ಬೆಂಗಳೂರು: ಹಲವು ವರ್ಷಗಳ ದುಲೀಪ್ ಟ್ರೋಫಿ ಪ್ರಶಸ್ತಿ ಬರವನ್ನು ಕೊನೆಗೂ ದಕ್ಷಿಣ ವಲಯ ನೀಗಿಸಿಕೊಂಡಿದ್ದು, ಪಶ್ಚಿಮ ವಲಯ ವಿರುದ್ಧದ ಫೈನಲ್ ಪಂದ್ಯದಲ್ಲಿ 75 ರನ್ ಗಳ ಜಯ ಸಾಧಿಸಿ ಪ್ರಶಸ್ತಿಗೆ ಮುತ್ತಿಟ್ಟಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಶ್ಚಿಮ ವಲಯ ತಂಡವನ್ನು 75 ರನ್ಗಳಿಂದ ಮಣಿಸಿದ ದಕ್ಷಿಣ ವಲಯ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಸರ್ಫರಾಜ್ ಖಾನ್, ಚೇತೇಶ್ವರ್ ಪೂಜಾರರಂತಹ ಸ್ಟಾರ್ ಆಟಗಾರರ ದಂಡನ್ನೇ ಹೊಂದಿದ್ದ ಪಶ್ಚಿಮ ವಲಯ ತಂಡ ಈ ಪಂದ್ಯದ ಗೆಲ್ಲುವ ಫೆವರೆಟ್ ಎನಿಸಿಕೊಂಡಿತ್ತು. ಆದರೆ ಕನ್ನಡಿಗ ವಿಧ್ವತ್ ಕಾವೇರಪ್ಪ (Vidhwath Kaverappa) ದಾಳಿಗೆ ನಲುಗಿದ ಪ್ರಿಯಾಂಕ್ ಪಾಂಚಾಲ್ ಪಡೆ ಸುಲಭವಾಗಿ ಸೋಲೊಪ್ಪಿಕೊಂಡಿತು.
ಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯ ನೀಡಿದ 298 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಶ್ಚಿಮ ವಲಯ 222ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 75 ರನ್ ಗಳ ವಿರೋಚಿತ ಸೋಲು ಕಂಡಿತು.
ಮೊದಲ ಇನ್ನಿಂಗ್ಸ್ನಲ್ಲೇ 67 ರನ್ಗಳ ಹಿನ್ನಡೆ ಅನುಭವಿಸಿದ ಪಶ್ಚಿಮ ವಲಯ ತಂಡ ಎರಡನೇ ಇನ್ನಿಂಗ್ಸ್ನಲ್ಲೂ ಮುಗ್ಗರಿಸಿತು. ಆರಂಭಿಕ ಪೃಥ್ವಿ 7 ರನ್ಗಳಿಗೆ ಬ್ಯಾಟ್ ಎತ್ತಿಟ್ಟರೆ, ನಾಯಕನ ಇನ್ನಿಂಗ್ಸ್ ಆಡಿದ ಪ್ರಿಯಾಂಕ್ ಗೆಲುವಿಗಾಗಿ ಕೊನೆಯವರೆಗೂ ಹೋರಾಡಿ 95 ರನ್ ಬಾರಿಸಿ ಔಟಾದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಸರ್ಫರಾಜ್ 48 ರನ್ ಗಳಿಸಿದ್ದು ಬಿಟ್ಟರೆ, ಸೂರ್ಯ ಕುಮಾರ್ 4 ರನ್ ಹಾಗೂ ಚೇತೇಶ್ವರ್ ಪೂಜಾರ 15 ರನ್ಗಳಿಗೆ ಪೆವಿಲಿಯನ್ ಸೇರಿಕೊಂಡರು.
ಅಂತಿಮವಾಗಿ ಪಶ್ಚಿಮ ವಲಯ ತಂಡ 222 ರನ್ಗಳಿಗೆ ಆಲೌಟ್ ಆಗುವುದರೊಂದಿಗೆ 75 ರನ್ಗಳ ಹೀನಾಯ ಸೋಲೊಪ್ಪಿಕೊಂಡಿತು. ಇನ್ನು ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಕನ್ನಡಿಗ ವಿಧ್ವತ್ ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಹಾಗೂ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…