೊಂಡಿತು.

ಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯ ನೀಡಿದ 298 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಶ್ಚಿಮ ವಲಯ 222ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 75 ರನ್ ಗಳ ವಿರೋಚಿತ ಸೋಲು ಕಂಡಿತು.

ಮೊದಲ ಇನ್ನಿಂಗ್ಸ್​ನಲ್ಲೇ 67 ರನ್​ಗಳ ಹಿನ್ನಡೆ ಅನುಭವಿಸಿದ ಪಶ್ಚಿಮ ವಲಯ ತಂಡ ಎರಡನೇ ಇನ್ನಿಂಗ್ಸ್​ನಲ್ಲೂ ಮುಗ್ಗರಿಸಿತು.  ಆರಂಭಿಕ ಪೃಥ್ವಿ 7 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರೆ, ನಾಯಕನ ಇನ್ನಿಂಗ್ಸ್ ಆಡಿದ ಪ್ರಿಯಾಂಕ್ ಗೆಲುವಿಗಾಗಿ ಕೊನೆಯವರೆಗೂ ಹೋರಾಡಿ 95 ರನ್ ಬಾರಿಸಿ ಔಟಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸರ್ಫರಾಜ್ 48 ರನ್ ಗಳಿಸಿದ್ದು ಬಿಟ್ಟರೆ,  ಸೂರ್ಯ ಕುಮಾರ್ 4 ರನ್ ಹಾಗೂ ಚೇತೇಶ್ವರ್ ಪೂಜಾರ 15 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು.

ಅಂತಿಮವಾಗಿ ಪಶ್ಚಿಮ ವಲಯ ತಂಡ 222 ರನ್​ಗಳಿಗೆ ಆಲೌಟ್ ಆಗುವುದರೊಂದಿಗೆ 75 ರನ್​ಗಳ ಹೀನಾಯ ಸೋಲೊಪ್ಪಿಕೊಂಡಿತು. ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಕನ್ನಡಿಗ ವಿಧ್ವತ್ ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಹಾಗೂ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

andolanait

Recent Posts

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

22 mins ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

1 hour ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

2 hours ago

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

2 hours ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

3 hours ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

3 hours ago